ದೊಡ್ಡಬಳ್ಳಾಪುರ | ಮಕ್ಕಳ ಶಾಲಾ ಪ್ರವೇಶಕ್ಕೆ ಕನಿಷ್ಠ ವಯಸ್ಸಿನ ನಿಯಮ ವಯೋಮಿತಿ ಸಡಿಲಿಕೆಗೆ ಕನ್ನಡ ಪಕ್ಷ ಆಗ್ರಹ

Date:

ಮಕ್ಕಳ ಶಾಲಾ ಪ್ರವೇಶಕ್ಕೆ ಕನಿಷ್ಠ ವಯಸ್ಸಿನ ನಿಯಮ ವಯೋಮಿತಿ ಸಡಿಲಿಕೆ ಮಾಡುವಂತೆ ಆಗ್ರಹಿಸಿ ಕನ್ನಡ ಪಕ್ಷದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.

“ಒಂದನೇ ತರಗತಿಗೆ ಮಕ್ಕಳು ಪ್ರವೇಶ ಪಡೆಯುವ ವಯಸ್ಸಿನ ವಿಚಾರವು ರಾಜ್ಯದಲ್ಲಿ ಪೋಷಕರ ಕಳವಳಕ್ಕೆ ಕಾರಣವಾಗಿದೆ. ಮಕ್ಕಳು ಕನಿಷ್ಠ ವರ್ಷ ಪೂರೈಸಿರಬೇಕು ಎನ್ನುವ ರಾಜ್ಯ ಸರ್ಕಾರದ 202ರ ಆದೇಶವನ್ನು ಶಾಲೆಗಳು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಾಲಿಸಲು ಮುಂದಾಗಿವೆ. ಇದರಿಂದ ರಾಜ್ಯದ ಲಕ್ಷಾಂತರ ಮಕ್ಕಳು ಯುಕಜಿಯನ್ನು ಮತ್ತೆ ಒಂದು ವರ್ಷ ಪುನರಾವರ್ತಿಸಬೇಕಾಗಿ ಬಂದಿದೆ” ಎಂದು ಹೇಳಿದರು.

“ಪೋಷಕರಿಗೆ ಉಂಟಾಗುವ ಆರ್ಥಿಕ ಹೊರೆ ಮತ್ತು ಮಕ್ಕಳ ಮಾನಸಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು, ಇತರೆ ಕೆಲ ರಾಜ್ಯಗಳಂತೆ, ಈ ಬಾರಿ ಶಾಲಾ ಪ್ರವೇಶದ ವಯೋಮಿತಿಯಲ್ಲಿ ಸಡಿಲಿಕೆ ಮಾಡುವಂತೆ ಪೋಷಕರು ಸರ್ಕಾರವನ್ನು ಮನವಿ ಮಾಡುತ್ತಿದ್ದಾರೆ” ಎಂದರು.

“ಪ್ರತಿ ವರ್ಷವೂ ಇಂಥದೇ ಸ್ಥಿತಿ ಉದ್ಭವಿಸುವುದರಿಂದ ನಿಯಮದ ಪ್ರಕಾರ, 2025 ಜೂನ್ 1ಕ್ಕೆ 6 ವರ್ಷ ತುಂಬಿರುವ ಮಕ್ಕಳಿಗೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡುವುದಾಗಿ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಹೇಳುತ್ತಿವೆ. ಇದರಿಂದ ರಾಜ್ಯದಲ್ಲಿ 6 ವರ್ಷ ತುಂಬದ ಯುಕಜಿಯ ಮಕ್ಕಳು ಮತ್ತೆ ಒಂದು ವರ್ಷ ಯುಕೆಜಿಯಲ್ಲೇ ಉಳಿಯಬೇಕಾಗಿದೆ. ರಾಜ್ಯದಲ್ಲಿ ಇಂತಹ ಸುಮಾರು ಐದು ಲಕ್ಷ ಮಕ್ಕಳಿದ್ದು, ಅವರ ಶೈಕ್ಷಣಿಕ ಜೀವನ ಸಂದಿಗ್ಧಕ್ಕೆ ಸಿಲುಕಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಏ. 24 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

“ಬಹುತೇಕ ಶಾಲೆಗಳು ಮಕ್ಕಳನ್ನು ಎಲ್‌ಕೆಜಿಗೆ ಸೇರಿಸಿಕೊಳ್ಳುವಾಗ ಈ ಬಗ್ಗೆ ಮಾಹಿತಿ ನೀಡಿರಲಿಲ್ಲ. ಈಗ ದಿಢೀರ್ ನಿಯಮ ಮುಂದಿಡುತ್ತಿವೆ ಎನ್ನುವುದು ಪೋಷಕರ ಆರೋಪವಾಗಿದೆ. ಇಂಥ ಮಕ್ಕಳ ಪಟ್ಟಿಯಲ್ಲಿ ಒಂದೆರಡು ದಿನದ ವ್ಯತ್ಯಾಸ ಇರುವವರು, ವಾರಗಳ, ತಿಂಗಳ ವ್ಯತ್ಯಾಸ ಇರುವವರೂ ಇದ್ದಾರೆ. ಆದ್ದರಿಂದ ಈ ಕೂಡಲೇ ಹಿಂದಿನ ವರ್ಷದಂತೆ ಮಕ್ಕಳನ್ನು ಶಾಲೆಗೆ ಸೆರಿಸಿಕೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು” ಎಂದು ಕನ್ನಡ ಪಕ್ಷ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...