ಉಡುಪಿ | ಮೆಸ್ಕಾಂನವರೇ, ಕ್ಷಮಿಸಿ ಜೂನ್‌ನಿಂದ ನಮಗೆ ಕರೆಂಟ್‌ ಬಿಲ್‌ ಕೊಡಬೇಡಿ; ಪತ್ರ ವೈರಲ್‌

Date:

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್‌ ವಿದ್ಯುತ್‌ ಉಚಿತವಾಗಿ ನೀಡುವುದಾಗಿ ಹೇಳಿದ್ದು, ಅದರಂತೆ ಈ ಬಾರಿಯ ಚುನಾವಣೆಯಲ್ಲಿ ಬಹುಮತ ಲಭಿಸಿದೆ. ಹಲವೆಡೆ ನಾವು ವಿದ್ಯುತ್‌ ಬಿಲ್‌ ಪಾವತಿಸುವುದಿಲ್ಲ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ಉಡುಪಿಯ ವಾಸುದೇವ ಭಟ್‌ ಪೆರಂಪಳ್ಳಿ ಅವರು ವಿದ್ಯುತ್‌ ಮೀಟರ್‌ ಬೋರ್ಡ್‌ನ ಕೆಳಗೆ ಬರೆದು ಅಂಟಿಸಿರುವ ಪತ್ರವೊಂದು ವೈರಲ್‌ ಆಗಿದೆ. “ಮೆಸ್ಕಾಂನವರೇ, ಕ್ಷಮಿಸಿ ಜೂನ್‌ ತಿಂಗಳಿನಿಂದ ನಮಗೆ ಕರೆಂಟ್‌ ಬಿಲ್‌ ಕೊಡಬೇಡಿ. ನಾವು ಬಿಲ್‌ ಕಟ್ಟಲ್ಲ” ಎಂದು ಪತ್ರದಲ್ಲಿ ಬರೆಯಲಾಗಿದೆ.

ತಾವು ಪತ್ರದಲ್ಲಿ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ವಾಸುದೇವ ಭಟ್‌, “ಕಾಂಗ್ರೆಸ್‌ ತನ್ನ ನೇತೃತ್ವದ ಸರ್ಕಾರ ಬಂದರೆ ಹಲವಾರು ಉಚಿತ ಯೋಜನೆಗಳನ್ನು ನೀಡುವುದಾಗಿ ಘೋಷಿಸಿತ್ತು. ಜೂನ್‌ನಿಂದಲೇ ಉಚಿತ ವಿದ್ಯುತ್‌ ಕೊಡುವ ಯೋಜನೆ ಘೋಷಣೆಯಾಗಿದೆ. ತಾನು ಸೇರಿದಂತೆ ಯಾರೂ ಕೂಡ ವಿದ್ಯುತ್‌ ಬಿಲ್‌ ಪಾವತಿಸಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇ. 95ರಷ್ಟು ಜನ ಇದರ ಲಾಭ ಪಡೆಯಬಹುದು ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಶೇ. 95ರ ಒಳಗೆ ನಾನು ಕೂಡ ಬರುತ್ತೇನೆ. ನಾನು ಒಬ್ಬ ಫ‌ಲಾನುಭವಿ ಎಂಬುದು ದೃಢವಾಗಿರುವುದರಿಂದ ಇನ್ನು ನಾನು ಬಿಲ್‌ ಮೊತ್ತ ಪಾವತಿಸಲಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯುತ್‌ ಬಿಲ್‌ ಪಾವತಿಸಲು ನಿರಾಕರಿಸಿರುವ ಬಗ್ಗೆ ನಮಗೆ ಇದುವರೆಗೂ ಯಾವುದೇ ದೂರುಗಳು ಬಂದಿಲ್ಲ. ಸದ್ಯಕ್ಕೆ ಬಿಲ್‌ಗ‌ಳು ಪಾವತಿಯಾಗುತ್ತಿವೆ” ಎಂದು ಮೆಸ್ಕಾಂ ಅಧೀಕ್ಷಕ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಆಯ್ಕೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...