ದೊಡ್ಡಬಳ್ಳಾಪುರ | ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು; ತುರ್ತು ಚಿಕಿತ್ಸೆಗೆ ಉಪಯೋಗವಿಲ್ಲದ ಪಿಎಚ್‌ಸಿ

Date:

ಕೃಷಿ ಹೊಂಡಕ್ಕೆ ಬಿದ್ದ ಬಾಲಕನ ಪ್ರಾಣ ರಕ್ಷಣೆ ಮಾಡಿದರೂ, ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಬುಧವಾರ ನಡೆದಿದೆ.

8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಜೀವದ ಹಂಗು ತೊರೆದು ಮೇಸ್ತ್ರಿಯೊಬ್ಬರು ಬಾಲಕನನ್ನು ರಕ್ಷಣೆ ಮಾಡಿದ ಬಳಿಕ ಆತನನ್ನು ಕೊನಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೂ ಸೂಕ್ತ ಸಮಯಕ್ಕೆ ಪ್ರಥಮ ಚಿಕಿತ್ಸೆ ಸಿಗದ ಕಾರಣ ಹಾಗೂ ಅಲ್ಲಿಂದ ದೊಡ್ಡಬಳ್ಳಾಪುರ ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್ ಸಿಗದ ಹಿನ್ನೆಲೆ ಬಾಲಕ ಸಾವನ್ನಪ್ಪಿದ್ದಾನೆಂದು ಬಾಲಕನ ತಂದೆ ಹಾಗೂ ಮೇಸ್ತ್ರಿ ಸೇರಿದಂತೆ ಸ್ಥಳೀಯರು ಆರೋಪಿಸಿದ್ದಾರೆ.

ಮೃತ ಬಾಲಕನ ತಂದೆ ತಾಯಿ ಆಂಧ್ರಪ್ರದೇಶದ ಪೆನಗೊಂಡ ಬಳಿಯ ಮುದ್ದೆಪಲ್ಲಿ ಗ್ರಾಮದವರು. ಕಳೆದ ಭಾನುವಾರ ಕಟ್ಟಡ ನಿರ್ಮಾಣ ಕೆಲಸಕ್ಕೆಂದು ಕೂಲಿಯಾಳುಗಳಾಗಿ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ಜೊತೆಯಲ್ಲಿ ಮಕ್ಕಳನ್ನು ಕರೆದುಕೊಂಡು ಬಂದಿದ್ದು, ಇಂದು ಕೊನಘಟ್ಟ ಗ್ರಾಮದಲ್ಲಿ ಮನೆ ನಿರ್ಮಾಣ ಕೆಲಸಕ್ಕೆ ಮುಂದಾಗಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಟ್ಟಡ ಕೆಲಸ ನಡೆಯುತ್ತಿದ್ದ ಸ್ಥಳದ ಪಕ್ಕದಲ್ಲಿಯೇ ರೈತರೊಬ್ಬರಿಗೆ ಸೇರಿದ ಕೃಷಿ ತೋಟವಿದೆ. ಮೃತ ಬಾಲಕ ತನ್ನ ತಂಗಿ ಜೊತೆ ಶೌಚ ಕಾರ್ಯಕ್ಕೆಂದು ತೋಟಕ್ಕೆ ತೆರಳಿದ್ದಾಗ, ಬಾಲಕ ನಾಗಚೈತನ್ಯ ಕೃಷಿ ಹೊಂಡಕ್ಕೆ ಬಿದ್ದಿದ್ದಾನೆ. ಆತನ ತಂಗಿ ಅಪ್ಪ ಅಮ್ಮ ಕೆಲಸ ಮಾಡುತ್ತಿದ್ದಲ್ಲಿಗೆ ಬಂದು ಸುದ್ದಿ ತಿಳಿಸಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪೌರಕಾರ್ಮಿಕನ ಮೇಲೆ ಹಲ್ಲೆ: ಮುನ್ಸಿಪಲ್ ಕಾರ್ಮಿಕರ ಸಂಘ ಪ್ರತಿಭಟನೆ

ಮೃತ ಬಾಲಕನ ತಾಯಿ ಚೀರಾಡುತ್ತಿದ್ದುದನ್ನು ಗಮನಿಸಿದ ಮೇಸ್ತ್ರಿ ತಮ್ಮಯ್ಯ ಎಂಬುವರು, ಕೃಷಿ ಹೊಂಡದ ಬಳಿ ಬಂದಿದ್ದಾರೆ. ಕೃಷಿ ಹೊಂಡಕ್ಕೆ ಧುಮಿಕಿ ಬಾಲಕನ ಪ್ರಾಣ ಕಾಪಾಡಿದ್ದಾರೆ. ತಕ್ಷಣವೇ ಬಾಲಕನನ್ನು ಕೊನಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲವೆಂದು ಹೇಳಿ ಅಲ್ಲಿನ ಸಿಬ್ಬಂದಿ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಆಸ್ಪತ್ರೆಗೆ ಬಂದಾಗ ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...