ಕಲಬುರಗಿ | ಡಾ. ಬಿ.ಆರ್.‌ ಅಂಬೇಡ್ಕರರು ಶೋಷಿತರಿಗೆ ನ್ಯಾಯ ಒದಗಿಸಲು ಶ್ರಮಿಸಿದರು : ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

Date:

ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಸಂವಿಧಾನ ಅಷ್ಟೇ ರಚನೆ ಮಾಡಲಿಲ್ಲ, ಬದಲಾಗಿ ಈ ದೇಶದ ಬಡ, ಶೋಷಿತರು ಸೇರಿದಂತೆ ತುಳಿತಕ್ಕೊಳಗಾದ ಸಮುದಾಯಗಳಿಗೆ ಹೆಣ್ಣು-ಗಂಡು ಭೇದವಿಲ್ಲದೆ ಸರ್ವರನ್ನು ಸಮನಾಗಿ ಕಾಣಲು ಹೋರಾಡಿದ ಸಾಮಾಜಿಕ ಕ್ರಾಂತಿಯ ಅಪ್ರತಿಮ ಹೋರಾಟಗಾರಾಗಿದ್ದರು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ, ಅರೆ ಸರಕಾರಿ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ನೌಕರರ ಸಂಘ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಡಾ.ಬಿ.ಅಂಬೇಡ್ಕರ್‌ ಅವರ 67ನೇ ಮಹಾ ಪರಿನಿರ್ವಾಣ ದಿನ ಅಂಗವಾಗಿ ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

“ಭಾರತ ಕೇವಲ ಸ್ವಾತಂತ್ರ್ಯ ದೇಶ ಅಷ್ಟೇ ಅಲ್ಲದೆ ಗಣರಾಜ್ಯವಾಗಿದೆ. ಅಂಬೇಡ್ಕರವರು ಸಂವಿಧಾನ ರಚಿಸಿ ಅದನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಿದರು. ಶಿಕ್ಷಣ ಮತ್ತು ಸಮಾನತೆಗೆ ಹೆಚ್ಚಿನ ಒತ್ತು ನೀಡಿದ ಬಾಬಾ ಸಾಹೇಬರು ಶಿಕ್ಷಣ ಮತ್ತು ಆರ್ಥಿಕ ತಜ್ಞರಾಗಿದ್ದರು. ನಾವೆಲ್ಲರು ಅಂಬೇಡ್ಕರ್ ಅವರ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಪ್ರತಿಯೊಬ್ಬರು ಶಿಕ್ಷಣ ಪಡೆದು ಸುಭದ್ರ ದೇಶ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು” ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಬುರಗಿ ಪದವಿ ಮಹಾವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕ ಡಾ.ವಿಜಯಕುಮಾರ ಸಾಲಿಮನಿ ವಿಶೇಷ ಉಪನ್ಯಾಸ ನೀಡಿ, “ಭಾರತದಲ್ಲಿ ಜಾತಿ ಪದ್ಧತಿ ನಿರ್ಮೂಲನೆಗೆ ಅಂಬೇಡ್ಕರರು ಜೀವನದುದ್ದಕ್ಕೂ ಹೋರಾಡಿದರು. ಅಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿ ಇಡೀ ವಿಶ್ವವೇ ಮೆಚ್ಚುವಂತಹ ಶ್ರೇಷ್ಠ ಸಂವಿಧಾನ ಅವರು ನೀಡಿದ್ದಾರೆ” ಎಂದರು.

ಕಾರ್ಯಕ್ರಮಕ್ಕೂ ಮುನ್ನ ಸಿದ್ದಾರ್ಥ ವಿಹಾರ ಟ್ರಸ್ಟ್‌ ನ ಬೌದ್ಧ ಬಿಕ್ಕು ಸಂಘಾನಂದ ಭಂತೇಜಿ ನೇತೃತ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಬುದ್ಧ ವಂದನೆ ಸಲ್ಲಿಸಲಾಯಿತು.

ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ನಗರ ಪೊಲೀಸ್ ಆಯುಕ್ತ ಚೇತನಕುಮಾರ ಆರ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ ಸೇರಿದಂತೆ ಇತರರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? Fact check | ಯತ್ನಾಳ್‌ ಹೇಳಿದ ಭಾರೀ ಸುಳ್ಳು: ಸಿಎಂ ವಿರುದ್ಧ ಆರೋಪ ಸುಳ್ಳೆಂಬುದಕ್ಕೆ ಇಲ್ಲಿದೆ ಸಾಕ್ಷಿ

ಕಾರ್ಯಕ್ರಮದಲ್ಲಿ ಡಿ.ಹೆಚ್.ಓ. ಡಾ.ರಾಜಶೇಖರ ಮಾಲಿ, ಜಿಮ್ಸ್ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಅಂಬಾರಾಯ ರುದ್ರವಾಡಿ, ಕರ್ನಾಟಕ ರಾಜ್ಯ ಸರ್ಕಾರಿ, ಅರೆಸರಕಾರಿ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯಾಧ್ಯಕ್ಷ ಮಹೇಶ ಹುಬಳಿ, ಪದಾಧಿಕಾರಿಗಳಾದ ಸೋಮಶೇಖರ ಎಸ್. ಮದನಕರ್, ನಂದಿನಿ ಸನ್ಬಾಳ, ಜೈ ಭೀಮ್, ಜಮುನಾ ಟಿಳೆ, ಸುಮಂಗಲಾ ಸಂಗಾವಿ ಸೇರಿದಂತೆ ವಿವಿಧ ಸಮಾಜದ ಮುಖಂಡರು. ನೌಕರರು, ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...