ಕಲಬುರಗಿ| ನಾಟಕ ಕಲಾವಿದರನ್ನು ಬೆಳೆಸುವ ಅವಶ್ಯಕತೆ ಇದೆ : ಸಂಜೀವಕುಮಾರ್

Date:

ಅಫಜಲಪುರದ ರಂಗ ಸಂಗ ಬಳಗ ಸಹಯೋಗದಲ್ಲಿ ಮೈಸೂರಿನ ನಿರ್ದಿಗಂತ ತಂಡ ಪ್ರಸ್ತುತ ಪಡಿಸಿರುವ ʼತಿಂಡಿಗೆ ಬಂದ ತುಂಡೇರಾಯʼ ನಾಟಕವು ಅಫಜಲಪುರ ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಯಶಸ್ವಿ ಪ್ರದರ್ಶನ ಕಂಡಿತು.

ಪೌರಕಾರ್ಮಿಕ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಂತೋಷ ಚಲವಾದಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼರಂಗಭೂಮಿಯ ವಿಭಿನ್ನ ಆಯಾಮಗಳನ್ನು ತಾಲೂಕಿಗೆ ಪರಿಚಯಿಸುವ ಉದ್ದೇಶವಿರುವ ರಂಗ ಸಂಗ ಬಳಗದ ಈ ವಿಭಿನ್ನ ಪ್ರಯತ್ನ ಶ್ಲಾಘನೀಯ. ನಾಡಿನ ಇತಿಹಾಸ, ಕಲೆ, ಸಾಂಸ್ಕೃತಿಕ ಶ್ರೀಮಂತಿಕೆ ಮೆರೆಯುವ ಹಾಗೂ ಸೌಹಾರ್ದ ಸಮಾಜ ನಿರ್ಮಾಣ ಮಾಡುವ ಕಥೆಗಳಿರುವ ನಾಟಕಗಳು ಇನ್ನೂ ಹೆಚ್ಚು ಪ್ರದರ್ಶನವಾಗಲಿʼ ಎಂದು ಆಶಯ ವ್ಯಕ್ತಪಡಿಸಿದರು.

ಶಿಕ್ಷಕ ಡಿ.ಎಂ.ನದಾಫ್ ಪ್ರಾಸ್ತಾವಿಕವಾಗಿ ಮಾತನಾಡಿ, ʼಅಫಜಲಪುರ ತಾಲೂಕಿನ ಹವ್ಯಾಸಿ ಹೊಸ ಅಲೆಯ ನಾಟಕ ಪ್ರದರ್ಶನದ ಇತಿಹಾಸವನ್ನು ಹೇಳಿದರು. 1992ರಲ್ಲಿ ನೀನಾಸಂ ತಂಡದ ‘ಹೂ ಹುಡುಗಿ’ ‘ದ್ಯಾವನೂರು’ ನಾಟಕವನ್ನು ಪ್ರದರ್ಶಿಸಲಾಗಿತ್ತು. ಇದರೊಂದಿಗೆ ಆಟ – ಮಾಟ ತಂಡದ ಮತ್ತು ಶಿವಸಂಚಾರ ತಂಡದ ಹಲವಾರು ನಾಟಕಗಳನ್ನು ನಮ್ಮಲ್ಲಿ ಪ್ರದರ್ಶನ ಏರ್ಪಡಿಸಿತ್ತು. ಈ ರೀತಿಯ ಪ್ರಯತ್ನಗಳಿಂದಾಗಿ ಅಫಜಲಪುರದ ಅನಿಲ ರೇವೂರ್, ಚಿಂಚೋಳಿ ಗ್ರಾಮದ ಗಂಗೂಬಾಯಿ ಇಂತಹ ಹಲವಾರು ಕಲಾವಿದರು ಇಂದು ರಂಗ ಭೂಮಿ ಮತ್ತು ಚಿತ್ರರಂಗಗಳಲ್ಲಿ ಭವಿಷ್ಯ ಕಂಡುಕೊಂಡಿದ್ದಾರೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ನೌಕರರ ಸಂಘದ ಅಧ್ಯಕ್ಷ ಸಂಜೀವಕುಮಾರ್ ಬಗಲಿ ಮಾತನಾಡಿ, ʼನಮ್ಮ ತಾಲೂಕಿನಲ್ಲಿ ಇಂತಹ ವಿಭಿನ್ನ ಪ್ರಯತ್ನಗಳು ಅಪರೂಪವಾಗಿ ನಡೆಯುತ್ತವೆ. ಕಲ್ಯಾಣ ಕರ್ನಾಟಕದಲ್ಲಿ ಇಂತಹ ಹೊಸ ಅಲೆಯ ನಾಟಕಗಳು ಮತ್ತು ಕಲಾವಿದರನ್ನು ಬೆಳೆಸುವ ಅವಶ್ಯಕತೆ ಇದೆ. ಆ ಪ್ರಯತ್ನ ರಂಗ ಸಂಗ ಬಳಗ ಮಾಡುತ್ತಿರುವುದು ಸಂತೋಷದಾಯಕʼ ಎಂದರು.

ಈ ಸುದ್ದಿ ಓದಿದ್ದೀರಾ? ಅಕ್ರಮ ಪಡಿತರ ವಿರುದ್ಧ ಕಾರ್ಯಾಚರಣೆ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ : ಸಚಿವ ಕೆ ಎಚ್ ಮುನಿಯಪ್ಪ

ಕಾರ್ಯಕ್ರಮದಲ್ಲಿ ಪ್ರಮುಖರಾದ ಬೀರಣ್ಣ ಪೂಜಾರಿ ಕನಕ, ಶ್ರೀಮಂತ ಬಿರಾದಾರ್, ರವಿ ಗೌರ್, ರಾಜು ಆರೇಕರ್, ಗೌತಮ ಸಕ್ಕರಗಿ, ಶರಣ ಬಸು ಹೊಸಮನಿ ಸದಾಶಿವ ಮೇತ್ರಿ, ಸಾದಿಕ್ ನಾಗೂರ್, ಬಸವರಾಜ್ ಕೆಂಗನಾಳ್, ಶ್ರೀಕಾಂತ್ ಕಾಚಾಪೂರ್, ಬಿ.ಎಂ.ರಾವ್, ಶಾಂತರಸ ಹೊಸ್ಮನಿ, ಅಬ್ಬಾಸಲಿ ಸದಾಫ್, ರವಿಚಂದ್ರ ಅತನೂರ, ಪ್ರಭಾವತಿ ಮೇತ್ರಿ, ರಾಹುಲ್ ಸಿಂಗೆ, ಹಿರಗಪ್ಪ ಜಿಡ್ಡಿಮನಿ ಬಾಬು ನಡುವಿನಕೇರಿ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...