ದೊಡ್ಡ ಹೊಸೂರು ಸತ್ಯಾಗ್ರಹ: ಕುಲಾಂತರಿ ತಳಿ ಮುಕ್ತ ದೇಶ ಎಂದು ಕೇಂದ್ರ ಸರ್ಕಾರ ಘೋಷಿಸಲು ಆಗ್ರಹ

Date:

ಕುಲಾಂತರಿ ತಳಿಯು ನಮ್ಮ ಹವಾಮಾನಕ್ಕೆ ಒಗ್ಗುವುದಿಲ್ಲ. ವೈಪರೀತ್ಯಗಳಿಗೆ ಹೊಂದಿಕೊಳ್ಳುವ ಗುಣದ ಸಾವಯವ ಕೃಷಿ ಪದ್ಧತಿ ವಿರುದ್ಧವಾಗಿದೆ. ಇದನ್ನು ನಾವು ಒಗ್ಗಟ್ಟಾಗಿ ತಡೆಯಲೇಬೇಕು. ಕುಲಾಂತರಿ ತಳಿ ಮುಕ್ತ ದೇಶ ಎಂದು ನಮ್ಮ ದೇಶವನ್ನು ಕೇಂದ್ರ ಸರ್ಕಾರ ಘೋಷಿಸಬೇಕು ಎಂದು ದೊಡ್ಡಹೊಸೂರು ಸತ್ಯಾಗ್ರಹದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ತುಮಕೂರಿನ ಹೊನ್ನುಡುಕೆ ಹ್ಯಾಂಡ್ ಪೋಸ್ಟ್ ಬಳಿ ಇರುವ ಗಾಂಧಿ ಸಹಜ ಬೇಸಾಯ ಆಶ್ರಮ ದೊಡ್ಡಹೊಸೂರು ಗ್ರಾಮದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ವಾಯುಗುಣ ವೈಪರೀತ್ಯ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ವಾಯುಗುಣಕ್ಕೆ ಪೂರಕವಾಗುವ ಬೆಳೆ ಪದ್ದತಿಗೆ ಒತ್ತು ನೀಡಬೇಕು ಎಂದು ರಾಜ್ಯ ಮತ್ತು ಒಕ್ಕೂಟ ಸರ್ಕಾರವನ್ನು ಆಗ್ರಹಿಸಿ, ಒಕ್ಕೊರಲಿನ ನಿರ್ಣಯ ಅಂಗೀಕರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಯೋ ಟೆಕ್ನಾಲಜಿ ಹಾಗೂ ಕುಲಾಂತರಿ ತಳಿಗಳ ಸಂಶೋಧನೆಗೆ ಸರ್ಕಾರ ನೆರವು ನೀಡುವುದನ್ನು ನಿಲ್ಲಿಸಬೇಕು. ಕಾರ್ಪೊರೇಟ್ ಕಂಪನಿಗಳು ಇಂತಹ ಕಾರ್ಯಗಳಿಗೆ ಹಣಕಾಸಿನ ನೆರವು ನೀಡದಂತೆ ತಡೆಯೊಡ್ಡಬೇಕು. ಕುಲಾಂತರಿ ತಳಿಗಳ ಅಭಿವೃದ್ದಿ ಕುರಿತು ಶಿಕ್ಷಣ, ಸಂಶೋಧನೆ, ಹಾಗೂ ವಿಸ್ತರಣೆಗೆ ಬಹುರಾಷ್ಟ್ರೀಯ ಕಂಪನಿಗಳು ಹಣ ನೀಡುವುದನ್ನು ನಿಷೇಧಿಸಬೇಕು. ಬಿಯರ್ ಕಂಪನಿ ಹಾಗೂ ಐಸಿಎಆರ್‌ಗೆ ಆಗಿರುವ ಒಪ್ಪಂದ ತಕ್ಷಣವೇ ರದ್ದುಪಡಿಸಬೇಕು. ಪಂಚಾಯತ್ ರಾಜ್ ಸಂಸ್ಥೆಗಳ ಮೂಲಕ ಸಹಜ ಬೇಸಾಯಕ್ಕೆ ಸರ್ಕಾರ ನೆರವು ನೀಡಬೇಕು ಎಂದು ಆಗ್ರಹಿಸಲಾಯಿತು.

kkkk 1

ಈ ನಿರ್ಣಯಗಳ ಜಾರಿಗೆ ಪ್ರತಿ ಜಿಲ್ಲೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ತೀರ್ಮಾನ ಕೈಗೊಂಡ ಸಭೆಯು, ಆಯಾ ಜಿಲ್ಲೆಯಲ್ಲಿನ ಜನಪ್ರತಿನಿಧಿಗಳು ಹಾಗು ರಾಜಕೀಯ ಮುಖಂಡರ ಸಭೆಯನ್ನು ಪಕ್ಷಾತೀತವಾಗಿ ಕರೆದು ಕುಲಾಂತರಿ ತಳಿಯ ಆಹಾರ ತಿರಸ್ಕರಿಸುವ ಕುರಿತು ನಿರ್ಣಯಿಸಬೇಕು. ಸರ್ಕಾರಗಳ ಗಮನ ಸೆಳೆದು ಕುಲಾಂತರಿ ತಳಿ ಆಹಾರ, ದೇಶ ಪ್ರವೇಶಿಸುವುದನ್ನ ತಡೆಯುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಲು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ರೈತ ಸಂಘಟನೆಗಳು ಪ್ರಗತಿಪರ ಸಂಘಟನೆಗಳು ಹಾಗು ನಾಗರಿಕ ಸಮೂಹ ತೀರ್ಮಾನಿಸಿತು.

ಈ ಸಭೆಯಲ್ಲಿ ಕೃಷಿ ವಿಜ್ಞಾನಿ ಡಾ. ಮಂಜುನಾಥ್, ಕೃಷಿ ವಿವಿಯ ನಿವೃತ್ತ ಕುಲಪತಿ ಡಾ. ನಾರಾಯಣಗೌಡ, ಮೈಸೂರು ಜಿಲ್ಲೆಯ ರೈತ ಮುಖಂಡ ಉಗ್ರ ನರಸಿಂಹೇಗೌಡ, ಮಂಡ್ಯ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ಸೇರಿದಂತೆ ಚಾಮರಾಜನಗರ, ರಾಮನಗರ, ದಾವಣಗೆರೆ, ತುಮಕೂರು ಜಿಲ್ಲೆಯ ರೈತ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ರಾಜಕೀಯ ಮೀಸಲಾತಿಯಿಂದ ಕಾರ್ಮಿಕ, ದಲಿತರ ಬದುಕು ಸುಧಾರಣೆಯಾಗಿಲ್ಲ: ಸಿಪಿಐಎಂ ಮುಖಂಡ ಕೆ.ಪ್ರಕಾಶ್

ಜಿಲ್ಲಾವಾರು ಪ್ರತಿನಿಧಿಗಳು ಹಾಗೂ ಜನರನ್ನು ಒಳಗೊಂಡ ವಿಚಾರಗೋಷ್ಠಿಯು ಸೆ -30, ಅಕ್ಟೋಬರ್ 1 ಹಾಗೂ 2ನೇ ತಾರೀಖಿನವರೆಗೆ ದೊಡ್ಡ ಹೊಸೂರು ಗಾಂಧೀಜಿ ಸಹಜ ಬೇಸಾಯ ಆಶ್ರಮದಲ್ಲಿ ಜರುಗಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...