ವಿಜಯಪುರ | ಕೊಲ್ಕತ್ತಾದಲ್ಲಿ ವೈದ್ಯೆ ಕೊಲೆ ; ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಪ್ರತಿಭಟನೆ

Date:

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಹಂತಕರಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್‌ ವತಿಯಿಂದ ವಿಜಯಪುರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ನಗರದ ಗಾಂಧೀಜಿ ವೃತ್ತದಲ್ಲಿ ಡಿವಿಪಿ ನೇತ್ರತ್ವದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ ಮಾನವ ಸರಪಳಿ ನಿರ್ಮಿಸಿದರು. ಬಳಿಕ ಅಂಬೇಡ್ಕರ್‌ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ‌ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಮನವಿ ಸಲ್ಲಿಸಿದರು.

ಪ್ರತಿಭಟನೆ ಉದ್ದೇಶಿಸಿ ರೇಣುಕಾ ಅವರು ಮಾತನಾಡಿ, ʼದೇಶದ ಹೆಣ್ಣು ಮಕ್ಕಳಿಗೆ ಭದ್ರತೆ ಒದಗಿಸದ ಸರ್ಕಾರಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ. ಎಲ್ಲ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ. ಕೂಡಲೇ ಸರ್ಕಾರ ಮಹಿಳೆಯರಿಗೆ ಸುರಕ್ಷತೆಗೆ ಕಠಿಣ ಕಾನೂನು ಜಾರಿಗೊಳಿಸಬೇಕುʼ ಎಂದು ಒತ್ತಾಯಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 20 at 5.10.56 PM
ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಡಿವಿಪಿ ಜಿಲ್ಲಾ ಸಂಘಟನಾ ಸಂಚಾಲಕ ಅಕ್ಷಯಕುಮಾರ ಅಜಮನಿ ಮಾತನಾಡಿ, ʼಕೊಲ್ಕತ್ತಾದ ಆರ್ಜಿಕರ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಮಹಿಳಾ ತರಬೇತಿ ವೈದ್ಯೆ ಕೊಲೆ ನಡೆಸಿದ ಘಟನೆ ದೇಶದ ಎಲ್ಲ ವಲಯದ ಮಹಿಳೆಯರನ್ನು ಆತಂಕ ಸೃಷ್ಟಿಸಿದೆ. ಈ ಕ್ರೂರ ಕೃತ್ಯ ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಂತ್ರಸ್ತೆಯ ನ್ಯಾಯಕ್ಕಾಗಿ ವೈದ್ಯರು ಸೇರಿದಂತೆ ಎಲ್ಲರೂ ತಮ್ಮ ಕೆಲಸ ಬದಿಗೊತ್ತಿ ಪ್ರತಿಭಟನೆ ನಡೆಸುತ್ತಿದ್ದಾರೆʼ ಎಂದರು.

ʼಈ ಅಮಾನವೀಯ ಕೃತ್ಯದಿಂದ ದೇಶದ ವಿವಿಧ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರಿಗೆ ರಕ್ಷಣೆ ಆತಂಕ ಮೂಡಿಸಿದೆ. ಹತ್ಯಗೈದ ದುಷಕರ್ಮಿಗಳನ್ನು ಗಲ್ಲುಶಿಕ್ಷೆಗೆ ಒಳಪಡಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಸರ್ಕಾರ ಒಳಮೀಸಲಾತಿ ಬಗ್ಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಬೇಕು: ಉಡಚಪ್ಪ ಮಳಗಿ

ಪ್ರತಿಭಟನೆಯಲ್ಲಿ ಪ್ರಮುಖರಾದ ಮಾದೇಶ ಚಲವಾದಿ, ದಾವೂದ್ ನಾಯ್ಕೊಡಿ, ಪಂಡಿತ್ ಯಲಗೋಡ, ಸದಾಶಿವ ಹೊಸಮನಿ , ಅಕ್ಷಯ್ ಹಾದಿಮನಿ, ವಿಶಾಲ್ ಪಾಟೀಲ್, ಸುಮಾ ತಡವಲಗ, ಯಮನೂರಿ ಮಾದರ, ಅನಿಲ್ ಹೊಸಮನಿ, ಪ್ರಕಾಶ್ ಹರಿಜನ್, ಸುದೀಪ್ ಹೊಸಮನಿ, ಸುದರ್ಶನ್ ಎಂ, ರಾಜಕುಮರ್ ಹೊಸಮನಿ,ಮುಸ್ಕಾಕ್ ಮಾಮದಾಪುರ, ಅಬ್ಬಜಿತ್ ದೊಡಮನಿ, ಪ್ರಕಾಶ್ ಚಾಲವಾದಿ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...