ದಾವಣಗೆರೆ | ಬೇಸಿಗೆಯಲ್ಲೂ ಪ್ರಯಾಣಿಕರಿಗೆ ಬಳಕೆಯಾಗದ ಬಸ್‌ ನಿಲ್ದಾಣದ ಕುಡಿಯುವ ನೀರಿನ ಘಟಕ

Date:

ರಾಜ್ಯದಲ್ಲಿ ಬಿರುಬಿಸಿಲಿನಿಂದಾಗಿ ಬಿಸಿ ಗಾಳಿ ಬೀಸುತ್ತಿದೆ. ಬಿಸಿಲು ಕೆಂಡದಂತೆ ಸುಡುತ್ತಿದೆ. ಮನುಷ್ಯ ಸೇರಿದಂತೆ ಪ್ರಾಣಿ ಪಕ್ಷಿಗಳು ಹೈರಾಣಾಗಿವೆ. ದಾಹ, ನೀರಿಗೆ ಹಾಹಾಕಾರ ಎದುರಾಗಿರುವ ನಡುವೆಯೂ, ಸಾವಿರಾರು ಮಂದಿ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕವೊಂದು ಹಲವು ತಿಂಗಳುಗಳಿಂದ ಉಪಯೋಗಕ್ಕೆ ಬಾರದೇ ನಿಂತಿದೆ. ಜನರ ದಾಹವನ್ನು ತಣಿಸಲು ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರ ನಿರ್ಮಿಸಿದ್ದ ಘಟಕದ ಬಗ್ಗೆ ಬಸ್‌ ನಿಲ್ದಾಣದ ಆಡಳಿತ, ನಗರಾಡಳಿತ, ಸಾರಿಗೆ ಇಲಾಖೆ ಸೇರಿದಂತೆ ಯಾರೊಬ್ಬರೂ ಅಸಕ್ತಿ ತೋರುತ್ತಿಲ್ಲ. ಪರಿಣಾಮ ಘಟಕ ಇದ್ದೂ ಇಲ್ಲದಂತಾಗಿದೆ.

ಮದ್ಯ ಕರ್ನಾಟಕದ ಬೆಣ್ಣೆ ನಗರಿ ದಾವಣಗೆರೆಯ ಹೈಸ್ಕೂಲ್ ಮೈದಾನದ ಬಳಿಯಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಲಾಗಿದೆ. ಎರಡು ವರ್ಷಗಳ ಹಿಂದೆ ಬಸ್ ನಿಲ್ದಾಣ ಪ್ರಾರಂಭಿಸಿದಾಗ ಸರ್ಕಾರ ಹತ್ತಾರು ಲಕ್ಷ ರೂ. ಖರ್ಚು ಮಾಡಿ ಶುದ್ಧ ನೀರಿನ ಘಟಕ ನಿರ್ಮಿಸಿತ್ತು. ಆರಂಭಶೂರತ್ವದಂತೆ ಕೆಲ ದಿನಗಳಷ್ಟೇ ಬಳಕೆಯಾದರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಕ್ರಮೇಣ ಸ್ಥಗಿತಕೊಂಡಿದೆ.  ಈಗ ಕಾರ್ಯನಿರ್ವಹಿಸದ ಕಾರಣ, ಪ್ರಯಾಣಿಕರಿಂದ ದೂರ ಉಳಿದಿದೆ.

ಹೊಸ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಎರಡು ವರ್ಷದ ಹಿಂದೆ ಇಲ್ಲಿನ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ತಾತ್ಕಾಲಿಕವಾಗಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಬೋರ್ಡ್ ಹೆಸರೇ ಒಂದಿದ್ದರೆ, ಬಸ್ ಹೋಗುವ  ಮಾರ್ಗವೇ ಬೇರೆಯಿರುತ್ತದೆ. ಸಾಕಷ್ಟು ಸ್ಥಳವಿಲ್ಲದೆ ಕಿಕ್ಕಿರಿದ ಜಾಗದಲ್ಲಿ ಸಾವಿರಾರು ಬಸ್‌ಗಳ ಓಡಾಟ, ಸಮಯಕ್ಕೆ ಬಾರದ ಬಸ್, ಗ್ರಾಮೀಣ ಭಾಗಗಳಿಗೆ ಹೋಗುವ ಬಸ್ ಎಲ್ಲಿ ನಿಲ್ಲುತ್ತದೆ ಎಂಬ ಮಾಹಿತಿಯೇ ಇಲ್ಲದೆ, ಪ್ರಯಾಣಿಕರು ಪರದಾಡುವ ಪರಸ್ಥಿತಿ ಇದೆ. ಹೀಗೆ ಸಾಲು ಸಾಲು ಸಮಸ್ಯೆಗಳ ನಡುವೆಯೇ ತಾತ್ಕಾಲಿಕವಾಗಿ ನಿರ್ಮಿಸಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವು ನೂತನ ನಿಲ್ದಾಣಕ್ಕೆ ಸ್ಥಳಾಂತರಕ್ಕಾಗಿ ಕಾಯುತ್ತಿದೆ. ನೂತನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಹಳೆ ಪಿ.ಬಿ ರಸ್ತೆಯಲ್ಲಿ ನಿರ್ಮಾಣಗೊಂಡು ಉದ್ಘಾಟನೆಯಾಗಿದ್ದರೂ, ಇನ್ನೂ ಸೇವೆಯ ಭಾಗ್ಯ ದೊರೆತಿಲ್ಲ. ಲೋಕಸಭೆ ಚುನಾವಣೆಗೂ ಮುನ್ನಾ ಮಾರ್ಚ್‌ನಲ್ಲಿ ತರಾತುರಿಯಲ್ಲಿ ಉದ್ಘಾಟನೆಯಾದ ಬಸ್ ನಿಲ್ದಾಣ ಮತದಾನ ಮುಗಿದರೂ ಸ್ಥಳಾಂತರವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿನಕ್ಕೆ ಹತ್ತಾರು ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಇಲ್ಲಿ ಬೇರೆ ಬೇರೆ ಗ್ರಾಮ/ನಗರಗಳಿಗೆ ಹೋಗುತ್ತಾರೆ. ದಿನಕ್ಕೆ ಲಕ್ಷಾಂತರ ರೂ. ಲಾಭ ಪಡೆಯುವ ಇಲ್ಲಿನ ನಿಲ್ದಾಣದಲ್ಲಿ ಕನಿಷ್ಠ ಕುಡಿಯುವ ನೀರಿನ ಸೌಲಭ್ಯ ಇಲ್ಲದಿರುವುದರಿಂದ ಪ್ರಯಾಣಿಕರು ಪರಿತಪಿಸುವಂತಾಗಿದೆ. ಬಸ್‌ ನಿಲ್ದಾಣದಲ್ಲಿರುವ ಘಟಕದಲ್ಲಿ ಈ ಹಿಂದೆ, ಒಂದು ರೂ. ನಾಣ್ಯ ಹಾಕಿದರೆ ಎರಡು ಲೀಟರ್ ಶುದ್ಧ ನೀರು ಸಿಗುತ್ತಿತ್ತು. ಆದರೆ, ಈಗ ಅದು ಕೆಟ್ಟು ಬಹಳ ತಿಂಗಳಾಗಿವೆ. ಹೀಗಾಗಿ, ಪ್ರಯಾಣಿಕರಿಗೆ ಕುಡಿಯುವ ನೀರು ಸಿಗದಂತಾಗಿದೆ. ಉಳ್ಳವರು ವಾಣಿಜ್ಯ ಮಳಿಗೆಗಳಲ್ಲಿ ಬಾಟಲಿ ನೀರಿನ ಮೊರೆ ಹೋಗುತ್ತಿದ್ದಾರೆ. ಹಣವಿಲ್ಲದವರು ಗಂಟಲು ಒಣಗಿಸಿ ಕೊಂಡು ಬಸ್ ಏರುತ್ತಿದ್ದಾರೆ.

ನೀರಿನ ಘಟಕ ಕೆಟ್ಟು ಹೋಗಿ ಹಲವು ತಿಂಗಳು ಕಳೆದರೂ ಇನ್ನೂ ರಿಪೇರಿ ಮಾಡಿಲ್ಲ. ರಿಪೇರಿ ಮಾಡದಿರುವುದರ ಹಿಂದೆ ಖಾಸಗಿ ಮಿನರಲ್ ನೀರಿನ ಬಾಟಲಿ ವ್ಯಾಪಾರಿಗಳ ಲಾಬಿ ಇದೆ ಎನ್ನುವ ಆರೋಪವಿದೆ. ಹಲವಾರು ಪ್ರಯಾಣಿಕರು ನೀರಿನ ಘಟಕ ರಿಪೇರಿ ಮಾಡಿಸುವಂತೆ ಕೇಳಿದರೆ ಅಧಿಕಾರಿಗಳು ಸಬೂಬು ಹೇಳಿ ಕಳುಹಿಸುತ್ತಿದ್ದಾರೆ.

ಪ್ರತಿ ನಿತ್ಯ ದಾವಣಗೆರೆಯಿಂದ ಜಗಳೂರು ತಾಲೂಕಿನ ಹಳ್ಳಿಗೆ ತೆರಳುವ ಶಿಕ್ಷಕ ದುರುಗೇಶ ಅವರು ಈದಿನ.ಕಾಮ್ ಜೊತೆ ಮಾತನಾಡಿದ್ದು, “ನೀರಿನ ಘಟಕವು ಸುಮಾರು ದಿನಗಳಿಂದ ಕೆಟ್ಟು ನಿಂತಿದೆ. ಸಂಬಂಧಿತ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹನಿ ಹನಿ ನೀರಿಗೂ ಪರದಾಡುವ ಬೇಸಿಗೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾಗಿತ್ತು. ಆದರೆ, ದುಡ್ಡು ಕೊಡುತ್ತೇವೆಂದರೂ ಇಲ್ಲಿ ನೀರಿಲ್ಲ. ಶುದ್ಧ ನೀರಿನ ಘಟಕವನ್ನು ಪ್ರಾರಂಭಿಸಲು ಅಧಿಕಾರಿಗಳು ಮನಸ್ಸು ಮಾಡುತ್ತಿಲ್ಲ. ಸಾಮಾನ್ಯ ಬಡ ಜನರಿಗೆ 20 ರೂ.ಗೆ ಒಂದು ಲೀಟರ್ ನೀರನ್ನು ಅಂಗಡಿಗಳಲ್ಲಿ ಕೊಂಡು ಕುಡಿಯಲು ಹೊರೆಯಾಗುತ್ತದೆ. ಆದ್ದರಿಂದ, ಅಧಿಕಾರಿಗಳು ಗಮನಹರಿಸಿ ಬೇಸಿಗೆಯಲ್ಲಿ ನೀರಿನ ವ್ಯವಸ್ಥೆ ಮಾಡಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಈದಿನ.ಕಾಮ್‌ ಜೊತೆ ಮಾತನಾಡಿದ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿ, “ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಂಬಂಧಿಸಿದಂತೆ ನೀರಿನ ಸರಬರಾಜು ಮಾಡುತ್ತಿದ್ದ ಬೋರ್ವೆಲ್ ಸಂಪೂರ್ಣವಾಗಿ ನೀರಿಲ್ಲದೆ ಒಣಗಿಹೋಗಿದೆ. ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡುವಂತೆ ಸೂಚಿಸಲಾಗಿತ್ತು. ಆದರೆ, ಘಟಕ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಇತ್ತೀಚಿಗೆ ಗಮನಕ್ಕೆ ಬಂದಿದೆ. ನಮ್ಮ ಇಲಾಖೆಯ ಸಂಬಂಧಿತ ಸಹಾಯಕ ಅಭಿಯಂತರರಿಗೆ ತಿಳಿಸಲಾಗಿದ್ದು, ಶೀಘ್ರವೇ ಘಟಕವನ್ನು ಸರಿಪಡಿಸಿ, ಆರಂಭಿಸಲಾಗುವುದು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...