ಚಿತ್ರದುರ್ಗ | ಜಿಲ್ಲೆಯಲ್ಲಿ ಬರ; ಮೇವಿಗಾಗಿ ಆಂಧ್ರದತ್ತ ಮುಖ ಮಾಡಿದ ರೈತರು

Date:

ಮಳೆಯ ಅಭಾವದಿಂದ ದನಕರುಗಳಿಗೆ ಮೇವಿಲ್ಲದಂತಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಭಾಗದ ರೈತರು ಮೇವು ಖರೀದಿಗಾಗಿ ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ಹೋಗುತ್ತಿದ್ದಾರೆ. ಅನಂತಪುರ ಭಾಗದ ರೈತರು ಹೆಚ್ಚಾಗಿ ಭತ್ತ ಬೆಳೆಯುತ್ತಿದ್ದು, ಭತ್ತದ ಹುಲ್ಲು ದೊರೆಯುತ್ತದೆ ಎಂದು ತಿಳಿದುಬಂದಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಮೇವು ಮತ್ತು ನೀರಿನ ಕೊರತೆ ತೀವ್ರವಾಗಿದೆ. ಬರದಿಂದಾಗಿ ಜನರಷ್ಟೇ ಅಲ್ಲದೆ, ದನ-ಕರು, ಕುರಿ, ಮೇಕೆಗಳು ಸಹ ಸಂಕಷ್ಟಕ್ಕೆ ಸಿಲುಕಿವೆ. ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, “ಕುಡಿಯುವ ನೀರಿನ ಅಗತ್ಯತೆಗಳನ್ನು ಪರಿಹರಿಸಲು ಯಾವುದೇ ಹಣಕಾಸಿನ ಕೊರತೆ ಇಲ್ಲ. ಜಾನುವಾರುಗಳನ್ನು ರಕ್ಷಿಸಲು, ಗೋಶಾಲೆಗಳನ್ನು ಸ್ಥಾಪಿಸಲು ಸ್ಥಳಗಳನ್ನು ಗುರುತಿಸಲಾಗಿದೆ” ಎಂದಿದ್ದಾರೆ.

ರಂಗಯ್ಯನದುರ್ಗ ಅಣೆಕಟ್ಟು ತುಂಬಿದೆ. ಪೆರ್ಲಗುಡ್ಡದ ಗೊರ್ಲಮಾರೆ, ಬೋಡಿಕಟ್ಟೆಯಲ್ಲಿ ಸಾಕಷ್ಟು ನೀರಿದ್ದರೂ, ನಮ್ಮ ಭಾಗದ ರೈತರಿಗೆ ಅದು ಉಪಯೋಗವಾಗುತ್ತಿಲ್ಲ. ಆಂಧ್ರಪ್ರದೇಶಕ್ಕೆ ನೀರು ಹರಿದು ಹೋಗುತ್ತಿದೆ. ಅಲ್ಲಿನ ರೈತರಿಗೆ ಭತ್ತ ಹಾಗೂ ಶೇಂಗಾ ಬೆಳೆ ಬೆಳೆಯಲು ಅವಕಾಶ ಹೆಚ್ಚಿದೆ. ಆದರೆ, ಜಿಲ್ಲೆಯ ಮೊಳಕಾಲ್ಮುರು, ಚಳ್ಳಕೆರೆ, ಹಿರಿಯೂರು ತಾಲೂಕಿನಲ್ಲಿ ಸಾಮಾನ್ಯ ವರ್ಷದಲ್ಲಿ ಯಥೇಚ್ಛವಾಗಿ ಮೇವು ಬೆಳೆಯುವ ರೈತರು ಸಂಕಷ್ಟದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಂಧ್ರಪ್ರದೇಶದಿಂದ ಮೇವು ಖರೀದಿಸಲು ದೊಡ್ಡ ಮೊತ್ತದ ಹಣ ತೆತ್ತಿದ್ದಾರೆ. ಟ್ರ್ಯಾಕ್ಟರ್ ಗೆ ಮೂರರಿಂದ ನಾಲ್ಕು ಸಾವಿರ ರೂ.ಗೆ ಸಿಗುತ್ತಿದ್ದ ಭತ್ತದ ಹುಲ್ಲು ಈಗ ಐದರಿಂದ ಆರು ಸಾವಿರ ರೂ. ಆಗಿದೆ. ಹತ್ತರಿಂದ 12 ಸಾವಿರ ರೂ.ಗೆ ಮಾರಾಟವಾಗುತ್ತಿದ್ದ ಶೇಂಗಾ ಹೊಟ್ಟು, 20ರಿಂದ 25 ಸಾವಿರ ರೂ. ಆಗಿದೆ. ಹೆಚ್ಚಿನ ಹಣ ನೀಡಿ ಜಾನುವಾರುಗಳಿಗೆ ಮೇವು ಹಾಕುವ ಸ್ಥಿತಿ ಜಿಲ್ಲೆಯ ರೈತರದ್ದು. ಇನ್ನೂ ಕೆಲವು ರೈತರು ಕುರಿ, ಮೇಕೆಗಳನ್ನು ಸಾಕಲಾಗದೆ ಮಾರಿದ್ದಾರೆ.

ಜಿಲ್ಲಾಡಳಿತ ರೈತರಿಗೆ ಮೇವಿನ ಕಿಟ್ ವಿತರಿಸಿ ಮೇವು ಬೆಳೆಯಬೇಕು. ನಿಂತ ನೀರಿಲ್ಲ. ಆದರೆ, ಮೇವು ಬೆಳೆಯಲು ಸಾಕಷ್ಟು ತೇವಾಂಶವಿರುವಲ್ಲಿ ಮೇವು ಬೆಳೆಯಲು ನರೇಗಾ (MGNREGA) ಕಾರ್ಯಕರ್ತರನ್ನು ಬಳಸಿಕೊಳ್ಳಬೇಕು ಎನ್ನುತ್ತಾರೆ ಸ್ಥಳೀಯ ರೈತರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...