ಮಡಿಕೇರಿ | ಮೂರು ದಿನಗಳ ಮಾವು-ಹಲಸು ಮೇಳಕ್ಕೆ ಶಾಸಕ ಪೊನ್ನಣ್ಣ ಚಾಲನೆ

Date:

  • ಪುತ್ತೂರಿನ ತೋಟಗಾರಿಕಾ ಇಲಾಖೆಯಿಂದ ಮಾವಿನ ಸಸಿಗಳ ಮಾರಾಟ
  • ಮೇಳದಲ್ಲಿ ಗಮನ ಸೆಳೆದ ಹಲಸು, ಬಾಳೆ ಹಣ್ಣಿನ ತಿಂಡಿ ತಿನಿಸುಗಳು

ಮಾವು ಮತ್ತು ಹಲಸು ಬೆಳಯುವಂತೆ ರೈತರನ್ನು ರೈತರನ್ನು ಪ್ರೋತ್ಸಾಹಿಸಲು ಮತ್ತು ಉತ್ತೇಜಿಸಲು ಇಂತಹ ಮೇಳಗಳು ಸಹಕಾರಿಯಾಗಿವೆ. ಜಿಲ್ಲಾಡಳಿತ ಉತ್ತಮ ಕೆಲಸ ಕೈಗೊಂಡಿದೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ತೋಟಗಾರಿಕೆ ಇಲಾಖೆ ಹಾಗೂ ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ವತಿಯಿಂದ ನಗರದ ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ಆವರಣದಲ್ಲಿ ಮೇ 28ರ ವರೆಗೆ ಏರ್ಪಡಿಸಿರುವ ‘ಮಾವು ಮತ್ತು ಹಲಸು ಮೇಳ’ಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಾವು ಮತ್ತು ಹಲಸು ಮೇಳದಿಂದ ರೈತರು ನೇರವಾಗಿ ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಅನುಕೂಲವಾಗಿದೆ. ಜೊತೆಗೆ ಗ್ರಾಹಕರಿಗೂ ಸಹಕಾರಿಯಾಗಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿ ಡಾ. ಬಿ ಸಿ ಸತೀಶ ಮಾತನಾಡಿ, “ಮಾವು ಮತ್ತು ಹಲಸು ಮೇಳದಲ್ಲಿ 25ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದೆ. ರಾಮನಗರ ಜಿಲ್ಲೆಯಿಂದ ಹೆಚ್ಚಿನ ಮಾವು ಬೆಳೆಗಾರರು ಆಗಮಿಸಿದ್ದಾರೆ. ರುಚಿಯಾದ ಮಾವು ಮತ್ತು ಹಲಸಿನ ಹಣ್ಣನ್ನು ಗ್ರಾಹಕರು ಸವಿಯುವಂತಾಗಬೇಕು. ಮೇಳದಿಂದ ರೈತರು ಮತ್ತು ಗ್ರಾಹಕರಿಗೆ ಅನುಕೂಲವಾಗಿದೆ” ಎಂದರು.

ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್ ಆರ್ ನಾಯಕ್, ಹಿರಿಯ ಸಹಾಯಕ ನಿರ್ದೇಶಕ ಸಿ ಎಂ ಪ್ರಮೋದ್ ಅವರು ಹಲವು ರೀತಿಯ ಮಾವು ಮತ್ತು ಹಲಸು ಬಗ್ಗೆ ಮಾಹಿತಿ ನೀಡಿದರು.

ಮಾವು ಮತ್ತು ಹಲಸು ಮೇಳದಲ್ಲಿ ಬಾದಾಮಿ, ರಸಪುರಿ, ಸಿಂಧೂರ, ತೋತಾಪುರಿ, ದಾಶೇರಿ, ನೀಲಂ, ರುಮಾನಿ, ಅಮ್ರಪಾಲಿ, ಕೊಡಗಿನ ಕಾಡು ಮಾವು, ಮಲ್ಗೋವ, ಮಲ್ಲಿಕಾ, ಬಂಗಿನಪಲ್ಲಿ, ಸಕ್ಕರೆ ಗುತ್ತಿ, ಕಲ್ಕತ್ತಾ ಗೋಲ್ಡ್, ಕೇಸರ್, ವಾಲಜ, ಇಮಾಮ್ ಪಸಂದ್, ಮುಂದ, ಕಾಲಪಾಡಿ, ಹೀಗೆ ಹದಿನೈದಕ್ಕೂ ಹೆಚ್ಚು ರೀತಿಯ ಮಾವಿನ ಹಣ್ಣುಗಳು ಮಾವು ಮೇಳದಲ್ಲಿ ಕಂಡು ಬಂದವು.

ಪಿಂಗಾರ ತೋಟಗಾರಿಕಾ ಫಾಮ್ರ್ಸ್ ಪ್ರೊಡ್ಯೂಷನ್ ವತಿಯಿಂದ ಹಲಸಿನಕಾಯಿ ಹಪ್ಪಳ, ಚಿಪ್ಸ್, ಹಲ್ವ, ಸುಕೇಲಿ, ಹಲಸಿನಕಾಯಿ ಬೀಜದ ಬಿಸ್ಕೇಟ್, ಬಾಳೆಹಣ್ಣಿನ ಹಪ್ಪಳ, ಬಾಳೆ ಕಾಯಿ ಹಪ್ಪಳ, ಪಲ್ಫ್ ಮತ್ತಿತರ ಹಲಸು ಮತ್ತು ಬಾಳೆ ಹಣ್ಣಿನ ತಿಂಡಿ ತಿನಿಸುಗಳು ಮೇಳದಲ್ಲಿಇತ್ತು.

ಈ ಸುದ್ದಿ ಓದಿದ್ದೀರಾ? ಎಂಟು ಜಿಲ್ಲೆಗಳಿಗೆ ಸಿಗದ ಸಚಿವ ಸ್ಥಾನದ ಪ್ರಾತಿನಿಧ್ಯ

ಪುತ್ತೂರಿನ ತೋಟಗಾರಿಕಾ ಇಲಾಖೆ ವತಿಯಿಂದ ಹಲವು ಮಾವಿನ ತಳಿಗಳಾದ ಮಲ್ಲಿಕಾ, ಕೇಸರ್, ಕಾಳಪಾಡಿ, ಮತ್ತಿತರ ಮಾವಿನ ಸಸಿಗಳನ್ನು ಮಾರಾಟ ಮಾಡಲಾಗುತ್ತಿದೆ. ರೈತರಿಗೆ ಸಾವಯವ ಕೃಷಿ ದೃಢೀಕರಣ ನೀಡುವ ಸಂಸ್ಥೆ ವತಿಯಿಂದ ಬೆಲ್ಲದ ಪುಡಿ ಹಾಗೂ ಅಚ್ಚು ಬೆಲ್ಲವನ್ನು ಮಾರಾಟ ಮಾಡಲಾಗುತ್ತಿದೆ.

ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಮಡಿಕೇರಿ ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ, ಹಾಪ್ ಕಾಮ್ಸ್ ಅಧ್ಯಕ್ಷರಾ ಬಿದ್ದಾಟಂಡ ರಮೇಶ್ ಚಂಗಪ್ಪ, ಹಾಪ್‍ಕಾಮ್ಸ್ ಉಪಾಧ್ಯಕ್ಷ ಮಲ್ಲಂಡ ಮಧುದೇವಯ್ಯ, ನಿರ್ದೇಶಕ ನಾಗೇಶ್ ಕುಂದಲ್ಪಾಡಿ, ಎಸ್ ಪಿ ಪೊನ್ನಪ್ಪ, ಬೇಬಿ ಪೂವಯ್ಯ, ಲೀಲಾ ಮೇದಪ್ಪ, ಕೊನೇರಿರ ಎಂ ಮನೋಹರ್, ಸುವಿನ್ ಗಣಪತಿ, ಮಹೇಶ್, ಕಾಂಗೀರ ಸತೀಶ್ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...