ಬೀದರ್‌ | ಮಾನಸಿಕ ಅಸ್ವಸ್ಥರನ್ನು ನಿರ್ಲಕ್ಷಿಸಬೇಡಿ : ಮೈಕೆಲ್‌ ಮಿರಂದ್

Date:

ಮಾನಸಿಕ ರೋಗಕ್ಕೆ ತುತ್ತಾದವರನ್ನು ನಿರ್ಲಕ್ಷಿಸದೆ ಅವರನ್ನು ಗುರುತಿಸಿ ಸ್ವಾವಲಂಬನೆ ಬದುಕು ನಡೆಸಲು ಉಪಜೀವನಕ್ಕೆ ಸಹಾಯಧನ ನೀಡುತ್ತಿರುವ ಆರ್ಬಿಟ್‌ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಕಲಬುರಗಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಮೈಕೆಲ್ ಮಿರಂದ್ ಹೇಳಿದರು.

ಬೀದರ್‌ ಜಿಲ್ಲೆಯ ಹುಮನಾಬಾದ್ ಪಟ್ಟಣದ ಆರ್ಬಿಟ್ ಸಂಸ್ಥೆಯಲ್ಲಿ ಆರ್ಬಿಟ್‌ ಸಂಸ್ಥೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್‌ ಸಹಯೋಗದಲ್ಲಿ ಶನಿವಾರ ಮಾನಸಿಕ ಕಾಯಿಲೆಯಿಂದ ಗುಣಮುಖರಾದ ಫಲಾನುಭವಿಗಳಿಗೆ ಕುರಿ ಹಾಗೂ ಕೋಳಿಗಳನ್ನು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ʼಮನೋದೌರ್ಬಲ್ಯದಿಂದ ದೂರು ಮಾಡುವ ಮೂಲಕ ಅವರನ್ನು ಪುನಃ ಘನತೆಯ ಬದುಕಿಗೆ ಬರಲು ಸಂಸ್ಥೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ. ಇಂತಹ ಮಾನವೀಯ ಕಾರ್ಯಕ್ಕೆ ಕೈಜೋಡಿಸಿದಲ್ಲಿ ಸಮಾಜ ಬದಲಾವಣೆ ನಿರೀಕ್ಷಿಸಬಹುದುʼ ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್ ಜಿಲ್ಲೆಯ ಸಾವಿರಾರು ಮಾನಸಿಕ ಅಸ್ವಸ್ಥರನ್ನು ಗುರುತಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ವಯಂ ಉದ್ಯೋಗ ಕುರಿ ಕೋಳಿ ಸಾಕಾಣಿಕೆ ಉದ್ಯೋಗ ಕೊಡಿಸುವ ಸಹಾಯಧನ ಮಾಡಿದ್ದೇವೆ. ಸಂಪೂರ್ಣ ಗುಣಮುಖರಾಗಿ ಸ್ವಾವಲಂಬನೆ ಬದುಕು ನಡೆಸಲು ನಮ್ಮ ಸಂಸ್ಥೆಯಿಂದ ಸಹಕಾರ ನೀಡುತ್ತೇವೆ ಎಂದು ಹೇಳಿದರು.

WhatsApp Image 2024 09 28 at 10.15.23 PM
ಮಾನಸಿಕ ಕಾಯಿಲೆಯಿಂದ ಗುಣಮುಖರಾದ ಫಲಾನುಭವಿಗಳಿಗೆ ಕುರಿ ಹಾಗೂ ಕೋಳಿಗಳನ್ನು ವಿತರಿಸಲಾಯಿತು.

ಆರ್ಬಿಟ್ ಸಂಸ್ಥೆಯ ನಿರ್ದೇಶಕರಾದ ಫಾದರ್ ವಿಕ್ಟರ್ ವಾಸ್ ಮಾತನಾಡಿ, ʼಸಂಸ್ಥೆಯು ಸುಮಾರು 30 ವರ್ಷಗಳಿಂದ ಸಾಮಾಜಿಕ ಕಾರ್ಯದಲ್ಲಿ ನಿರತವಾಗಿದ್ದು, ಕಳೆದ 2018 ರಿಂದ ಮಾನಸಿಕ ಅಸ್ವಸ್ಥರ ಪುನರ್ವಸತಿಗಾಗಿ ಸಂಸ್ಥೆ ಶ್ರಮಿಸುತ್ತಿದೆ. ಮಾನಸಿಕ ಕಾಯಿಲೆಯಿಂದ ಗುಣಮುಖರಾದವರಿಗೆ ಉತ್ತಮ ಬದುಕನ್ನು ಕಟ್ಟಿಕೊಂಡು ಸ್ವಾವಲಂಬಿಯಾಗಿ ಬದುಕಬೇಕೆಂಬ ಉದ್ದೇಶದಿಂದ ಫಲಾನುಭವಿಗಳಿಗೆ ಇಂದು ಕುರಿ ಹಾಗೂ ಕೋಳಿಯನ್ನು ವಿತರಿಸಲಾಗುತ್ತಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಹಂದಿಗಳ ಜೊತೆ ಗುದ್ದಾಡಲ್ಲ: ಕುಮಾರಸ್ವಾಮಿಗೆ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಮಾರ್ಮಿಕ ಉತ್ತರ

ಕಾರ್ಯಕ್ರಮದಲ್ಲಿ ಪ್ರಮುಖರಾದ ಜೇಮ್ಸ್‌, ರೋನಾಲ್ಡ್‌, ಬಾಲಾಜಿ ಕುಂಬಾರ್‌ ಹಾಗೂ ಆರ್ಬಿಟ್ ಸಂಸ್ಥೆಯ ಸಹ ನಿರ್ದೇಶಕರು, ನವಜೀವನ ಕಾರ್ಯಕ್ರಮದ ಸಂಯೋಜಕ ಪ್ರವೀಣ, ಆಪ್ತ ಸಮಾಲೋಚಕರಾದ ಅರುಣ್ ಕೋಟೆ, ರವಿ ಚಳಕಾಪುರೆ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಪ್ರೀತಿ ಸ್ವಾಗತಿಸಿದರು, ಅರುಣಕುಮಾರ್ ರಂಜೇರಿ ನಿರೂಪಿಸಿದರು, ಮಮತಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...