ಚಿತ್ರದುರ್ಗ | ಉತ್ತಮ ರಸ್ತೆಗಾಗಿ ಆಗ್ರಹ: ಸಿಎಂ ಭೇಟಿ ಮಾಡಲು ‘ಡಾಗ್ ಸರ್ಕಲ್’ ನಿವಾಸಿಗಳ ನಿರ್ಧಾರ

Date:

ಎರಡು ವರ್ಷಗಳಿಂದಲೂ ಉತ್ತಮ ರಸ್ತೆಗಾಗಿ ಆಗ್ರಹಿಸುತ್ತಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಚಂದ್ರ ಲೇಔಟ್‌ನಲ್ಲಿರುವ ಡಾಗ್ ಸರ್ಕಲ್ ನಿವಾಸಿಗಳು ಮತ್ತೆ ಹೋರಾಟಕ್ಕಿಳಿದಿದ್ದು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ತೀರ್ಮಾನಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ಟೌನ್ 3 ನೇ ವಾರ್ಡ್ ಚಂದ್ರಾ ಲೇ ಔಟ್ ನಲ್ಲಿ ದಾರಿ ಸಮಸ್ಯೆ ಕುರಿತು ತುರ್ತು ಸಭೆ ನಡೆಸಿದ ಡಾಗ್ ಸರ್ಕಲ್ ನಿವಾಸಿಗಳು, ನಗರಸಭೆ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಚಂದ್ರ ಲೇಔಟ್ ನಾಗರೀಕ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್ ವಿ ರಂಗನಾಥ್ ಮಾತನಾಡಿ, “ಚಂದ್ರ ಲೇಔಟ್ ಮತ್ತು ಡಾಗ್ ಸರ್ಕಲ್ ನಿವಾಸಿಗಳು ಹಲವಾರು ವರ್ಷಗಳಿಂದ ಸಮರ್ಪಕ ರಸ್ತೆ ಸೌಲಭ್ಯಕ್ಕೆ ಒತ್ತಾಯಿಸುತ್ತಿದ್ದು, ಪ್ರತಿಭಟನೆ ನಡೆಸಿದ್ದೇವೆ. ಈ ಹಿನ್ನೆಲೆಯಲ್ಲಿ ಸಭೆ ಸೇರಿದ ನಿವಾಸಿಗಳು ಬೆಳಗಾವಿ ಅಧಿವೇಶನದ ಬಳಿಕ ಡಾಗ್ ಸರ್ಕಲ್ ದಾರಿ ಸಮಸ್ಯೆ ಇತ್ಯರ್ಥಕ್ಕೆ ಮುಖ್ಯಮಂತ್ರಿ ಭೇಟಿ ಮಾಡಲು ತೀರ್ಮಾನಿಸಿದೆವು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲಾಧಿಕಾರಿ ಆದೇಶ, ಜಿಲ್ಲಾ ಉಸ್ತುವಾರಿ ಸಚಿವರ ಪತ್ರ, ಲೋಕೋಪಯೋಗಿ ಸಚಿವರ ಪತ್ರ, ಮುಖ್ಯಮಂತ್ರಿಗಳ ಪತ್ರಕ್ಕೂ ಜಗ್ಗದ ಅಧಿಕಾರಿಗಳು ಐ ಪಿ ಜಿ ಆರ್ ಎಸ್ ನಲ್ಲಿ ಸಲ್ಲಿಸಿದ ದೂರುಗಳನ್ನು ಪದೇ ಪದೇ ಅದೇ ಸುಳ್ಳು ವರದಿ ಅಪ್ಲೋಡ್ ಮಾಡಿ ಕಂಪ್ಲೆಂಟ್ ಮುಕ್ತಾಯ ಮಾಡಿರುತ್ತಾರೆ. ಬಬ್ಬೂರ್ ಸರ್ವೇ ನಂಬರ್ 39 ಮತ್ತು 40 ರ ಮದ್ಯದಲ್ಲಿರುವ ದಾರಿಗೆ ಹೊಂದಿಕೊಂಡ 7 ನಗರ ಯೋಜನೆ ಅನುಮೋದಿತ ಬಡಾವಣೆ ನಕ್ಷೆಗಳಿದ್ದು. ನಿಖರವಾದ ಅಳತೆ ಮಾಡಿ ಒತ್ತುವರಿ ತೆರವು ಮಾಡಿಸಿ ರಸ್ತೆ ಮಾಡಿಕೊಡಲು ನಗರಸಭೆ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ” ಎಂದು ಡಾಗ್ ಸರ್ಕಲ್ ನ ನಿವಾಸಿಗಳು ಗಂಭೀರ ಆರೋಪ ಮಾಡಿದ್ದಾರೆ.

“ಈ ಭಾಗದಲ್ಲಿ ಅಹಿಂದ ಕುಟುಂಬದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಮಳೆಗಾಲಕ್ಕೆ ಈ ರಸ್ತೆ ಕೆಸರುಗದ್ದೆಯಂತಾಗುತ್ತದೆ. ಬೇಸಿಗೆಯಲ್ಲಿ ತಗ್ಗು ಗುಂಡಿ ರಸ್ತೆ,ಕಲ್ಲು ಮುಳ್ಳು ಹಾವು ಚೇಳು ವಿಷ ಜಂತುಗಳ ನಡುವೆ ಜೀವದ ಹಂಗು ತೊರೆದು ಓಡಾಡಬೇಕಾಗಿದೆ. ಮೂಲಭೂತ ಸೌಕರ್ಯ ವಂಚಿತ ನಮ್ಮ ರಸ್ತೆಗಾಗಿನ ಹೋರಾಟ ಇಲ್ಲಿನ ಯಾವುದೇ ಬಡಾವಣೆ ಮಾಲೀಕರ ಪರವೂ ಅಲ್ಲ, ವಿರುದ್ಧವೂ ಅಲ್ಲ, ಮಾನವೀಯ ನೆಲೆಗಟ್ಟಿನಲ್ಲಿ ಗೌರವಯುತವಾಗಿ ಬದುಕುವ ಕಾನೂನುಬದ್ದ ರಸ್ತೆ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಉಡುಪಿ | ಪಂಚರ್ ಹಾಕುವ ವೇಳೆ ಟೈರ್ ಸ್ಫೋಟ: ಗಾಳಿಯಲ್ಲಿ ಹಾರಿಬಿದ್ದ ಯುವಕ; ವಿಡಿಯೋ ವೈರಲ್

“ಒಂದು ಬಡಾವಣೆ ರಸ್ತೆಗಾಗಿ ರಾಜ್ಯದ ಮುಖ್ಯಮಂತ್ರಿಗಳು ಪತ್ರ ಬರೆದಿದ್ದರೂ ಅವರ ಪತ್ರಕ್ಕೆ ಬೆಲೆ ಕೊಡದೆ ಸತಾಯಿಸುತ್ತಿರುವ ಹಿರಿಯೂರು ನಗರಸಭೆ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮತ್ತೊಮ್ಮೆ ದೂರು ಸಲ್ಲಿಸಲು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು” ಎಂದು ಎಸ್ ವಿ ರಂಗನಾಥ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಸಿ ಜಿ ಗೌಡ,ಉಪಾಧ್ಯಕ್ಷ ಸ್ವಾಮಿ, ನಿರ್ದೇಶಕರಾದ ಷಫೀವುಲ್ಲಾ, ಶಶಿಕುಮಾರ್, ಅಶ್ವತ್ಥ ನಾರಾಯಣ, ಫಕೃದ್ಧೀನ್, ಪರಮೇಶ್ವರಪ್ಪ, ಗೋವರ್ದನ್, ಶ್ರೀನಿವಾಸ್, ಜಾಫರ್ ಷರೀಫ್, ಸನಾವುಲ್ಲ, ರಂಗಸ್ವಾಮಿ, ತಿಪ್ಪೇಸ್ವಾಮಿ, ಜಗದೀಶ್ ಅರಸ್, ನಾಗರಾಜ, ಆರ್ ಕೆ ಮಂಜು ಹಾಗೂ ಮಹಿಳೆಯರು ಮಕ್ಕಳು ಸೇರಿದಂತೆ ಮತ್ತಿತರರ ನಾಗರೀಕರು ಉಪಸ್ಥಿತರಿದ್ಧರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...