ಬೀದರ್‌ | ರಾಜ್ಯದಲ್ಲಿ ಬರ – ಸೆ.8ಕ್ಕೆ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ: ಕುಶಾಲ್‌ ಪಾಟೀಲ್‌

Date:

ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಉಂಟಾಗಿರುವ ಬರಗಾಲದ ಸಮಸ್ಯೆಗಳ ನಿವಾರಣೆ ಸೇರಿದಂತೆ ರೈತರಿಗೆ ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡಲು ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಹಲವು ಕಾರ್ಯಕ್ರಮಗಳು ಇಂದಿನ ರಾಜ್ಯ ಸರ್ಕಾರ ರದ್ದುಗೊಳಿಸಿ ರೈತರಿಗೆ ಸಂಕಷ್ಟಕ್ಕೆ ಸಿಲುಕಿಸಿದ್ದು, ಕೂಡಲೇ ಸರ್ಕಾರ ರೈತರ ಧೈರ್ಯ ತುಂಬಿ ಯುದ್ದೋಪದಿಯಲ್ಲಿ ಕ್ರಮಕೈಗೊಳ್ಳಲು ಒತ್ತಾಯಿಸಿ ಸೆಪ್ಟೆಂಬರ್‌ 8ರಂದು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯ ಹಾಗೂ ಮಾಜಿ ಜಿ.ಪಂ. ಅಧ್ಯಕ್ಷ ಕುಶಾಲರಾವ ಪಾಟೀಲ್ ಗಾದಗಿ ಹೇಳಿದರು.

ಔರಾದ ಪಟ್ಟಣದ ಬಿಜೆಪಿ ಕಾರ್ಯಲಯದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಾಡಿಕೆಯಂತೆ 40% ಮಳೆ ಕಡಿಮೆ ಆಗಿದೆ, ಎಲ್ಲಾ ಕಡೆ ನೀರಿನ ಹಾಹಾಕಾರ ಅಭಾವ ಉಂಟಾಗಿದ್ದು ಭವಿಷ್ಯದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ತೊಂದರೆ ಉಂಟಾಗುವ ಆತಂಕ ಎದುರಾಗಿದೆ. ರೈತರ ಪಂಪಸೆಟ್‌ ಗಳಿಗೆ ಅನಿಯಮಿತ ಲೋಡ್‌ ಶೆಡ್ಡಿಂಗ್‌ ಉಂಟಾಗಿದೆ. ಇದರಿಂದ ರೈತರ ನೀರಾವರಿಗೆ ತುಂಬಾ ಸಮಸ್ಯೆಯಾಗಿದೆ” ಎಂದು ಹೇಳಿದರು.

ನೂರು ದಿನದಲ್ಲಿ 42 ರೈತರ ಆತ್ಮಹತ್ಯೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಕಾಂಗ್ರೇಸ್‌ ಸರ್ಕಾರ ಅಧಿಕಾರಕ್ಕೆ ಬಂದ ನೂರು ದಿನದಲ್ಲಿ ಸುಮಾರು 42 ರೈತರು ಆತ್ಮಹತ್ಯೆ ಪ್ರಕರಣಗಳು ವರದಿ ಆಗಿರುವುದು ಆತಂಕದ ಸಂಗತಿ. ಕೇಂದ್ರ ಬಿಜೆಪಿ ಸರ್ಕಾರ ಜಾರಿಗೊಳಿಸಿದ ರಾಜ್ಯದ 51 ಲಕ್ಷ ರೈತರಿಗೆ ವಾರ್ಷಿಕ ಎರಡು ಕಂತುಗಳಲ್ಲಿ ನಾಲ್ಕು ಸಾವಿರ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ರಾಜ್ಯ ಸರ್ಕಾರ ರದ್ದುಗೊಳಿಸಿದೆ, ರೈತ ಕುಟುಂಬಗಳಿಗೆ ಸಹಾಧನ ನೀಡುವ ಉದ್ದೇಶದಿಂದ ಜಾರಿಗೊಳಿಸಿದ ರೈತ ನಿಧಿ ಯೋಜನೆ, ಭೂ ಸಿರಿ ಯೋಜನೆ, ಸ್ರಮ ಶಕ್ತಿ ಯೋಜನೆ, ರೈತ ಸಂಪದ ಯೋಜನೆ, ಜಿಲ್ಲೆಗೊಂದು ಗೋಶಾಲೆ ಯೋಜನೆ, ಎಪಿಎಂಸಿ ಕಾನೂನು ರದ್ದು, ಕೃಷಿ ಭೂಮಿ ಮಾರಾಟ ಕಾನೂನು, ಹಾಗೂ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್‌ ಯೋಜನೆಗಳು ಸರ್ಕಾರ ಕೈಬಿಡಲು ನಿರ್ಧರಿಸಿದ್ದು ಅಘಾತಕಾರಿಯಾಗಿದೆ” ಎಂದು ದೂರಿದರು.

“ರೈತರ ಅನುಕೂಲಕ್ಕಾಗಿ ಜಾರಿಗೊಳಿಸಿದ ಎಲ್ಲಾ ಯೋಜನೆಗಳನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸದೇ ಮರು ಅನುಷ್ಠಾನಕ್ಕೆ ಒತ್ತಾಯಿಸಿ ಸೆ. 8 ರಂದು ಜಿಲ್ಲೆಯ ಎಲ್ಲಾ ತಾಲೂಕು ತಹಸೀಲ್ ಕಚೇರಿಗಳ ಮುಂಭಾಗ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಲಾಗುವುದು” ಎಂದು ಹೇಳಿದರು.

ರಾಜ್ಯದ ಬಹುತೇಕ ಭಾಗದಲ್ಲಿ ಬರಗಾಲದ ಛಾಯೆ ಆವರಿಸಿದೆ, ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಲ್ಲಾ ಕಡೆ ಮಳೆಯಾಗದೇ ಅನಾವೃಷ್ಠಿ ಉಂಟಾಗಿದೆ, ಆದರೆ ಕಾಂಗ್ರೇಸ್‌ ಶಾಸಕರ ಇರುವ ಕ್ಷೇತ್ರಗಳು ಮಾತ್ರ ಬರಗಾಲ ಪೀಡಿತ ತಾಲೂಕು ಘೋಷಿಸಿರುವುದು ರೈತರಿಗೆ ಮಾಡಿರುವ ಬಹುದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಒತ್ತಾಯಿಸಿ ನಿಯಮಾನುಸಾರ ಉಳಿದ ತಾಲೂಕುಗಳು ಸಮೀಕ್ಷೆ ನಡೆಸಿ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದೀರಾ? ಬೀದರ್ | ಪೊಲೀಸ್ ಪೇದೆ ಆತ್ಮಹತ್ಯೆ

ಪತ್ರಿಕಾಗೋಷ್ಠಿಯಲ್ಲಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಸಂಜುಕುಮಾರ ಪಾಟೀಲ್, ತಾಲೂಕು ಬಿಜೆಪಿ ಪ್ರಭಾರಿ ವೀರಣ್ಣ ಕಾರಬಾರಿ, ಜಿಲ್ಲಾ ರೈತ ಮೋರ್ಚಾದ ರಾಜಕುಮಾರ್ ಹಡಕುಂಚಿ, ಔರಾದ ತಾಲೂಕು ರೈತ ಮೋರ್ಚಾದ ಅಧ್ಯಕ್ಷ ನಾಗಶೆಟ್ಟಿ ಗಾದಗಿ, ತಾಲೂಕು ಕಾರ್ಯದರ್ಶಿ ಸಂತೋಷ ಬೋರಾಳೆ, ಬಿಜೆಪಿ ತಾಲೂಕು ಕಾರ್ಯದರ್ಶಿ ಖಂಡೋಬಾ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...