ಉಡುಪಿ | ಹಳ್ಳಿ ಹಳ್ಳಿಗಳಲ್ಲಿ ಅಸ್ಪೃಶ್ಯತೆ, ದಬ್ಬಾಳಿಕೆ ಇನ್ನೂ ಜೀವಂತ – ಶ್ಯಾಮರಾಜ್ ಬಿರ್ತಿ

Date:

ಬುದ್ಧಿವಂತರ, ವಿದ್ಯಾವಂತರ ಜಿಲ್ಲೆಯೆಂದು ಕರೆಸಿಕೊಳ್ಳುವ ಉಡುಪಿ ಜಿಲ್ಲೆಯ ಹಳ್ಳಿ ಹಳ್ಳಿಯ ಭಾಗಗಳಲ್ಲಿ ಅಸ್ಪೃಶ್ಯತೆ, ದಬ್ಬಾಳಿಕೆ, ದೌರ್ಜನ್ಯಗಳು ಇನ್ನೂ ಜೀವಂತವಾಗಿವೆ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಹೇಳಿದರು.

ಅವರು ಇಂದು ಬ್ರಹ್ಮಾವರ ತಾಲೂಕಿನ ಬಿಲ್ಲಾಡಿಯ ದ.ಸಂ.ಸ.ಅಂಬೇಡ್ಕರ್ ವಾದ ಗ್ರಾಮ ಶಾಖೆಯ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಿಸಿ ಮಾತನಾಡಿದರು.

ಬಿಲ್ಲಾಡಿ ಶಾಖೆ ಉದ್ಘಾಟಿಸಿ ಪ್ರಾಸ್ತಾವಿಕ ಮಾತನಾಡಿದ ದ.ಸಂ.ಸ.ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ದಲಿತ ಸಂಘರ್ಷ ಸಮಿತಿಯ ಹೋರಾಟ ಅಂದ್ರೆ ಅದು ಈ ಸಮಾಜದ ಶೋಷಿತರ ಪರವಾದ ಹೋರಾಟ, ನಿರ್ಗತಿಕರ ಪರವಾದ ಹೋರಾಟ ಇಲ್ಲಿ ಯಾವುದೇ ಸ್ವಹಿತಾಸಕ್ತಿಗೆ ಅವಕಾಶ ಇಲ್ಲ. ನಮ್ಮ ಭೀಮ ಸೇನಾನಿಗಳು ಮೈಯೆಲ್ಲಾ ಕಣ್ಣಾಗಿ ಸಮಾಜದಲ್ಲಿ ನಮಗಾಗುವ ಅನ್ಯಾಯದ ವಿರುದ್ಧ ಸಿಡಿದೇಳಬೇಕು. ಶೋಷಣೆ ಮತ್ತು ದೌರ್ಜನ್ಯವನ್ನು ಖಂಡಿಸಿ ದಮನಿತರ ಧ್ವನಿಯಾಗಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಲ್ಲಾಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಪ್ರಥ್ವಿರಾಜ್ ಹೆಗ್ಡೆ, ತಾಲೂಕು ಪಂಚಾಯತ್ ಸದಸ್ಯರಾದ ನಿರ್ಮಲ ಶೆಟ್ಟಿಯವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಾವರ ತಾಲೂಕು ಸಂಚಾಲಕರಾದ ವಡ್ಡರ್ಸೆ ಶ್ರೀನಿವಾಸ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ನ ಮಾಜಿ ಸದಸ್ಯರಾದ ಪ್ರವೀಣ್ ಶೆಟ್ಟಿ ವಂಡಾರು. ಚಂದ್ರಶೇಖರ್ ಶೆಟ್ಟಿ ಬಿಲ್ಲಾಡಿ, ದ.ಸಂ.ಸ.ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮಸುಂದರ ತೆಕ್ಕಟ್ಟೆ, ಸುರೇಶ ಹಕ್ಲಾಡಿ, ಜಿಲ್ಲಾ ಸಮಿತಿಯ ಸಧಸ್ಯರಾದ ಕುಮಾರ್ ಕೋಟಾ, ಹರೀಶ್ಚಂದ್ರ ಬಿರ್ತಿ, ರಾಜು ಬೆಟ್ಟಿನಮನೆ, ಸುಧಾಕರ ಮಾಸ್ಟರ್ ಗುಜ್ಜರಬೆಟ್ಟು, ಶಿವಾನಂದ ಬಿರ್ತಿ ಉಪಸ್ಥಿತರಿದ್ದರು.

ಪ್ರಶಾಂತ್ ಬಿರ್ತಿ ಮತ್ತು ತಂಡದವರಿಂದ ಹೋರಾಟದ ಗೀತೆಗಳನ್ನು ಹಾಡಲಾಯಿತು. ಗೌರಿ ಬಿಲ್ಲಾಡಿ ಅವರನ್ನು ಬಿಲ್ಲಾಡಿ ಶಾಖೆಯ ಮಹಿಳಾ ಸಂಚಾಲಕಿಯವರಾಗಿ ಆಯ್ಕೆ ಮಾಡಲಾಯಿತು‌. ಮೊದಲಿಗೆ ಚಂದ್ರ ಕೊರ್ಗಿಯವರು ಎಲ್ಲರನ್ನೂ ಸ್ವಾಗತಿಸಿದರು ಶ್ರೀನಿವಾಸ್ ಮಲ್ಯಾಡಿ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...