ಯಾರಿಗೆ ಎಷ್ಟು ಗೌರವ ಕೊಡಬೇಕು ಎಂಬುದನ್ನು ಬಿಜೆಪಿಯಿಂದ ಕಲಿಯಬೇಕಿಲ್ಲ: ಡಿಕೆ ಶಿವಕುಮಾರ್

Date:

  • ಪ್ರಧಾನಿ ಮೋದಿ ಬೆಂಗಳೂರು ಭೇಟಿ, ಶಿಷ್ಟಾಚಾರ ಪಾಲನೆ ವಿಚಾರ ವಾಗ್ವಾದ
  • ಬಿಜೆಪಿ ನಾಯಕರ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್ ತೀಕ್ಷ್ಣ ತಿರುಗೇಟು

ಯಾರಿಗೆ ಎಷ್ಟು ಗೌರವ ಕೋಡಬೇಕು ಎಂಬುದನ್ನು ಬಿಜೆಪಿಯಿಂದ ಕಲಿಯಬೇಕಿಲ್ಲ. ನಮಗೂ ಗೊತ್ತಿದೆ. ರಾಜಕೀಯ ಪ್ರಜ್ಞೆ, ಸಮಯ ಪ್ರಜ್ಞೆ ಎಲ್ಲವೂ ಇದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಸರ್ಕಾರ ಶಿಷ್ಟಾಚಾರ ಪಾಲನೆ ಮಾಡಿಲ್ಲ ಎಂಬ ಬಿಜೆಪಿ ನಾಯಕರ ಮಾತಿಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, “ಪ್ರಧಾನಮಂತ್ರಿ ಕಚೇರಿಯಿಂದ ನಮಗೆ ಕರೆ ಬಂದಿತ್ತು. ಪ್ರಧಾನಿಯವರ ಸ್ವಾಗತಕ್ಕೆ ಬರುವುದು ಬೇಡ ಎಂದು ಕೇಂದ್ರ ಸರ್ಕಾರವೇ ನಮಗೆ ಹೇಳಿತ್ತು. ಹಾಗಾಗಿ ಸರ್ಕಾರದ ವತಿಯಿಂದ ಪ್ರಧಾನಿ ಮೋದಿ ಅವರ ಸ್ವಾಗತ ಮಾಡಿಸಿದ್ದೇವೆ” ಎಂದರು.

“ಅಶೋಕ್ ಅವರಿಗೆ ಸ್ವಲ್ಪ ಸಮಸ್ಯೆ ಇದ್ದಂತಿದೆ. ಬೇಕಾಬಿಟ್ಟಿ ಮಾತನಾಡುತ್ತಾರೆ. ಬೇರೆ ರಾಜ್ಯಗಳ ರೀತಿ ಅಲ್ಲ ನಮ್ಮ ಸಂಸ್ಕೃತಿ. ರಾಜಕೀಯ ಭಿನ್ನಾಭಿಪ್ರಾಯ ಇದ್ದರೂ ಪ್ರಧಾನಿ ಅವರಿಗೆ ಗೌರವ ಕೊಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯ ಬಿಜೆಪಿ ನಾಯಕರನ್ನು ಬೀದಿಯಲ್ಲಿ ನಿಲ್ಲಿಸಿದ ಪ್ರಧಾನಿ ಮೋದಿ : ಟ್ವೀಟ್ ಮೂಲಕ ಕಾಲೆಳೆದ ಕಾಂಗ್ರೆಸ್

ಅಥೆನ್ಸ್​ನಿಂದ ಮೋದಿ ಬರುವ ಕಾರಣ ನಿಖರವಾಗಿ ಇಂತಿಷ್ಟೇ ಹೊತ್ತಿಗೆ ಬೆಂಗಳೂರಿಗೆ ತಲುಪಬಹುದು ಎಂಬ ಖಚಿತತೆ ಇರಲಿಲ್ಲ. ತಮ್ಮ ಸ್ವಾಗತಕ್ಕೆ ಮುಖ್ಯಮಂತ್ರಿ, ರಾಜ್ಯಪಾಲರು ಬಂದು ತಾಸುಗಟ್ಟಲೆ ಕಾಯುವುದು ಬೇಡ ಎಂಬ ಕಾರಣಕ್ಕೆ ಅಧಿಕಾರಿಗಳನ್ನಷ್ಟೇ ಕಳುಹಿಸಿದರೆ ಸಾಕು ಎಂದು ಮೋದಿ ಹೇಳಿದ್ದರು ಎನ್ನಲಾಗಿದೆ.

ಅತ್ತ ಮೋದಿ ಕೂಡ ಹೆಚ್​ಎಎಲ್​ ಏರ್​ಪೋರ್ಟ್​ ಹೊರಭಾಗದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ವೇಳೆ, “ಪ್ರೋಟೋಕಾಲ್ ಪ್ರಕಾರ (ಶಿಷ್ಟಾಚಾರ) ಇಷ್ಟೊಂದು ಕಡಿಮೆ ಅವಧಿಯಲ್ಲಿ ವ್ಯವಸ್ಥೆ ಮಾಡಿದ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು” ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...