ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ಕೊಡಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು

Date:

  • ಸಂವಿಧಾನ ವಿರೋಧಿಗಳು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳಿ
  • ವಿರೋಧಿಗಳನ್ನು ಅರ್ಥಮಾಡಿಕೊಳ್ಳದಿದ್ದರೆ ದಲಿತ-ಶೂದ್ರರ ಉದ್ಧಾರ ಸಾಧ್ಯವಿಲ್ಲ

ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಸಂವಿಧಾನ ವಿರೋಧಿಗಳ ಒಡೆದು ಆಳುವ ನೀತಿಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು.

ರಾಜ್ಯ ದಲಿತ ಸಂಘರ್ಷ ಸಮಿತಿ ಟೌನ್ ಹಾಲ್ ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಜಯಂತ್ಯುತ್ಸವ ಮತ್ತು ರಾಜ್ಯ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಸಂವಿಧಾನ ರಚನಾ ಸಮಿತಿಗೆ ಅಂಬೇಡ್ಕರ್ ಅವರು ಅಧ್ಯಕ್ಷರಾಗದೇ ಹೋಗಿದ್ದರೆ ನಮ್ಮ ದೇಶಕ್ಕೆ ಇಷ್ಟೊಂದು ಅರ್ಥಪೂರ್ಣವಾದ ಸಂವಿಧಾನ ದೊರೆಯುತ್ತಿರಲಿಲ್ಲ. ಅಂಬೇಡ್ಕರ್ ಮತ್ತು ಸಂವಿಧಾನದ ಆಶಯಗಳನ್ನು ತಮ್ಮ ಮುಖ್ಯಮಂತ್ರಿ ಸ್ಥಾನದ ಮೂಲಕ ಸಮರ್ಥವಾಗಿ ಜಾರಿ ಮಾಡಲು ದೇವರಾಜ ಅರಸು ಅವರು ಶ್ರಮಿಸಿದರು. ಹೀಗಾಗಿ ಅವರಿಗಿಂತ ಮುಂಚಿನ ಯಾವ ಮುಖ್ಯಮಂತ್ರಿಗಳೂ ಜಾರಿ ಮಾಡದ ಸಾಮಾಜಿಕ ನ್ಯಾಯದ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಯಾಗಿ ಅರಸು ಜಾರಿ ಮಾಡಿದರು” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನ ವಿರೋಧಿಗಳಿಗೆ, ಬಡವ-ಮಧ್ಯಮ ವರ್ಗದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟರೆ ಸಾಮಾಜಿಕ ನ್ಯಾಯ ನೆಗೆದು ಬೀಳುತ್ತದೆ. ದೇವರಾಜ ಅರಸರು‌ ಹಾವನೂರು ವರದಿ ಜಾರಿ ಮಾಡುವವರೆಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಿಕ್ಕಿರಲಿಲ್ಲ. ಎಷ್ಟೇ ವಿರೋಧ ಬಂದರೂ ಎದೆಗುಂದದೆ ಎದೆಗಾರಿಕೆಯಿಂದ ಹಾವನೂರು ವರದಿ ಜಾರಿ ಮಾಡಿದ್ದು ಅರಸು ಅವರು” ಎಂದು ಮೆಚ್ಚುಗೆ ಸೂಚಿಸಿದರು.

ಸಿದ್ದರಾಮಯ್ಯ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?

ಸ್ಪಷ್ಟ ತಿಳಿವಳಿಕೆ ಅಗತ್ಯ

“ಅಧಿಕಾರ ಯಾರ ಕೈಗೆ ಕೊಡಬೇಕು ಎನ್ನುವ ಸ್ಪಷ್ಟ ತಿಳಿವಳಿಕೆ ದಲಿತ-ಶೂದ್ರ ಸಮುದಾಯ ಪಡೆದುಕೊಳ್ಳಬೇಕು. ದಲಿತ-ಶೂದ್ರ-ಬಡವ ಮತ್ತು ಮಧ್ಯಮ ವರ್ಗಗಳಿಗೆ ಬದುಕಿನ ಅವಕಾಶ ದೊರಕಿದ್ದು ಸಂವಿಧಾನದಿಂದ. ಈ ಸಂವಿಧಾನವನ್ನು ದ್ವೇಷಿಸುವವರ ಕೈಗೆ ಅಧಿಕಾರ ಕೊಟ್ಟರೆ ಬಡವ-ಮಧ್ಯಮ ವರ್ಗದವರ ಉದ್ದಾರ ಆಗಲು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

scp/tsp ಬಗ್ಗೆ ಬಿಜೆಪಿ ಸುಳ್ಳು ಹೇಳುತ್ತಿದೆ

“ಬಡವರ ಮತ್ತು ಮಧ್ಯಮ ವರ್ಗದವರ ಬದುಕಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳಿಗೆ scp/tsp ಹಣ ಬಳಕೆ ಎಂದು ಬಿಜೆಪಿ ಭಯಾನಕ ಸುಳ್ಳು ಹೇಳುತ್ತಿದೆ. ಇದನ್ನು ನಂಬಬೇಡಿ. ದಾಖಲೆಗಳನ್ನು ನೋಡಿ ಬಿಜೆಪಿಯವರಿಗೆ ಪಾಠ ಕಲಿಸಿ” ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ದಸಂಸ ಮುಖಂಡ ಡಿ.ಜಿ.ಸಾಗರ್ ಸೇರಿ ಸಂಘಟನೆಯ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...