ಕಾರ್ಮಿಕರ ಕನಿಷ್ಠ ವೇತನದ ಕರಡು ಅಧಿಸೂಚನೆ; ಸ್ವಚ್ಛತೆ ಕೆಲಸದಲ್ಲಿ ತೊಡಗಿರುವರಿಗೆ ತಿಂಗಳಿಗೆ ₹25,714

Date:

ವಿವಿಧ ಕೌಶಲ್ಯ ಸಹಿತ ಮತ್ತು ಕೌಶಲ್ಯ ರಹಿತ ಕಾರ್ಮಿಕರ ಕನಿಷ್ಠ ವೇತನಕ್ಕೆ ಸಂಬಂಧಿಸಿದಂತೆ ಕಾರ್ಮಿಕರ ಇಲಾಖೆ ಪರಿಷ್ಕೃತ ಅಧಿಸೂಚನೆಗಳನ್ನು ಹೊರಡಿಸಿದ್ದು, ಶೌಚಾಲಯ, ಸ್ನಾನಗೃಹಗಳು, ಒಳಚರಂಡಿಗಳನ್ನು ಶುಚಿಮಾಡುವ ಕೆಲಸಗಳಲ್ಲಿ ತೊಡಗಿರುವ ವಲಯ–1ರಲ್ಲಿ ದಿನಕ್ಕೆ ₹989, ತಿಂಗಳಿಗೆ ₹25,714, ವಲಯ–2 ದಿನಕ್ಕೆ ₹899, ತಿಂಗಳಿಗೆ ₹23,376.43, ವಲಯ–3ರಲ್ಲಿ ದಿನಕ್ಕೆ ₹817.36ರಂತೆ, ತಿಂಗಳಿಗೆ ₹21,251.30ಕ್ಕೆ ತಲುಪಿದೆ.

ಅತಿ ಕುಶಲ ಎಲೆಕ್ಟ್ರಿಷಿಯನ್‌ಗಳಿಗೆ ದಿನಗೂಲಿ ದಿನಕ್ಕೆ ₹1,316 ಆಗಿದ್ದು, ತಿಂಗಳಿಗೆ ₹34,225.42 ಆಗಿದೆ. ನುರಿತ ಎಲೆಕ್ಟ್ರಿಷಿಯನ್‌ಗಳಿಗೆ ದಿನಗೂಲಿ 1,196.69 ಮತ್ತು ತಿಂಗಳಿಗೆ ₹31,114.02 ಆಗಿದೆ. ಅರೆ ಕುಶಲ ಕಾರ್ಮಿಕರಿಗೆ ದಿನಕ್ಕೆ ₹1,087.90 ಹೆಚ್ಚಳವಾಗಿದ್ದು, ತಿಂಗಳಿಗೆ ₹28,285ಕ್ಕೆ ತಲುಪಿದೆ.

ಇತರ ವಲಯಗಳಲ್ಲಿ, ಅತಿ ಕೌಶಲ ಕೆಲಸಗಾರರಿಗೆ ಕನಿಷ್ಠ ದೈನಂದಿನ ವೇತನ ₹1,196.69 ರಿಂದ ₹989ರವರೆಗೆ ಇರುತ್ತದೆ. ಆದರೆ ಕೌಶಲ ರಹಿತ ಕೆಲಸಗಾರರು ದಿನಕ್ಕೆ ₹743 ರಿಂದ ₹899.09ರವರೆಗಿನ ವೇತನಕ್ಕೆ ಅರ್ಹರಾಗಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯದಾದ್ಯಂತ ಕನಿಷ್ಠ ವೇತನ ಕಾಯ್ದೆ 1984ರ ಕಲಂ 5(1) (ಎ) ಹಾಗೂ 5(1) ಬಿ ಅಡಿ ಈವರೆಗೂ 81 ಅಧಿಸೂಚಿತ ಉದ್ದಿಮೆಗಳಿಗೆ ಪ್ರತ್ಯೇಕವಾದ ವೇತನ ದರಗಳನ್ನು ನಿಗದಿಪಡಿಸಿ, ಪರಿಷ್ಕರಿಸಿ ಅಧಿಸೂಚನೆ ಹೊರಡಿಸಲಾಗುತಿತ್ತು. 2022-23ನೇ ಸಾಲಿನಲ್ಲಿ ವಿವಿಧ ಅನುಸೂಚಿತ ಉದ್ದಿಮೆಗಳಿಗೆ ಸಂಬಂಧಿಸಿದ ಒಟ್ಟು 34 ಅನುಸೂಚಿತ ಉದ್ದಿಮೆಗಳಿಗೆ ಸದರಿ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಕನಿಷ್ಠ ವೇತನಕ್ಕೆ ಹೆಚ್ಚುವರಿಯಾಗಿ ಶೇ.5 ರಿಂದ 10ರಷ್ಟು ಏರಿಕೆ ಮಾಡಿದ ದರಗಳನ್ನು ಪರಿಷ್ಕರಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಕರುಡು ಅಧಿಸೂಚನೆ

ಸದರಿ ಅಧಿಸೂಚನೆಗಳನ್ನು ಎಐಟಿಯುಸಿ ಕಾರ್ಮಿಕ ಸಂಘದವರು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಪ್ರಶ್ನಿಸಿದ್ದರಿಂದ ಅದನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಸುಪ್ರೀಂಕೋರ್ಟ್ ನೀಡಿರುವ ಮಾರ್ಗಸೂಚಿಗಳ ಅನ್ವಯ ಕನಿಷ್ಠ ವೇತನ ಲೆಕ್ಕಾಚಾರ ಹಾಕಿ ಹೊಸದಾಗಿ ಅಧಿಸೂಚನೆ ಹೊರಡಿಸುವಂತೆ ನಿರ್ದೇಶಿಸಲಾಗಿತ್ತು.

ವೇತನ ಪರಿಷ್ಕರಣೆ ಅಧಿಸೂಚನೆ

ವಿವಿಧ ಅನುಸೂಚಿತ ಉದ್ದಿಮೆಗಳಲ್ಲಿ ವಲಯವಾರು ಮತ್ತು ಕುಶಲವಾರು ವೇತನ ದರದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಹಾಗೂ ಎಲ್ಲ ವರ್ಗದ ಕಾರ್ಮಿಕರಿಗೂ ಸಮಾನವಾದ ಕನಿಷ್ಠ ವೇತನ ದೊರೆಯಬೇಕೆಂಬ ಸದುದ್ದೇಶದಿಂದ ಈ ಹಿಂದೆ ಅನುಸೂಚಿತ ಉದ್ದಿಮೆವಾರು ಪ್ರತ್ಯೇಕವಾಗಿ ಅಧಿಸೂಚನೆಗಳನ್ನು ಹೊರಡಿಸುತ್ತಿದ್ದ ಕ್ರಮದ ಬದಲಾಗಿ ಏಕರೂಪ ಅಧಿಸೂಚನೆ ಹೊರಡಿಸಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರ; ಸೂಕ್ತ ಕ್ರಮಕ್ಕೆ ಮುಂದಾಗುವುದೇ ಸರ್ಕಾರ?

ಇದೇ ರೀತಿ ಅನುಸೂಚಿ–3 ಮತ್ತು ಅನುಸೂಚಿ–4 ರ ವ್ಯಾಪ್ತಿಗೆ ಬರುವ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ ದರವನ್ನು ಪ್ರಕಟಿಸಲಾಗಿದೆ. ಯಾವುದೇ ಆಕ್ಷೇಪಣೆ ಇದ್ದರೆ 2 ತಿಂಗಳಲ್ಲಿ ಸರ್ಕಾರದ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ, 4 ನೇ ಮಹಡಿ, ವಿಕಾಸಸೌಧ, ಬೆಂಗಳೂರು–1 ಇಲ್ಲಿಗೆ ಸಲ್ಲಿಸಬಹುದೆಂದು ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...