ಉಡುಪಿ | ಕಂದಾಯ ಸಚಿವರಿಗೆ ದಸಂಸ ಅಂಬೇಡ್ಕರ್ ವಾದ ಮನವಿ

Date:

ಉಡುಪಿಗೆ ಆಗಮಿಸಿದ್ದ ರಾಜ್ಯ ಕಂದಾಯ ಸಚಿವರಾದ ಸನ್ಮಾನ್ಯ ಕ್ರಷ್ಣ ಬೈರೇ ಗೌಡರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ನಿಯೋಗವು ಇಂದು ಭೇಟಿ ಮಾಡಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ದಲಿತರು ಎದುರಿಸುತ್ತಿರುವ ಭೂ ಸಂಬಂಧಿ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು. ಸಂಘಟನೆಯು ನಡೆಸುತ್ತಿರುವ ದಲಿತರ ಪರ್ಯಾಯ ಕಂದಾಯ ಅದಾಲತ್ ಗಳ ಬಗ್ಗೆಯೂ ಸಚಿವರಿಗೆ ಮನವರಿಕೆ ಮಾಡಿ ಕೊಡಲಾಯಿತು.

1006448903

ಮನವಿಯಲ್ಲಿ ಏನಿದೆ ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಡುಪಿ ಜಿಲ್ಲೆಯಲ್ಲಿ ಪ. ಜಾತಿ ಪ. ಪಂಗಡದ ಶೇಕಡಾ 65 ರಷ್ಟು ಮಂದಿ ಇನ್ನೂ ಕೂಡ ವಸತಿ-ಭೂರಹಿತರಾಗಿರುತ್ತಾರೆ. ಜಿಲ್ಲೆಯಲ್ಲಿ ಭೂಮಿಯ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಈ ಹಿನ್ನೆಲೆಯಲ್ಲಿ ಸಂಘಟನೆಯು 10-15 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿರುವ ಈ ಕೆಳಗಿನ ಧೂಮಿ ಹಕ್ಕಿನ ಸಮಸ್ಯೆಗಳನ್ನು ತುರ್ತು ಕ್ರಮವಹಿಸಿ ತಾವು ಪರಿಹಾರ ಮಾಡಬೇಕಾಗಿ ಕೋರಿಕೊಳ್ಳುತ್ತೇವೆ.

1) ಉಡುಪಿ ಜಿಲ್ಲೆಯಲ್ಲಿ ಇರುವ ಡಿ.ಸಿ. ಮನ್ನಾ ಭೂಮಿಗಳನ್ನು ಅರ್ಹ ಭೂರಹಿತ ಪ.ಜಾತಿ/ಪಂಗಡದ ಸದಸ್ಯರಿಗೆ ಮರು ಹಂಚಿಕೆ ಮಾಡಬೇಕು.

2) ಅಕ್ರಮ-ಸಕ್ರಮ ಸಮಿತಿಯ ಮುಂದೆ ಇರುವ ಪ.ಜಾತಿ/ಪಂಗಡದ ಜನಗಳ ಅರ್ಜಿಗಳನ್ನು ಆದ್ಯತೆಯ ಮೇಲೆ ಕೂಡಲೇ ಇತ್ಯರ್ಥಪಡಿಸಿ ಅವರಿಗೆ ಭೂ ಮಂಜೂರಾತಿಯನ್ನು ನೀಡಬೇಕು.

3) ಭೂ ಕಂದಾಯ ಅಧಿನಿಯಮ 94ಸಿ, 94ಸಿಸಿ ಅರ್ಜಿ ಸಲ್ಲಿಸಿರುವ ಪರಿಶಿಷ್ಟರ ಬಾಕಿ ತಿರಸ್ಕೃತ ಅರ್ಜಿಗಳನ್ನು ಸೂಕ್ತ ಕ್ರಮಗಳ ಮೂಲಕ ಪರಿಶೀಲಿಸಿ ಅವರಿಗೇ ಅವರು ವಾಸ್ತವ್ಯ ಹೊಂದಿರುವ ಭೂಮಿಗಳ ಹಕ್ಕು ಪತ್ರ ವಿತರಣೆ ಮಾಡಬೇಕು.

4) ಜಿಲ್ಲೆಯಲ್ಲಿ ಮಂಜೂರಾತಿ ಪಡೆದು, ಪಹಣಿ ಪತ್ರವನ್ನು ಹೊಂದಿರುವ ಪರಿಶಿಷ್ಟರ ಭೂಮಿಗಳು ಇನ್ನೂ ಕೂಡ ಇತರ ಬಲಿಷ್ಠ ಸಮುದಾಯಗಳ ಸ್ವಾಧೀನತೆಯಲ್ಲಿ ಇದೆ. ಇಂತಹ ಭೂಮಿಗಳನ್ನು ಗುರುತಿಸಿ ಆ ಭೂಮಿಗಳನ್ನು ಮೂಲ ಮಂಜೂರಾತಿದಾರರ ಸ್ವಾಧೀನತೆಗೆ ತೆಗೆದುಕೊಳ್ಳಲು ಕ್ರಮವಹಿಸಬೇಕು.

1006449123

ನಿಯೋಗದಲ್ಲಿ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ಟರ್, ವಿಭಾಗೀಯ ಸಂಘಟನಾ ಸಂಚಾಲಕ ಶಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಜಿಲ್ಲಾ ಸಂಘಟನಾ ಸಂಚಾಲಕ ಭಾಸ್ಕರ್ ನಿಟ್ಟೂರು, ಕುಂದಾಪುರ ತಾಲೂಕು ಸಂಚಾಲಕ ರಾಜು ಬೆಟ್ಟಿನಮನೆ, ಬೈಂದೂರು ತಾಲೂಕು ಸಂಚಾಲಕ ಶಿವರಾಜ್, ಕಾಪು ತಾಲೂಕು ಸಂಚಾಲಕ ರಾಜೇಂದ್ರನಾಥ್, ಸಂದೀಪ್ ಕಿರಿಮಂಜೇಶ್ವರ, ರಾಘವ ಬೆಳ್ಳೆ, ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...