ಕೋಲಾರ: ತಾಲೂಕಿನ ನರಸಾಪುರ ಗ್ರಾಮದ ಕೆ ಪಿ ಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿಜ್ಞಾನೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಇಸಿಓ ಶ್ರೀನಿವಾಸ್ ಮಾತನಾಡಿ ಮಕ್ಕಳಲ್ಲಿ ವಿಜ್ಞಾನದ ಆಸಕ್ತಿ ಹೆಚ್ಚಿಸಬೇಕಿದೆ ಇದಕ್ಕಾಗಿ ವಿಜ್ಞಾನದ ಪ್ರದರ್ಶನಗಳು ಬಹಳ ಸಹಕಾರಿಯಾಗಿವೆ ಮಾನವ ಕುಲದ ಅಭಿವೃದ್ಧಿಗಾಗಿ ಹಾಗೂ ಶಾಂತಿಗಾಗಿ ಶ್ರಮಿಸುತ್ತಿರುವ ವಿಶ್ವದ ಎಲ್ಲಾ ವಿಜ್ಞಾನಿಗಳಿಗೆ ಈ ದಿನದಂದು ಅಭಿನಂದನೆಗಳನ್ನು ತಿಳಿಸಬೇಕು ಹಾಗೂ ವಿಜ್ಞಾನದ ಮೂಲಕ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿದೆ ಎಂದರು.
ನರಸಾಪುರ ಕ್ಲಸ್ಟರ್ ಸಿ ಆರ್ ಪಿ ಬಸವರಾಜ್ ಮಾತನಾಡಿ ವಿಜ್ಞಾನಿ ಸಿ.ವಿ.ರಾಮನ್ ಅವರು “ರಾಮನ್ ಪರಿಣಾಮ” ಸಂಶೋಧನೆಗೋಸ್ಕರ ಹಾಗೂ ಅವರ ಸವಿ ನೆನಪಿಗೋಸ್ಕರ ಈ ದಿನವನ್ನು ರಾಷ್ಟ್ರದಾದ್ಯಂತ ರಾಷ್ಟ್ರೀಯ ವಿಜ್ಞಾನ ದಿನವಾಗಿ ಆಚರಿಸಲಾಗುತ್ತದೆ. ಈ ದಿನದಂದು ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಚಟುವಟಿಕೆಗಳನ್ನು ನಡೆಸಿ ಎಲ್ಲರಲ್ಲೂ ವೈಜ್ಞಾನಿಕ ಮನೋಭಾವ ಮೂಡಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.
ಇದನ್ನು ಓದಿದ್ದೀರಾ..? ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧ ಅಧಿಕಾರ ಸ್ವೀಕಾರ
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಜಗನ್ನಾಥ್, ಪ್ರೌಢಶಾಲೆಯ ಮುಖ್ಯಶಿಕ್ಷಕ ಗೋಪಿನಾಥ್, ಶಿಕ್ಷಕರಾದ ಪಿ.ಭಾರತಿ, ಹಂಸವೇಣಿ, ಹೇಮಾವತಿ, ಕುಸುಮ, ಪರ್ವೀನ್ ತಾಜ್, ಸೌಮ್ಯ, ಮನುಜಾ, ಲತಾ, ಡಿ ಕೆ ವೆಂಕಟರವಣ, ಹನುಮಾನ್ ಸಿಂಗ್, ಶ್ರೀರಾಮಯ್ಯ, ಶಾಲಾ ಸಿಬ್ಬಂದಿ ಮತ್ತು ಮಕ್ಕಳು ಇದ್ದರು.





