ಮಂಡ್ಯ | ಮಧ್ಯವರ್ತಿಗಳಿಗೆ ಹಣ ನೀಡಬೇಡಿ : ಶಾಸಕ ದರ್ಶನ್ ಪುಟ್ಟಣ್ಣಯ್ಯ

Date:

ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕಿನ (ಮೇಲುಕೋಟೆ ವಿಧಾನಸಭಾ ಕ್ಷೇತ್ರ) ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಕ್ಷೇತ್ರದ ಜನರಲ್ಲಿ ದರಖಾಸ್ತು ಜಮೀನು ಸಕ್ರಮ ಮಾಡಿಸಿಕೊಡುತ್ತೇವೆ ಎನ್ನುವ ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.

ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದರಖಾಸ್ತು ಜಮೀನು ಕೊಡಿಸುವುದಾಗಿ ಮಧ್ಯವರ್ತಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ದೂರು ಕೇಳಿ ಬರುತ್ತಿದೆ. ಆದ್ದರಿಂದ, ಮಧ್ಯವರ್ತಿಗಳ ಮಾತು ಕೇಳಿ ಮೋಸ ಹೋಗಬೇಡಿ. ಯಾವುದೇ ಕಾರಣಕ್ಕೂ ಹಣ ನೀಡಬೇಡಿ ಎಂದಿದ್ದಾರೆ.

ಕರ್ನಾಟಕ ಭೂ ಕಂದಾಯ ಅಧಿನಿಯಮ 1966 ರ ನಿಯಮ 97 ರೀತಿ 30 ಎಕರೆ ಗೋಮಾಳದ ಜಮೀನನ್ನು ಕಾಯ್ದಿರಿಸುವಂತೆ ನಿಯಮವಿದೆ. ಅದರಂತೆ, ಪಾಂಡವಪುರ ತಾಲ್ಲೂಕಿನಲ್ಲಿ ಎಲ್ಲಾ ಗ್ರಾಮಗಳ ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ಗೋಮಾಳ ಜಮೀನುಗಳ ಲಭ್ಯತೆ ಬಗ್ಗೆ ಪರಿಶೀಲಿಸಿ ಹೆಚ್ಚುವರಿ ಗೋಮಾಳ ಲಭ್ಯವಿರುವ 5 ಗ್ರಾಮಗಳಲ್ಲಿ ಮಾತ್ರ ಆನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಸಾಗುವಳಿದಾರರಿಗೆ ಸರ್ಕಾರದ ನಿಗಧಿಪಡಿಸಿರುವ ಮಾನದಂಡಗಳಿಗೆ ಅನುಗುಣವಾಗಿ ಸಕ್ರಮಗೊಳಿಸಲು ಅವಕಾಶವಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮ ಸಾಗುವಳಿ ಮಾಡುತ್ತಿರುವ ಜಮೀನಿನ ಜೊತೆಗೆ ಅನಧಿಕೃತವಾಗಿ ಸಾಗುವಳಿ ಜಮೀನಿನ ವಿಸ್ತೀರ್ಣವು 4 ಎಕರೆ 38 ಗಂಟೆಗೆ ಮೀರಬಾರದೆಂದು ನಿಯಮಾವಳಿಯಲ್ಲಿ ತಿಳಿಸಲಾಗಿರುತ್ತದೆ. ಗೋಮಾಳ ಜಮೀನು ಲಭ್ಯವಿರುವ ಜಾಗಶೆಟ್ಟಿಹಳ್ಳಿ, ಗೌಡಗೆರೆ, ಆನುವಾಳು, ಹೊಸಹಳ್ಳಿ, ಸಿಂಗಾಪುರ ಗ್ರಾಮಗಳ ರೈತರಿಗೆ ಸಕ್ರಮಗೊಳಿಸಲು ಮಾತ್ರ ಅವಕಾಶವಿರುತ್ತದೆ.

ಉಳಿದಂತೆ ಹೊಸದಾಗಿ ಜಾನುವಾರು ಗಣತಿ ಪೂರ್ಣಗೊಂಡ ನಂತರ ಜಾನುವಾರುಗಳ ಸಂಖ್ಯೆಯ ಆಧಾರದ ಮೇಲೆ ಗೋಮಾಳವನ್ನು ಪುನರ್ ನಿಗದಿಪಡಿಸಬೇಕಾಗಿರುತ್ತದೆ. ಅಲ್ಲಿಯವರೆಗೂ ಬೇರೆ ಯಾವುದೇ ಜಮೀನನ್ನು ಮಂಜೂರಾತಿ ಮಾಡಲು ಅವಕಾಶವಿರುವುದಿಲ್ಲ.

ಈ ಸುದ್ದಿ ಓದಿದ್ದೀರಾ?ಕೊಡಗು | ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದಿಂದ ದೀಪಾ ಬಾಸ್ತಿಯವರಿಗೆ ಸನ್ಮಾನ

ಮೇಲ್ಕಂಡ 5 ಗ್ರಾಮಗಳನ್ನು ಹೊರತುಪಡಿಸಿ ಉಳಿದ ಗ್ರಾಮಗಳಲ್ಲಿ ಸಾಗುವಳಿ ಮಾಡುತ್ತಿರುವುದನ್ನು ಸಕ್ರಮ ಮಾಡಿಸಿ ಕೊಡುತ್ತೇನೆಂದು ಆಮಿಷವೊಡ್ಡಿ ಬರುವ ಮಧ್ಯವರ್ತಿಗಳಿಂದ ದೂರವಿರಬೇಕೆಂದು ಪಾಂಡವಪುರ ತಾಲ್ಲೂಕಿನ ಜನರಲ್ಲಿ ವಿನಂತಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...