ಚಿಕ್ಕಬಳ್ಳಾಪುರ | ಪುತ್ಥಳಿ ವಿವಾದ; ಕೆಂಪೇಗೌಡರನ್ನು ಅಪಮಾನಿಸಿದರೆ ತಕ್ಕ ಪಾಠ: ನಿರ್ಮಾಪಕ ಉಮಾಪತಿ

Date:

ಕೆಂಪೇಗೌಡರನ್ನು ಅಪಮಾನಿಸುವ ಮೂಲಕ ಒಕ್ಕಲಿಗ ಸಮುದಾಯಕ್ಕೆ ಕಳಂಕ ತಂದರೆ ತಕ್ಕ ಪಾಠ ಕಲಿಸುತ್ತೇವೆ ಎಂದು ಒಕ್ಕಲಿಗ ಸಂಘದ ನಿರ್ದೇಶಕ ಹಾಗೂ ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಖಡಕ್‌ ಎಚ್ಚರಿಕೆ ನೀಡಿದರು.

ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುಡಿಬಂಡೆ, ಚಿಕ್ಕಬಳ್ಳಾಪುರಕ್ಕೆ ತನ್ನದೇ ಆದ ಇತಿಹಾಸವಿದ್ದು, ಅದನ್ನು ಹಾಳು ಮಾಡುವುದು ಬೇಡ. ನಾಲ್ಕು ಗೋಡೆಗಳ ನಡುವೆ ಇರಬೇಕಾದ ವಿಚಾರವನ್ನು ಬೀದಿಗೆ ತಂದಿದ್ದೀರಿ ಎಂದು ಕಿಡಿಕಾರಿದರು.

ಗುಡಿಬಂಡೆಯಲ್ಲಿ ಪುತ್ಥಳಿ ನಿರ್ಮಾಣದ ವಿಚಾರದಲ್ಲಿ ಒಕ್ಕಲಿಗರು ಮತ್ತು ಬಲಿಜಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ವ್ಯಕ್ತಿಯೋರ್ವ ಕೆಂಪೇಗೌಡರಿಗೆ ಚಪ್ಪಲಿ ಹಾರ ಹಾಕುತ್ತೇವೆ ಎಂದು ಹೇಳುವ ಮೂಲಕ ಕೆಂಪೇಗೌಡರಿಗೆ ಮತ್ತು ಇಡೀ ಸಮುದಾಯಕ್ಕೆ ಅಪಮಾನ ಮಾಡಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಇವೆ. ಈ ರೀತಿ ಹೇಳಿರುವ ವ್ಯಕ್ತಿ ಕ್ಷಮೆ ಕೇಳದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ನೀಡಬೇಕಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಕೋನಪ್ಪರೆಡ್ಡಿ ಮಾತನಾಡಿ, ಒಕ್ಕಲಿಗ ಸಮುದಾಯ ಶಾಂತಿ ಸಾಮರಸ್ಯದಿಂದ ಎಲ್ಲರ ಜೊತೆ ಬದುಕುತ್ತಿದೆ. ಗುಡಿಬಂಡೆಯ ಅಂಬೇಡ್ಕರ್ ವೃತ್ತದಲ್ಲಿ ಎರಡು ಗುಂಟೆ ಸರ್ಕಾರಿ ಖರಾಬಿನಲ್ಲಿ ಆವಳಿ ಬೈರೇಗೌಡ ಅವರ ವಿಗ್ರಹ ಪ್ರತಿಷ್ಠಾಪಿಸಲು ಈ ಹಿಂದೆಯೇ ತೀರ್ಮಾನಿಸಲಾಗಿತ್ತು. ಆದರೆ, ಕೈವಾರ ತಾತಯ್ಯ ಅವರ ಪುತ್ಥಳಿ ಸ್ಥಾಪನೆಗೆ ಮುಂದಾಗಿದ್ದು, ಈ ವೇಳೆ ಎರಡೂ ಸಮುದಾಯಗಳ ನಡುವೆ ವಾಗ್ವಾದ ನಡೆದಿದೆ. ಆಗ ಕಿಡಿಗೇಡಿಯೊಬ್ಬ ಕೆಂಪೇಗೌಡರಿಗೆ ಅಪಮಾನ ಮಾಡಿದ್ದಾನೆ ಎಂದು ಗುಡುಗಿದರು.

IMG 20250502 WA0040

ಕೈವಾರ ತಾತಯ್ಯ ಅವರ ಬಗ್ಗೆ ನಮಗೆ ಗೌರವವಿದೆ. ಆದರೆ ಕೆಲವರು ಜಾತಿಗಳ ನಡುವೆ ಸಾಮರಸ್ಯ ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಬಲಿಜ ಸಮುದಾಯದ ಹಿರಿಯರು ಸಾಮರಸ್ಯ ಕೆಡಿಸುವವರಿಗೆ ಬುದ್ಧಿ ಹೇಳಬೇಕು. ಕೆಂಪೇಗೌಡರನ್ನು ಅವಮಾನಗೊಳಿಸಿದ ವ್ಯಕ್ತಿ ಕ್ಷಮೆ ಕೇಳಬೇಕು. ಪೊಲೀಸರು ಆತನನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಯಲುವಳ್ಳಿ ರಮೇಶ್ ಮಾತನಾಡಿ, ಗುಡಿಬಂಡೆಯ ಅಭಿವೃದ್ಧಿಗೆ ಕಾರಣರಾದವರು ಆವಳಿ ಬೈರೇಗೌಡರು. ಇಲ್ಲಿ ಅವರ ಪುತ್ಥಳಿ ಸ್ಥಾಪಿಸಲು ಕಾನೂನು ಅನುಮತಿಗಾಗಿ ಸಮುದಾಯದವರು ಕಾಯುತ್ತಿದ್ದರು ಎಂದರು.

ಒಕ್ಕಲಿಗರು ಜಾತಿ ತಾರತಮ್ಯ ಮಾಡಿಲ್ಲ. ಇತರೆ ಸಮುದಾಯಗಳ ಜೊತೆ ಅಣ್ಣ ತಮ್ಮಂದಿರ ರೀತಿ ಬದುಕುತ್ತಿದ್ದೇವೆ. ಆದರೆ ಕೆಲವು ಕಿಡಿಗೇಡಿಗಳು ಸಾರಮಸ್ಯ ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಯಾರ ತಂಟೆಗೂ ಹೋಗುವುದಿಲ್ಲ. ನಮ್ಮ ತಂಟೆಗೆ ಬಂದರೆ ಸುಮ್ಮನೆ ಬಿಡುವವರೂ ಅಲ್ಲ ಎಂದು ಆಕ್ರೋಶಗೊಂಡರು.

ಒಕ್ಕಲಿಗರ ಸಂಘದ ನಿರ್ದೇಶಕ ಡಾ.ರಮೇಶ್ ಮಾತನಾಡಿ, ಕೆಂಪೇಗೌಡರಿಗೆ ಈ ರೀತಿಯ ಹೇಳಿರುವುದನ್ನು ಸಂಘ ಖಂಡಿಸುತ್ತದೆ. ಸಮಾಜದಲ್ಲಿ ಸಾಮರಸ್ಯ ಕೆಡಿಸಲು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ. ಸಮುದಾಯ ಕಾನೂನಿನಡಿ ಹೋರಾಟ ನಡೆಸುತ್ತದೆ. ಕೈವಾರ ತಾತಯ್ಯ ಅವರು ಮಾನವ ಕುಲ ಒಂದೇ ಎಂದು ಸಾರಿದ್ದಾರೆ. ಅವರಿಗೆ ನಾವೆಲ್ಲರೂ ನಮಿಸುತ್ತೇವೆ ಎಂದರು. 

ಇದನ್ನೂ ಓದಿ : ಬೆಂ.ಗ್ರಾಮಾಂತರ | ಮೇ 4ರಂದು ನೀಟ್ ಪರೀಕ್ಷೆ, ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ: ಜಿಲ್ಲಾಧಿಕಾರಿ

ಗುಡಿಬಂಡೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಮಂಜುನಾಥ ರೆಡ್ಡಿ ಮಾತನಾಡಿ, ಗುಡಿಬಂಡೆಯಲ್ಲಿ ಒಕ್ಕಲಿಗ ಸಮುದಾಯದ ಜನಸಂಖ್ಯೆ ಕಡಿಮೆಯಿದೆ. ಪಟ್ಟಣ ಪಂಚಾಯಿತಿ ಅಧ್ಯಕ್ಷರೂ ಸೇರಿದಂತೆ ಆರೇಳು ಮಂದಿ ಸದಸ್ಯರು ಬಲಿಜ‌ ಸಮುದಾಯದವರೇ ಇದ್ದಾರೆ. ಎಲ್ಲರೂ ಸೇರಿ ಇಲ್ಲಿ ಕೈವಾರ ತಾತಯ್ಯ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...