ಬೀದರ್‌ | ರಾಜ್ಯದ ಮುಂದುವರೆದ ಜಿಲ್ಲೆಗಳ ಸಾಲಿಗೆ ಸೇರಿಸುವ ಗುರಿ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

Date:

ಸುಂದರ, ಸಮೃದ್ಧ ಬೀದರ್ ಜಿಲ್ಲೆಗಾಗಿ ಶ್ರಮಿಸಿ, ರಾಜ್ಯದ ಅತಿ ಮುಂದುವರೆದ ಐದು ಜಿಲ್ಲೆಗಳ ಸಾಲಿನಲ್ಲಿ ಸ್ಥಾನ ಪಡೆಯುವಂತೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

ನಾಗರಿಕ ಅಭಿನಂದನಾ ಸಮಿತಿಯಿಂದ ಬೀದರ್ ನಗರದ ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದರು. “ಇಬ್ಬರೂ ಸಚಿವರು, ಶಿಕ್ಷಣ, ಆರೋಗ್ಯ ಮತ್ತಿತರ ಕ್ಷೇತ್ರಗಳನ್ನು ಬಲಪಡಿಸುವ ಮೂಲಕ ಜಿಲ್ಲೆಯ ಚಿತ್ರಣ ಬದಲಾಯಿಸಲಾಗುತ್ತದೆ. ಜಿಲ್ಲೆ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದೆ. ಕಲ್ಯಾಣ ಕರ್ನಾಟಕದ ಇತರ ಜಿಲ್ಲೆಗಳಿಗೆ ಹೋಲಿಸಿದಲ್ಲಿ ಮಾನವ ಅಭಿವೃದ್ಧಿ ಸೂಚ್ಯಂಕ, ತಲಾ ಆದಾಯದಲ್ಲಿ ನಮ್ಮ ಜಿಲ್ಲೆ ಉತ್ತಮ ಸ್ಥಾನದಲ್ಲಿದೆ. ಆದರೆ, ಜಿಲ್ಲೆಯನ್ನು ರಾಜ್ಯದ ಮುಂದುವರೆದ ಜಿಲ್ಲೆಗಳ ಸಾಲಿಗೆ ಸೇರಿಸುವ ಕೆಲಸ ಆಗಬೇಕಿದೆ” ಎಂದು ಹೇಳಿದರು.

“ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿನ ವ್ಯವಸ್ಥೆಯನ್ನು ಸರಿಪಡಿಸಿ, ಅಗತ್ಯ ಮೂಲಸೌಲಭ್ಯ ಒದಗಿಸಿ, ಶಕ್ತಿ ನೀಡಲಾಗುತ್ತದೆ. ಅಭಿವೃದ್ಧಿಯ ವೇಗ ಹೆಚ್ಚಿಸುವಲ್ಲಿ ಈ ಎರಡೂ ಕ್ಷೇತ್ರಗಳ ಪಾತ್ರ ಮಹತ್ವದ್ದಾಗಿದೆ” ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದಿನ ಸರ್ಕಾರ ಬೀದರ್ ವಿಶ್ವವಿದ್ಯಾಲಯ ಘೋಷಿಸಿ ಬರೀ 2 ಕೋಟಿ ರೂ. ‌ಅನುದಾನ ನೀಡಿದೆ. ಈ ಅಲ್ಪಮೊತ್ತದಲ್ಲಿ ಹೊಸ ವಿಶ್ವವಿದ್ಯಾಲಯ ಕಟ್ಟುವುದು ಸಾಧ್ಯವಿದೆಯೇ? ನೂತನ ವಿವಿ ಸ್ಥಾಪಿಸಲು ಕನಿಷ್ಠ ₹500 ಕೋಟಿ ಅನುದಾನ ಬೇಕು. ವರ್ಷಕ್ಕೆ ಕನಿಷ್ಠ 50 ಕೋಟಿ ರೂ. ಅನುದಾನ ನೀಡಬೇಕಾಗುತ್ತದೆ” ಎಂದು ತಿಳಿಸಿದರು.

“ಶಿಕ್ಷಣ ಇಲಾಖೆಯಲ್ಲಿ ಖಾಲಿ ಹುದ್ದೆಗಳು ಹೆಚ್ಚಿವೆ. ಆರೋಗ್ಯ ಕ್ಷೇತ್ರದಲ್ಲಿ ಬಹಳಷ್ಟು ಕೆಲಸ ಆಗಬೇಕಾಗಿದೆ. ನಗರದಲ್ಲಿರುವ ಬ್ರಿಮ್ಸ್ ಆಸ್ಪತ್ರೆಯನ್ನು ಸುಧಾರಿಸಬೇಕಾಗಿದೆ. ಟ್ರಾಮಾ ಕೇರ್, ನ್ಯೂರೋ, ಕ್ಯಾಥ್‌ಲ್ಯಾಬ್ ಆರಂಭಿಸಬೇಕಾಗಿದೆ. ಸಚಿವ ರಹೀಂ ಖಾನ್ ಹಾಗೂ ಹಿರಿಯ ಅದಿಕಾರಿಗಳೊಂದಿಗೆ ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತದೆ” ಎಂದು ಹೇಳಿದರು.”

“ಕಲ್ಯಾಣ ಕರ್ನಾಟಕಕ್ಕೆ ಹಿಂದಿನ ಸರ್ಕಾರ ₹3‌,000 ಕೋಟಿ ಅನುದಾನ ನೀಡಿದ್ದಾಗಿ ಹೇಳಿತ್ತು. ಆದರೆ, ಖರ್ಚಾಗಿದ್ದು ಕೇವಲ ಶೇ.24 ರಷ್ಟು ಮಾತ್ರ” ಎಂದು ಕುಟುಕಿದ್ದು, “ನಮ್ಮ ಸರಕಾರ ₹5,000 ಕೋಟಿ ಅನುದಾನ ನೀಡಲಿದೆ. ಕಾಮಗಾರಿಗಳ ಕ್ರಿಯಾಯೋಜನೆ ರೂಪಿಸುವುದು ಸೇರಿದಂತೆ ತ್ವರಿತ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತದೆ. ಮಾರ್ಚ್ ಅಂತ್ಯದೊಳಗೆ ನಿಗದಿತ ಮೊತ್ತ ಖರ್ಚು ಮಾಡಲಾಗುತ್ತದೆ” ಎಂದರು.

ಪೌರಾಡಳಿತ ಸಚಿವ ರಹೀಂ ಖಾನ್ ಮಾತನಾಡಿ, “15 ವರ್ಷಗಳ ಅವಧಿಯಲ್ಲಿ ಬೀದರ್ ಸಾಕಷ್ಟು ಬದಲಾಗಿದೆ. ಹೊಸ ಆಸ್ಪತ್ರೆಗಳು ಆರಂಭವಾಗಿವೆ. ಶಾಲೆ-ಕಾಲೇಜು, ವಸತಿಸಹಿತ ಶಾಲೆಗಳನ್ನು ಶುರು ಮಾಡಲಾಗಿದೆ. ರಸ್ತೆ, ಕುಡಿಯುವ ನೀರು, ಚರಂಡಿ ಮುಂತಾದ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಬೀದರ್ ನಗರವನ್ನು ಸುಂದರಗೊಳಿಸುವ ಕೆಲಸ ಮಾಡಲಾಗುತ್ತದೆ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಲ್ಲಿದ್ದಲು ಕೊರತೆ; ವಿದ್ಯುತ್ ಘಟಕಗಳು ಸ್ಥಗಿತ

ಅಭಿನಂದನಾ ಭಾಷಣ ಮಾಡಿದ ಗುಲಬರ್ಗಾ ವಿವಿ ವಿಶ್ರಾಂತ ಕುಲಪತಿ ಬಿ ಜಿ ಮೂಲಿಮನಿ, “ಹೊಸ ವಿಶ್ವವಿದ್ಯಾಲಯದ ಬೆಳವಣಿಗೆಗೆ ಇಬ್ಬರೂ ಸಚಿವರು ಶ್ರಮಿಸುವ ವಿಶ್ವಾಸ ಇದೆ. ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಿ ಹಲವು ವರ್ಷ ಕಳೆದಿವೆ. ಸರ್ಕಾರ ಸಾಕಷ್ಟು ಅನುದಾನವನ್ನೂ ನೀಡಿದೆ. ಆದರೂ, ಪ್ರಾದೇಶಿಕ ಅಸಮಾನತೆ ನಿವಾರಣೆಯಾಗಿಲ್ಲ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಈ ಭಾಗ ಹಿಂದಿಯೇ ಉಳಿದಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನಾಗರಿಕ ಅಭಿನಂದನಾ ಸಮಿತಿ ಅದ್ಯಕ್ಷ ಡಾ. ಚೆನ್ನಸಬವಪ್ಪ ಹಾಲಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಪೂಜ್ಯ ಡಾ. ಬೆಲ್ದಾಳ್ ಶರಣರು, ಅನುಭವ ಮಂಟಪ ಸಂಚಾಲಕ ಶಿವಾನಂದ ದೇವರು, ಪ್ರಮುಖರುಗಳಾದ ಡಾ. ಎಸ್ ಬಲಬೀರಸಿಂಗ್, ಬಸವರಾಜ ಜಾಬಶೆಟ್ಟಿ, ಬಿ ಜಿ ಶೆಟಕಾರ್, ಡಾ. ರಜನೀಶ ವಾಲಿ, ಸಮಿತಿಯ ಸದಸ್ಯರುಗಳಾದ ಡಾ. ಗುರಮ್ಮ ಸಿದ್ದಾರೆಡ್ಡಿ, ವೈಜನಾಥ ಕಮಠಾಣೆ, ಅಮೃತರಾವ ಚಿಮಕೋಡೆ, ಡಾ.ಪೂರ್ಣಿಮಾ ಜಿ, ಗೀತಾ ಪಂಡಿತರಾವ್ ಚಿದ್ರಿ, ಶಂಕರರಾವ ಹೊನ್ನಾ, ಆನಂದ ದೇವಪ್ಪ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...