ಸಿದ್ದರಾಮಯ್ಯಗೆ ಆತ್ಮಸಾಕ್ಷಿ ಇದ್ದರೆ ಸಂಪುಟದಿಂದ ಡಿ.ಸುಧಾಕರ್‌ರನ್ನು ವಜಾ ಮಾಡಲಿ: ಕುಮಾರಸ್ವಾಮಿ

Date:

  • ‘ದಲಿತರ ಪರವಾಗಿ ಉದ್ದುದ್ದ ಬಾಷಣ ಮಾಡಿದವರು ಎಲ್ಲಿದ್ದಾರೆ?’
  • ‘ಸಿದ್ದರಾಮಯ್ಯನವರೆ, ನಿಮಗೆ ಮಾನ ಮರ್ಯಾದೆ ಇದೆಯಾ?’

ದಲಿತರ ರಕ್ಷಣೆ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಈ ಸರ್ಕಾರದಲ್ಲಿ ಏನಾಗುತ್ತಿದೆ? ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರಿಂದ ದಲಿತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಇಂತಹ ವ್ಯಕ್ತಿಯನ್ನು ಸಂಪುಟದಲ್ಲಿ ಇರಿಸಿಕೊಳ್ಳಬಾರದು ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಡಿ ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು.‌ ಹಾಗೂ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು” ಎಂದು ಒತ್ತಾಯಿಸಿದರು.

ಈ ಭೂಮಿ ಪ್ರಕರಣ ಮುಗಿದೇ ಹೋಗಿತ್ತು. ಈಗ ಕಾನೂನುಬದ್ದವಾಗಿ ಜೀವ ಕೊಟ್ಟಿದ್ದಾರೆ. ಎಲ್ಲದಕ್ಕೂ ತನಿಖೆ ಅಂತ ಹೇಳ್ತೀರಲ್ಲಾ, ಇದಕ್ಕೆ ಯಾವ ತನಿಖೆ ಮಾಡುತ್ತೀರಾ? ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮೇಲೆ ಕಾಗದದ ಚೂರು ಎಸೆದರು ಎಂದು ನೀವೆಲ್ಲಾ ಉದ್ದುದ್ದ ಬಾಷಣ ಮಾಡಿದ್ದಿರಲ್ಲ. ಇವತ್ತು ಆ ದಲಿತ ಸಮುದಾಯದ ಹೆಣ್ಣು ಮಗಳ ಮೇಲೆ ಮಚ್ವು ಕೊಡಲಿ ಹಿಡಿದು ಬೆದರಿಸಲು ಹೊರಟಿದ್ದೀರಲ್ಲಾ? ಜನ ಇದಕ್ಕೇನಾ ನಿಮಗೆ ಮತ ಹಾಕಿದ್ದು” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಇನ್ಮುಂದೆ ಭಾಗಿಯಾಗಲ್ಲ: ಯತ್ನಾಳ ಸ್ಪಷ್ಟನೆ

“ಸಿದ್ದರಾಮಯ್ಯನವರೆ, ನೀವು ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತ ಕೇಳ್ತೀರಲ್ಲ, ಈಗ ನಿಮಗೆ ಏನಿದೆ ಅಂತ ನಾನು ಕೇಳಲು ಬಯಸುತ್ತೇನೆ. ಎಫ್ ಐ ಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳ ಮೇಲೆಯೆ ಒತ್ತಡ ಹೇರುವ ಕೆಲಸ ಮಾಡುತ್ತಿದ್ದೀರಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ?” ಎಂದು ಕುಟುಕಿದರು.

“ಅಧಿಕಾರಿಗಳನ್ನು ಬಹಳ ಕೀಳಾಗಿ ನಡೆಸಿಕೊಳ್ಳುತ್ತಿದ್ದೀರಿ. ಎಫ್ ಐ ಆರ್ ದಾಖಲಿಸಿದ ಅಧಿಕಾರಿಯನ್ನು ದಾಖಲೆಗಳನ್ನು ತೆಗೆದುಕೊಂಡು ಮನೆಗೆ ಬಾ ಅಂತ ಬೆದರಿಕೆ ಹಾಕುತ್ತೀರಿ. ಇದಾ ದಲಿತರ ರಕ್ಷಣೆ? ಎಂದು ಸಿದ್ದರಾಮಯ್ಯ ಅವರ ಮೇಲೆ ಕುಮಾರಸ್ವಾಮಿ ಹರಿಹಾಯ್ದರು.

“ನಾವು ಟೀಕಿಸಿದರೆ ಅಸೂಯೆ ಅಂತೀರಾ. ಇಂತಹ ಕೆಲಸ ಮಾಡಿದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ? ಹೀಗೇನಾ ನೀವು ದಲಿತರನ್ನು ಉದ್ದಾರ ಮಾಡುವುದು? ಇದು ದಲಿತ ವಿರೋಧಿ, ಜನವಿರೋಧಿ ಸರ್ಕಾರ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಕಿಡಿ ಕಾರಿದರು.

“ದಲಿತ ಸಂಘಟನೆಗಳು ಇದನ್ನು ನೋಡಿಕೊಂಡು ಸುಮ್ಮನೇ ಕೂರಬಾರದು. ನಾನು ಮನವಿ ಮಾಡುತ್ತೇನೆ. ಅವರೂ ಇದನ್ನು ಗಮನಿಸಲಿ. ಈ ಮಂತ್ರಿಯ ವಿರುದ್ಧ ಹೋರಾಟ ನಡೆಸಬೇಕು. ನಾನು ಕೂಡ ಬೆಂಬಲ ಕೊಡುವೆ” ಎಂದು ಕುಮಾರಸ್ವಾಮಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...