ಉಡುಪಿ | ಹಿಂದುಳಿದ, ದಲಿತರು ಪಡೆಯುವ ಪಿಎಚ್ ಡಿ ಪದವಿ,‌ ಜಗತ್ತಿನ ನೊಬೆಲ್ ಪ್ರಶಸ್ತಿಗೆ ಸಮ – ಪ್ರೊ ಫಣಿರಾಜ್

Date:

ಪದವಿಯ ಗುಣಮಟ್ಟ ಕೆಳಮುಖವಾಗುತ್ತಾ ಹೋಗುತ್ತಿದೆ ಉನ್ನತ ಶಿಕ್ಷಣದಲ್ಲಿ ಸಂಶೋದನೆಯಲ್ಲಿ ರಾಜಕಾರಣಿಗಳು ಮಾತ್ರವಲ್ಲ, ಜಾತಿ ಮನಸ್ಥಿತಿಯವರು, ಸಂಶೋಧಕರಿಗೇ ಹೆಜ್ಜೆ ಹೆಜ್ಜೆಗೂ ದೌರ್ಜನ್ಯ, ಹಿಂಸೆಯನ್ನು ನೀಡುತ್ತಿದ್ದಾರೆ ಅದನ್ನೆಲ್ಲ ಹಿಮ್ಮೆಟ್ಟಿ ಪಿಎಚ್ ಡಿ ಪಡೆಯುವುದು ಬಹಳ ಕಷ್ಟಕರ ಹಿಂದುಳಿದ ಸಮುದಾಯ ದಲಿತ ಸಮುದಾಯದ ಒಬ್ಬ ವ್ಯಕ್ತಿ ಪಿಹೆಚ್ ಡಿ ಪಡೆದರೆ ನೊಬಲ್ ಪ್ರಶಸ್ತಿಗೆ ಸಮ ಎಂದು ಖ್ಯಾತ ಚಿಂತಕ ಪ್ರೊ ಪಣಿರಾಜ್ ಹೇಳಿದರು.

1004381585

ಅವರು ಬ್ರಹ್ಮಾವರದ ಅಂಬೇಡ್ಕರ್ ಯುವಕ ಮಂಡಲ ಮತ್ತು ಅಂಕದಮನೆ ಜಾನಪದ ತಂಡದ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡ ಡಾ ಶಶಿರಜ್ ರವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

2023ನೇ ಇಸವಿಯ ಸಮೀಕ್ಷೆ ಪ್ರಕಾರ ಶೇ 100 ರಲ್ಲಿ ಶೇ 22ರಷ್ಟು ಮಂದಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಇದರಲ್ಲಿ ಶೇ 19 ರಷ್ಟು ಮೇಲ್ವರ್ಗಕ್ಕೆ ಸೇರಿದ ಸಮುದಾಯವರು ಇದ್ದರೆ ಶೇ 3 ರಷ್ಟು ಮಾತ್ರ ಹಿಂದುಳಿದ ದಲಿತ ವರ್ಗದ ಜನರು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಅದರಲ್ಲೂ ಪಿಎಚ್ ಡಿ ಮಾಡುವುದು 0.05% ಇನ್ನೂರು ಜನರಲ್ಲಿ ಒಬ್ಬರು ಮಾತ್ರ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಜಿನಿಯರಿಂಗ್ ವಿಭಾಗದಲ್ಲಿ ಪಿಎಚ್ ಡಿ ಮಾಡಿ ಹೊರ ಬರುವುದೆ ಕಷ್ಟಕರವಾಗಿದೆ, ಭಾರತದ ಕಳೆದ ಅಂಕಿಅಂಶಗಳನ್ನು ತೆಗೆದು ನೋಡಿದರೆ ಪಿಎಚ್ ಡಿ ಪದವಿ ಪಡೆಯಲು ಹೊರಟ ಎಂಟು ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಂದುಳಿದ ವರ್ಗದ ಜನರಿಗೆ ಸ್ಥಾನಮಾನ ಸಿಗುವುದು ಬೇಡ ಎಂಬುದು ಮೇಲ್ವರ್ಗದವರ ತೀರ್ಮಾನ, ವಿದ್ಯೆಯನ್ನು ಕಲಿತು ಉನ್ನತ ಸ್ಥಾನಕ್ಕೆ ಹೋಗದಂತೆ ತಡೆಯಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ, ಅದನ್ನು ಮೆಟ್ಟುನಿಂತು ಛಲಬಿಡದೆ ಮುಂದೆ ಸಾಗಬೇಕು ಎಂದು ಹೇಳಿದರು.

1004381582

ದಲಿತ ಸಂಘರ್ಷ ಸಮಿತಿಯ ಉಡುಪಿ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮ್‌ರಾಜ್ ಬಿರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ ಕುವೆಂಪು ವಿಶ್ವವಿದ್ಯಾಲಯದ ಪ್ರವಾಸೋದ್ಯಮ ಆಡಳಿತ ಮತ್ತು ನಿರ್ವಹಣೆ ವಿಷಯದಲ್ಲಿ ಶಶಿರಾಜ್ ಯು. ಇವರು ಪಿಹೆಚ್.ಡಿ. ಪದವಿಯನ್ನು ಪಡೆದುಕೊಂಡಿರುವುದು ಬಹಳಷ್ಟು ಸಂತಸ ತಂದಿದೆ ಹಾಗಾಗಿ ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಡಾ ಶಶಿರಾಜ್ ರವರು “ಇಂಪ್ಯಾಕ್ಟ್ ಆಫ್ ಮಾರ್ಕೆಟ್ ಸೆಗ್ಡೆಂಟೇಷನ್, ಟಾರ್ಗೆಟಿಂಗ್ ಆಂಡ್ ಪೊಸಿಷನಿಂಗ್ ಆನ್ ಮೆಡಿಕಲ್ ಟೂರಿಸಂ ಎ ಸ್ಟಡಿ ಇನ್ ಕರ್ನಾಟಕ” ಎಂಬ ಮಹಾಪ್ರಬಂಧವನ್ನು ಮಂಡಿಸಿದ್ದರು. ಡಾ. ಬಿನೋಯ್ ಟಿ. ಎ., ಸಹ ಪ್ರಾದ್ಯಾಪಕರು, ಕೇಂದ್ರೀಯ ವಿಶ್ವವಿದ್ಯಾಲಯ, ಕಾಸರಗೋಡು, ಕೇರಳ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು. ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಶಿವಮೊಗ್ಗದಲ್ಲಿ ಸಹಾಯಕ ಪ್ರಾದ್ಯಾಪಕರಾಗಿ, ಪ್ರವಾಸೊದ್ಯಮ ಆಡಳಿತ ವಿಭಾಗದ ಮುಖ್ಯಸ್ಥರಾಗಿ ಹಾಗೂ ಕಾಲೇಜಿನ ಎನ್.ಸಿ.ಸಿ. ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶಶಿರಾಜ್ ರವರನ್ನು ಪರಿಚಯಿಸಿದರು.

1004381581

ದಸಂಸ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ್ ಗಿಳಿಯಾರ್ ಮಾತನಾಡಿ ಭಾರತದಲ್ಲಿ ಸಂವಿಧಾನ ಅಂಗೀಕಾರವಾದ ನಂತರ ನಮಗೆ ವಿದ್ಯೆಯನ್ನು ಪಡೆಯುವ ಹಕ್ಕು ಸಿಕ್ಕಿತು, ನಮ್ಮವರೇ ಉನ್ನತ ಪಟ್ಟದ ಪದವಿಯನ್ನು ಪಡೆಯುವಾಗ ಆಗುವ ಸಂತೋಷ ಅಷ್ಟಿಷ್ಟಲ್ಲ, ನಮ್ಮ ಬಿರ್ತಿಯ ಶಶಿರಾಜ್ ಗೆ ಪಿ ಎಚ್ ಡಿ ಪದವಿ ಸಿಕ್ಕಿದರೂ ನಾವೇ ಆ ಪದವಿಯನ್ನು ಪಡೆದ ಅನುಭವವಾಗುತ್ತಿದೆ. ಡಾ ಶಶಿರಾಜ್ ಬರವಣಿಗೆ ಮುಂದಿನ ಎಲ್ಲಾ ಕಾಲದಲ್ಲೂ ಜನ ಮಾಸದಲ್ಲಿ ಇರುತ್ತದೆ ಅವರ ಸಂಶೋಧನೆ ಜನೋಪಯೋಗಿ ಆಗಬೇಕು ದೇಶದ ಅಭಿವೃದ್ಧಿಯಲ್ಲಿ ಅವರ ಸಂಶೋಧನೆ ಬಹಳ ಪ್ರಾಮುಖ್ಯತೆ ಪಡೆಯಲಿದೆ ಎಂದು ಶುಭ ಹಾರೈಸಿದರು.

1004381580

ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಬಿರ್ತಿ, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ಎಸ್. ನಾರಾಯಣ್, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿತ್ಯಾನಂದ ಬಿ.ಆರ್, ದಸಂಸ (ಅಂಬೇಡ್ಕವಾದ) ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ್ ಮಾಸ್ಟರ್ ಮಾತನಾಡಿದರು. ನಾಗವೇಣಿ ಪಂಡರಿನಾಥ್, ದೇವಾನಂದ್ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು, ಗಣೇಶ್ ಬಿರ್ತಿ ಕಾರ್ಯಕ್ರಮ ನಿರೂಪಿಸಿದರು.

1004381579
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...