ಸಭಾಧ್ಯಕ್ಷ ಸ್ಥಾನಕ್ಕೇರಲು ಟ್ರೋಲರ್‌ ಕಾರಣ, ಧೈರ್ಯದಿಂದ ಮಾತನಾಡಿ: ನೂತನ ಶಾಸಕರಿಗೆ ಖಾದರ್‌ ಕಿವಿಮಾತು

Date:

  • ‘ನಮ್ಮನ್ನು ಟ್ರೋಲ್‌ ಮಾಡುತ್ತಾರೆ ಎಂದು ಹಿಂಜರಿಕೆಯಲ್ಲಿ ಮಾತನಾಡಬೇಡಿ’
  • ‘ನಾವು ದೊಡ್ಡ ಸ್ಥಾನಕ್ಕೆ ಏರಲು ಇಂತಹ ಟ್ರೋಲ್‌ಗಳ ಪಾತ್ರ ಇರುತ್ತದೆ’

ಯಾರೋ ನಮ್ಮನ್ನು ಟ್ರೋಲ್‌ ಮಾಡುತ್ತಾರೆ ಎಂಬ ಹಿಂಜರಿಕೆಯಲ್ಲಿ ಮಾತನಾಡಬೇಡಿ. ಟ್ರೋಲ್‌ ಮಾಡುವವರ ಬಗ್ಗೆ ಯಾವತ್ತೂ ಹೆದರಬೇಡಿ. ನಾನು ಈ ಸಭಾಧ್ಯಕ್ಷ ಸ್ಥಾನದ ಕುರ್ಚಿಯಲ್ಲಿ ಬಂದು ಕುಳಿತುಕೊಳ್ಳಲು ಈ ಟ್ರೋಲ್‌ ಮಾಡಿದವರು ಕೂಡ ಕಾರಣ. ನಾವು ದೊಡ್ಡ ಸ್ಥಾನಕ್ಕೆ ತಲುಪಬೇಕಾದರೆ ಇಂತಹ ಟ್ರೋಲ್‌ಗಳ ಪಾತ್ರ ಇರುತ್ತದೆ ಎಂದು ಸಭಾಧ್ಯಕ್ಷ ಯು ಟಿ ಖಾದರ್‌ ಹೇಳಿದರು.

ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮೇಲಿನ ಚರ್ಚೆಯಲ್ಲಿ ಶಾಸಕರಿಗೆ ಮಾತನಾಡಲು ಸಭಾಧ್ಯಕ್ಷರು ಬುಧವಾರ ನಡೆದ ಎಂಟನೇ ದಿನದ ಕಲಾಪದಲ್ಲಿ ಅವಕಾಶ ಮಾಡಿಕೊಟ್ಟರು. ಈ ವೇಳೆ ಚಿಕ್ಕಬಳ್ಳಾಪುರ ಕ್ಷೇತ್ರದ ನೂತನ ಶಾಸಕ ಪ್ರದೀಪ್‌ ಈಶ್ವರ್‌ ಭಾಷಣ ಆರಂಭಿಸಿದರು. ಅವರ ಭಾಷಣದಲ್ಲಿನ ಹಿಂಜರಿಕೆ ಕಂಡ ಸಭಾಧ್ಯಕ್ಷರು ಮಧ್ಯಪ್ರವೇಶಿಸಿ ನೂತನ ಶಾಸಕರಿಗೆ ಮಾತನಾಡುವ ಬಗ್ಗೆ ಧೈರ್ಯತುಂಬಿ ಪ್ರೋತ್ಸಾಹಿಸಿದರು.

“ಹೊಸದಾಗಿ ಶಾಸಕರಾದವರು ಆತ್ಮವಿಶ್ವಾಸದಿಂದ ಮಾತನಾಡಬೇಕು. ಮಾತಿನಲ್ಲಿ ಹೆಚ್ಚು ಕಡಿಮೆ ಆದರೆ ತೊಂದರೆ ಇಲ್ಲ. ಇದೇನು ಪರೀಕ್ಷೆ ಅಥವಾ ಕೋರ್ಟ್‌ ಅಲ್ಲ. ಮುಕ್ತ ಮನಸ್ಸಿನಿಂದ, ಆರಾಮವಾಗಿ ಸಂವಿಧಾನಬದ್ಧವಾಗಿ ಮಾತನಾಡಿ” ಎಂದು ಸಭಾಧ್ಯಕ್ಷರು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಪೀಕರ್ ಖಾದರ್, ಕನ್ನಡ ಮತ್ತು ಬೆತ್ತಲಾದ ಬಿಜೆಪಿ

“ಎಲ್ಲ ನೂತನ ಶಾಸಕರು ತಮಗೇನು ಹೇಳಬೇಕು ಅನ್ನಿಸುತ್ತದೆಯೋ ಅದನ್ನು ಮುಕ್ತವಾಗಿ ಹೇಳಿ. ಸಕಾರಾತ್ಮಕ ವಿಚಾರಗಳನ್ನು ಸದನದಲ್ಲಿ ಧೈರ್ಯವಾಗಿ ಹೇಳಿ. ಯಾವುದಕ್ಕೂ ಹಿಂಜರಿಯಬೇಡಿ” ಎಂದು ಕಿವಿಮಾತು ಹೇಳಿದರು.

“ಬಡಕುಟುಂಬದ ಹುಡಗ ಕೂಡ ವಿಧಾನಸೌಧ ತಲುಪುವುದಕ್ಕೆ ಪ್ರೇರಣೆಯಾದ ಅಂಬೇಡ್ಕರ್‌, ಅನಾಥ ಹುಡುಗರಿಗೆ ಅನ್ನವಿಟ್ಟು ಬೆಳೆಸಿದಂತಹ ಸಿದ್ಧಗಂಗಾ ಶ್ರೀಗಳನ್ನು ಸ್ಮರಿಸುತ್ತ ನನ್ನ ಭಾಷಣ ಪ್ರಾರಂಭಿಸಿರುವೆ” ಎಂದು ಪ್ರದೀಪ್‌ ಈಶ್ವರ್‌ ಮಾತು ಪ್ರಾರಂಭಿಸಿ ಅನ್ನಭಾಗ್ಯ ಯೋಜನೆ ಮತ್ತು ಸರ್ಕಾರಿ ಶಾಲೆ, ಆಸ್ಪತ್ರೆಗಳ ಅಭಿವೃದ್ಧಿ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿ ಸದನದ ಗಮನ ಸೆಳೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...