ತಂದೆ ಮತ್ತು ಮಗನ ನಡುವಿನ ವಾಗ್ವಾದ ಅತಿರೇಕಕ್ಕೇರಿದ್ದು, ಕುಡಿದ ಮತ್ತಿನಲ್ಲಿ ತಂದೆಯೊಬ್ಬ ಮಗನ ತಲೆಗೆ ಗುಂಡು ಹಾರಿಸಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮರಳೇನಹಳ್ಳಿಯಲ್ಲಿ ನಡೆದಿದೆ.
ಸುರೇಶ್ (49) ಎಂಬಾತ ತನ್ನ ಮಗ ಹರೀಶ್ (28)ನೊಂದಿಗೆ ಮಧ್ಯದ ಅಮಲಿನಲ್ಲಿ ವಾಗ್ವಾದ ನಡೆಸುತ್ತಿದ್ದ. ತಂದೆ-ಮಗನ ನಡುವೆ ಪದೇ ಪದೇ ಜಗಳ ನಡೆಯುತ್ತಿದ್ದು, ಈ ಬಾರಿ ವಾಗ್ವಾದ ವಿಕೋಪಕ್ಕೆ ತಿರುಗಿ ಸುರೇಶ್, ನಾಡ ಬಂದೂಕಿನಿಂದ ಮಗನ ತಲೆಗೆ ಗುಂಡು ಹಾರಿಸಿದ್ದಾನೆ.
ಘಟನೆಯಿಂದ ಹರೀಶ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಯಿಂದ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ದೊಡ್ಡಬಳ್ಳಾಪುರ | ವಿಡಿಯೋ ಮಾಡಿ ಗೃಹಿಣಿ ಆತ್ಮಹತ್ಯೆ!
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ತಂದೆ ಸುರೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿಯುತ್ತಿದೆ.
ಈ ಘಟನೆ ದೊಡ್ಡಬಳ್ಳಾಪುರ ಮತ್ತು ಸುತ್ತಮುತ್ತ ಪ್ರದೇಶದಲ್ಲಿ ಆತಂಕ ಉಂಟುಮಾಡಿದೆ.





