ಮೊಳಕಾಲ್ಮೂರು | ಒಳ ಮೀಸಲಾತಿ ಜಾರಿಗೊಳಿಸಿ, ಇಲ್ಲವೇ ಕುರ್ಚಿ ಬಿಡಿ ; ದಸಂಸ ಒತ್ತಾಯ

Date:

ರಾಜ್ಯದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಅನುಸಾರ ಶೀಘ್ರವಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಒಳಮಿಸಲಾತಿಯನ್ನು ಜಾರಿಗೊಳಿಸಬೇಕು, ಎಸ್.ಸಿ.ಪಿ – ಟಿ.ಎಸ್.ಪಿ ಅನುದಾನದ ದುರ್ಬಳಕೆಯನ್ನು ಸರ್ಕಾರ ನಿಲ್ಲಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಮೊಳಕಾಲ್ಮೂರು ಘಟಕದ ಮುಖಂಡರು ಮಂಗಳವಾರ ತಮಟೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ನಗರದ ಬಸ್‌ ನಿಲ್ದಾಣದಲ್ಲಿ ಜಮಾವಣೆಗೊಂಡ ಡಿಎಸ್ಎಸ್ ಕಾರ್ಯಕರ್ತರು ಒಳ ಮೀಸಲಾತಿ ಜಾರಿ ಮತ್ತು ಇತರೆ ಹಕ್ಕೊತ್ತಾಯಗಳಿಗಾಗಿ ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ದಸಂಸ ಮುಖಂಡ ಶ್ರೀನಿವಾಸ್, 30-40 ವರ್ಷಗಳಿಂದ ಹೋರಾಟ ನಡೆದಿದ್ದರೂ ಯಾವುದೇ ಸರ್ಕಾರಗಳು ಒಳ ಮೀಸಲಾತಿಯ ಪರವಾಗಿ ನಿರ್ಧಾರ ತೆಗೆದುಕೊಂಡು ಪರಿಶಿಷ್ಟ ಜಾತಿಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿಲ್ಲ. ಈಗ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಕೊಡುವ ಅಧಿಕಾರವನ್ನು ನೀಡಿದ್ದು, ನಾನು ದಲಿತರ ಪರ, ಶೋಷಿತರ ಪರ ಎನ್ನುವ ಸಿದ್ದರಾಮಯ್ಯ ಸರ್ಕಾರ ಕೂಡಲೇ ಒಳ ಮೀಸಲಾತಿಯನ್ನು ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊಳಕಾಲ್ಮೂರು ತಾಲೂಕು ಅತ್ಯಂತ ಹಿಂದುಳಿದ ಬಯಲು ಸೀಮೆ ಪ್ರದೇಶವಾಗಿದ್ದು, ಇದುವರೆಗೂ ಯಾವುದೇ ಕೈಗಾರಿಕೆಗಳು ಅಭಿವೃದ್ಧಿಯಾಗಿಲ್ಲ. ಉದ್ಯೋಗ ಸೃಷ್ಟಿಯ ವಿಚಾರವಾಗಿ ಜನಪ್ರತಿನಿಧಿಗಳು ಜಾಣಮೌನ ತಾಳಿದ್ದಾರೆ. ಇದರಿಂದ ಜನ ಹೊಟ್ಟೆಪಾಡಿಗಾಗಿ ವಲಸೆ ಹೋಗುತ್ತಿದ್ದಾರೆ. ಸಾಲ ಮಾಡಿ ನೇಣಿಗೆ ಕೊರಳೊಡ್ಡುತ್ತಿದ್ದಾರೆ. ಆದ ಕಾರಣ ಸರ್ಕಾರ ಮತ್ತು ಜನಪ್ರತಿನಿಧಿಗಳು ಶಾಸಕರು, ಸಂಸದರು ಮತ್ತು ಸಚಿವರು ಗಮನಹರಿಸಿ ಕೈಗಾರಿಕೆಗಳನ್ನು ಇಲ್ಲಿ ಸ್ಥಾಪಿಸುವ ಮೂಲಕ ತಾಲೂಕಿನ ಜನರಿಗೆ ಉದ್ಯೋಗ ನೀಡುವ ಕೆಲಸವನ್ನು ಮಾಡಬೇಕು. ಮೊಳಕಾಲ್ಮುರು ತಾಲೂಕಿನ ರೈತರಿಗೆ ನೀರನ್ನು ಕೊಡುವ, ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ತುರ್ತಾಗಿ ಮಾಡಬೇಕು ಎಂದು ಒತ್ತಾಯಿಸಿದರು.

ದಲಿತ ಮುಖಂಡ ಪರಮೇಶ್ ಮಾತನಾಡಿ, ಚುನಾವಣೆಗೆ ಮುಂಚೆ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂದು ನಮ್ಮಿಂದ ಮತ ಪಡೆದ ಸಿದ್ದರಾಮಯ್ಯ ಸರ್ಕಾರ ಒಂದುವರೆ ವರ್ಷಗಳಾದರೂ ಒಳ ಮೀಸಲಾತಿ ಬಗ್ಗೆ ತುಟಿ ಬಿಚ್ಚಿಲ್ಲ. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂವಿಧಾನ ಪೀಠ ರಾಜ್ಯ ಸರ್ಕಾರಗಳಿಗೆ ಚಾಟಿ ಬೀಸಿದ್ದು, ರಾಜ್ಯಗಳು ಒಳ ಮೀಸಲಾತಿಯನ್ನು ಜಾರಿಗೊಳಿಸಬಹುದು ಎಂದು ವಿವೇಚನಾ ಅಧಿಕಾರವನ್ನು ನೀಡಿದರೂ ಕೂಡ ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಎಂದು ಅವರಿವರ ಮೇಲೆ ಆರೋಪ ಮಾಡುತ್ತ ಕಾಲ ತಳ್ಳುತ್ತಿದ್ದಾರೆ. ಈ ಕೂಡಲೇ ಒಳ ಮೀಸಲಾತಿಯ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ, ಇದರ ಉಗ್ರ ಹೋರಾಟ ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ. ನೀವು “ಸದಾಶಿವ ಆಯೋಗದ ವರದಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಸಂಸ ತಾಲೂಕು ಸಂಚಾಲಕ ಚಿಕ್ಕೋಬನಳ್ಳಿ ಕರಿಬಸಪ್ಪ ಮಾತನಾಡಿ ದಲಿತರ ಪರ, ಅಹಿಂದ ವರ್ಗಗಳ ಪರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯನವರು ಕಾಲತಳ್ಳದೆ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು. ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಅನುಧಾನ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡಗಳ ಅನುದಾನಕ್ಕೆ ಬಳಸದೆ ದುರ್ಬಳಕೆಯಾಗುತ್ತಿದ್ದು ಅದನ್ನು ತಡೆಗಟ್ಟಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲೂ ಕೂಡ ಈ ಹಣ ದುರ್ಬಳಕೆಯಾಗುತ್ತಿದ್ದು, ಕೂಡಲೇ ಈ ಹಣ ದುರ್ಬಳಕೆ ಆಗುವುದನ್ನು ತಡೆಗಟ್ಟಬೇಕು. ಅದೇ ವರ್ಗಗಳ ಕಲ್ಯಾಣಕ್ಕೆ ಮಾತ್ರ ಬಳಸಬೇಕು. ಹಾಗೂ ಇತ್ತೀಚೆಗೆ ಕ್ಷೌರಿಕರೊಬ್ಬನಿಂದ ಕೊಲೆಯಾದ ದಲಿತ ಯುವಕನ ಮನೆಯವರಿಗೆ ಒಂದು ಕೋಟಿ ಪರಿಹಾರ ನೀಡಬೇಕು ಮತ್ತು ಈ ರೀತಿಯ ಪ್ರಕರಣಗಳ ವಿಚಾರಣೆಗೆ ಎಸ್ಐಟಿ ತಂಡವನ್ನು ರಚಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸದಾ ಜಾತಿಯ ಕುರಿತೇ ಚರ್ಚಿಸುವುದರಲ್ಲಿ ಒಂದು ಅಪಾಯವಿದೆ | thangalaan

ತಮಟೆ ಪ್ರತಿಭಟನೆಯಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ಬಸಪ್ಪ,ಹನುಮಂತ, ಸೋಮಶೇಖರ, ತಿಪ್ಪೇ ಸ್ವಾಮಿ, ಶೇಖರಪ್ಪ, ಬಸವರಾಜು, ಕಾಡಪ್ಪ, ಅಂಜಿನಪ್ಪ, ಚಂದ್ರಪ್ಪ, ನಾಗರಾಜ್ ಎರ್ರಿಸ್ವಾಮಿ, ಸಿದ್ದಣ್ಣ, ಮರಿಸ್ವಾಮಿ ನಾಗಸಮುದ್ರ, ತಿಪ್ಪೇಸ್ವಾಮಿ, ನಾಗೇಂದ್ರಪ್ಪ, ಚಂದ್ರಪ್ಪ, ಆನಂದ, ಅಶೋಕ್, ಶಿವಣ್ಣ ಹಾಗೂ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...