ಖ್ಯಾತ ನೇತ್ರತಜ್ಞ ಭುಜಂಗ ಶೆಟ್ಟಿ ನಿಧನ

Date:

  • ಭುಜಂಗ ಶೆಟ್ಟಿ ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ
  • ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಅವರು ನಿಪುಣರಾಗಿದ್ದರು

ಖ್ಯಾತ ನೇತ್ರ ತಜ್ಞ ಮತ್ತು ನಾರಾಯಣ ನೇತ್ರಾಲಯದ ಅಧ್ಯಕ್ಷರೂ ಆಗಿದ್ದ ಡಾ. ಕೆ ಭುಜಂಗ ಶೆಟ್ಟಿ ಅವರು ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.

ಭುಜಂಗ ಶೆಟ್ಟಿ(69) ನಾರಾಯಣ ನೇತ್ರಾಲಯದಲ್ಲಿ ಕರ್ತವ್ಯ ನಿರ್ವಹಿಸಿ, ಸಂಜೆ ಮನೆಗೆ ತೆರಳಿದ್ದರು. ವ್ಯಾಯಾಮದ ಬಳಿಕ ಎದೆಯಲ್ಲಿ ನೋವು ಕಾಣಿಸಿಕೊಂಡ ಕಾರಣ ಅವರನ್ನು ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಆಸ್ಪತ್ರೆಗೆ ಕರೆತರುವ ವೇಳೆ ಹೃದಯ ಬಡಿತ ನಿಂತಿತ್ತು. ಆಸ್ಪತ್ರೆಯಲ್ಲಿ ಸಿಪಿಆರ್​​ ಮಾಡಿದ್ದರೂ ಪ್ರಯೋಜನವಾಗಲಿಲ್ಲ. ಸದ್ಯ ಮೃತದೇಹ ಇನ್ನೂ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿದೆ ಎನ್ನಲಾಗಿದೆ. ಶನಿವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರಲಿದೆ. ಭುಜಂಗ ಶೆಟ್ಟಿಯವರು ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಅವರು ಕಾರಣರಾಗಿದ್ದಾರೆ. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಅವರು ನಿಪುಣರಾಗಿದ್ದರು.

ನಾರಾಯಣ ನೇತ್ರಾಲಯದಲ್ಲಿ ಹಲವು ಉಪವಿಭಾಗಗಳ ಅಭಿವೃದ್ಧಿಯನ್ನು ಸಕ್ರಿಯವಾಗಿ ಪ್ರೋತ್ಸಾಹಿಸಿದ್ದಾರೆ. ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಕಾರಣರಾಗಿದ್ದರು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ಸೌಲಭ್ಯಕ್ಕೆ ಡಿಜಿಸಿಎ ಅನುಮತಿ

ರಿವರ್ಸ್ ಡಯಾಬಿಟೀಸ್ ಅಳವಡಿಸಿಕೊಂಡು ತಮ್ಮ ದೇಹವನ್ನೇ ಪ್ರಯೋಗಕ್ಕೆ ಗುರಿಪಡಿಸುವ ಮೂಲಕ ಮಧುಮೇಹವನ್ನು ಸಂಪೂರ್ಣವಾಗಿ ಡಾ. ಭುಜಂಗಶೆಟ್ಟಿ ಅವರು ಗೆದ್ದಿದ್ದರು. ರಿವರ್ಸ್ ಡಯಾಬಿಟೀಸ್ ಅಳವಡಿಸಿಕೊಳ್ಳುವಂತೆ ಅನೇಕರಿಗೆ ಅವರು ಸಲಹೆ ನೀಡಿದ್ದರು. ‘ರಿಸರ್‍ವಿಂಗ್ ಡಯಾಬಿಟಿಸ್’ ಎಂಬ ಕ್ಲಿನಿಕ್ ಸಹ ತೆರೆದಿದ್ದರು.

1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ್ದರು. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದಲ್ಲಿ ರೆಸಿಡೆನ್ಸಿ ತರಬೇತಿ ಪಡೆದಿದ್ದರು. 80ರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ನೇತ್ರ ಚಿಕಿಯ್ಸಾಲಯವನ್ನು ಪ್ರಾರಂಭಿಸಿದರು. ಅದಾದ ನಂತರ ನಾರಾಯಣ ನೇತ್ರಾಲಯದ ಅಧ್ಯಕ್ಷರಾಗಿದ್ದರು. 

ಭುಜಂಗ ಶೆಟ್ಟಿಯವರ ಸತತ ಪ್ರಯತ್ನ ಮತ್ತು ನೇತ್ರ ದಾನದ ಬಗ್ಗೆ ಜಾಗೃತಿಯಿಂದಾಗಿ 71,538 ಕ್ಕೂ ಹೆಚ್ಚು ಜನರಿಗೆ ದೃಷ್ಟಿ ಭಾಗ್ಯ ಕಲ್ಪಿಸಿದ್ದಾರೆ. 15,254 ನೇತ್ರ ದಾನವಾಗಿದೆ. ಕರ್ನಾಟಕದಲ್ಲಿ ಕಾರ್ನಿಯಲ್ ಕುರುಡುತನ ಗಣನೀಯವಾಗಿ ಕಡಿಮೆ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...