ಬಿಜೆಪಿಯಲ್ಲಿ ಟಿಕೆಟ್ ಹೇಗೆ ಕೊಡುತ್ತಾರೆ ಎಂಬುದು ಶೆಟ್ಟರಗೆ ಗೊತ್ತಿಲ್ಲವೇ?: ಶಾಸಕ ಟೆಂಗಿನಕಾಯಿ ಕಿಡಿ

Date:

  • ‘ಬಿಜೆಪಿಯಲ್ಲಿ ಟಿಕೆಟ್ ಮಾರಾಟದ ಪದ್ಧತಿಯಿಲ್ಲ’
  • ‘ಚೈತ್ರಾ ಕೇಸ್​ಗೂ ಬಿಜೆಪಿಗೂ ಸಂಬಂಧ ಇಲ್ಲ’

ಬಿಜೆಪಿಯಲ್ಲಿ ಟಿಕೆಟ್ ಮಾರಾಟದ ಪದ್ಧತಿಯಿಲ್ಲ. ನಮ್ಮ ಪಕ್ಷದಲ್ಲಿದ್ದ ಜಗದೀಶ ಶೆಟ್ಟರ ಅವರು ಹೇಗೆ ಟಿಕೆಟ್​ ತೆಗೆದುಕೊಂಡಿದ್ದರು, ಹೇಗೆ ಟಿಕೆಟ್ ಕೊಟ್ಟಿದ್ದರು ಎಂಬುದು ಗೊತ್ತಿಲ್ಲವೇ? ಎಂದು ಶೆಟ್ಟರ ವಿರುದ್ಧ ಬಿಜೆಪಿ ಶಾಸಕ ಮಹೇಶ​ ಟೆಂಗಿನಕಾಯಿ ಹರಿಹಾಯ್ದರು.

‘ಬಿಜೆಪಿಯವರು ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು’ ಎಂದು ಹೇಳಿದ್ದ ಶೆಟ್ಟರ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದರು.

‘ಕಾಂಗ್ರೆಸ್​ನಲ್ಲಿ ಜಗದೀಶ​ ಶೆಟ್ಟರ ಅವರನ್ನು ಗುರುತಿಸುತ್ತಿಲ್ಲ. ಅದಕ್ಕೆ ಅವರಿಗೆ ಕಷ್ಟ ಆಗಿದೆ. ಹೀಗಾಗಿ ಅವರು ಮಾಧ್ಯಮಗಳಿಗೆ ಇಂತಹ ಹೇಳಿಕೆ ನೀಡುತ್ತಿದ್ದಾರೆ’ ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ನಿದ್ದೆಯಿಂದ ಎದ್ದಿರುವ ನ್ಯೂಸ್ ಚಾನೆಲ್ ಒಕ್ಕೂಟ ಮರ್ಯಾದೆ ಉಳಿಸಿಕೊಳ್ಳಲಿ

ಬಿಜೆಪಿಯಲ್ಲಿ ಲಿಂಗಾಯತ ಸಮುದಾಯದ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬ ​ಶೆಟ್ಟರ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಬಿಜೆಪಿ ಅತಿ ಹೆಚ್ಚು ಬಾರಿ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿದೆ. ಶೆಟ್ಟರ​ ಅವರಿಗೆ 30 ವರ್ಷ ಬಿಜೆಪಿ ಎಲ್ಲ ಕೊಟ್ಟಿದೆ. ನಿಮಗೆ ಅನ್ಯಾಯವಾಗಿದ್ದರೆ, ತಾಕತ್ ಇದ್ದರೆ ನೀವು ಸರಿಮಾಡಿಕೊಳ್ಳಿ. ರಾಜಕೀಯಕ್ಕೆ ಸಮುದಾಯವನ್ನು ಎಳೆದು ತರಬೇಡಿ’ ಎಂದು ಎಚ್ಚರಿಸಿದರು.

ಚೈತ್ರಾ ಕುಂದಾಪುರ ವಿಚಾರಕ್ಕೆ ಹೇಳಿಕೆ ನೀಡಿದ ಟೆಂಗಿನಕಾಯಿ, ‘ಬಿಜೆಪಿಯಲ್ಲಿ ಟಿಕೆಟ್​ ಮಾರಾಟ ಪದ್ಧತಿ ಇಲ್ಲ. ಚೈತ್ರಾ ಕುಂದಾಪುರ ಕೇಸ್​ಗೂ ಬಿಜೆಪಿಗೂ ಯಾವ ಸಂಬಂಧ ಇಲ್ಲ. ಕೆಲವರು ತಮ್ಮ ಚಟಕ್ಕೆ ಈ ರೀತಿ ಮಾಡಿದರೆ ಅದಕ್ಕೆ ಬಿಜೆಪಿ ಉತ್ತರ ನೀಡುವುದಿಲ್ಲ. ಈ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...