ತುಮಕೂರು | ದಸಂಸ ಸುವರ್ಣ ಮಹೋತ್ಸವ ಸಂಭ್ರಮ; ಫೆ.18ರಂದು ಸಮಾರಂಭ

Date:

ಸಮಾಜದ ಸಮಾನತೆಗಾಗಿ ನಿರಂತರ ಹೋರಾಡುತ್ತಿರುವ, ಶೋಷಿತ ವರ್ಗಕ್ಕೆ ಬೆನ್ನೆಲುಬಾಗಿ ನಿಂತಿರುವ ಪ್ರೊ. ಬಿ ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ (ದಸಂಸ) 50 ವರ್ಷದ ಸುವರ್ಣ ಮಹೋತ್ಸವ ಸಂಭ್ರಮ ಆಚರಿಸಿಕೊಳ್ಳುತ್ತಿದೆ. ಫೆ.18ರಂದು ತುಮಕೂರಿನಲ್ಲಿ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಎಲ್ಲ ದಲಿತ ಮುಖಂಡರು ಬಣಗಳನ್ನು ಬದಿಗೊತ್ತಿ ಭಾಗಿಯಾಗಬೇಕು ಎಂಧು ದಸಂಸ ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ ಮನವಿ ಮಾಡಿದ್ದಾರೆ.

ಗುಬ್ಬಿಯಲ್ಲಿ ಸುದ್ದಿಗೋ‍ಷ್ಠಿ ನಡೆಸಿ ಅವರು ಮಾತನಾಡಿದರು. “ಫೆ.18ರಂದು ತುಮಕೂರಿನ ಎಂಪ್ರೆಸ್ ಆಡಿಟೋರಿಯಂನಲ್ಲಿ ಸುವರ್ಣ ಮಹೋತ್ಸವ ಸಮಾರಂಭ ನಡೆಯಲಿದೆ. ಸಮಾರಂಭವನ್ನು ಸಹಕಾರ ಸಚಿವ ಕೆ.ಎನ್ ರಾಜಣ್ಣ ಉದ್ಘಾಟಿಸಲಿದ್ದಾರೆ. ದಸಂಸ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ‘ದಲಿತ ಚಳವಳಿಯ ತಾತ್ವಿಕ ನೆಲೆಗಳು’ ಎಂಬ ಪುಸ್ತಕವನ್ನು ದಸಂಸ ರಾಜ್ಯ ಸಂಚಾಲಕ ಎಂ ಗುರುಮೂರ್ತಿ ಬಿಡುಗಡೆಗೊಳಿಸಲಿದ್ದಾರೆ” ಎಂದು ತಿಳಿಸಿದರು.

“ರಾಜ್ಯದ ನಾನಾ ಭಾಗಗಳಲ್ಲಿ ದಲಿತರು ಅನುಭವಿಸಿದ ದೌರ್ಜನ್ಯ ಪ್ರಶ್ನಿಸುವ ವಿದ್ಯಮಾನವನ್ನು ಒಂದಡೆ ಸೇರಿಸಲು ಒಂದು ಸಾಂಸ್ಥಿಕ ವೇದಿಕೆ ಸೃಷ್ಟಿಸಿ ದಲಿತ ಸಂಘರ್ಷ ಸಮಿತಿ ರಚಿಸಿ ಅಂಬೇಡ್ಕರ ಹೇಳಿದ ಶಿಕ್ಷಣ, ಸಂಘಟನೆ ಮತ್ತು ಹೋರಾಟ ತತ್ವ ಅಳವಡಿಕೊಂಡು ಅನೇಕ ಹೋರಾಟದಲ್ಲಿ ನ್ಯಾಯ ದೊರಕಿಸಿ ಕೊಡುವ ಕೆಲಸ ಪ್ರೊ.ಬಿ.ಕೃಷ್ಣಪ್ಪ ಹಾಗೂ ಎನ್.ಗಿರಿಯಪ್ಪ ನಡೆಸಿದ್ದರು. ಇದರ ಫಲ ಇಂದು ದಲಿತರಿಗೆ ಹೋರಾಟದ ಶಕ್ತಿ ಬಂದಿದೆ. ಈ ಹಿಂದೆ ನಡೆದ ಬೆತ್ತಲೆ ಸೇವೆ, ಪಿಟಿಸಿಎಲ್ ಕಾಯಿದೆ, ಉಳುವವನೇ ಭೂಮಿ ಒಡೆಯ ಕಾನೂನು ಹಾಗೂ ದಲಿತ ಮಕ್ಕಳ ಶಿಕ್ಷಣಕ್ಕೆ ವಸತಿ ಶಾಲೆ ತೆರೆದ ಕೀರ್ತಿ ದಸಂಸ ಗೆ ಸಲ್ಲಲಿದೆ ಎಂದ ಅವರು ಈ ಅಭೂತ ಪೂರ್ವ ಕಾರ್ಯಕ್ರಮದಲ್ಲಿ ನಿರಂತರ ಹೋರಾಟ ನಡೆಸಿದ ತಾಲ್ಲೂಕು ಮತ್ತು ಜಿಲ್ಲಾ ದಲಿತ ಮುಖಂಡರಿಗೆ ಸನ್ಮಾನ ಮಾಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಸಂಸ ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಲಾವಣ್ಯ ಮಾತನಾಡಿ, “ಮಹಿಳಾ ದೌರ್ಜನ್ಯ ತಡೆ ಹಿಡಿಯಲು ಈ ಸಂಘಟನೆ ದೊಡ್ಡ ಶಕ್ತಿಯಾಗಿ ಹೊರ ಹೊಮ್ಮಿದೆ. ತುಳಿತಕ್ಕೆ ಒಳಗಾದ ಮಹಿಳೆಯರ ಬಗ್ಗೆ ಸಂಘರ್ಷ ಸಮಿತಿ ಕಾಳಜಿ ವಹಿಸಿ ಸಮಾನತೆ ನೀಡುವಲ್ಲಿ ಸಹ ಹೋರಾಟ ನಡೆಸಿದೆ. ಇಂತಹ ವೈಚಾರಿಕತೆಯ ದಸಂಸ 50 ವರ್ಷ ತುಂಬಿರುವುದು ಸಾರ್ಥಕ ಕ್ಷಣವಾಗಿದೆ. ಈ ಸಂಭ್ರಮಕ್ಕೆ ತಾಲೂಕಿನ ಎಲ್ಲಾ ದಲಿತರು ಆಗಮಿಸಿ ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಈಶ್ವರಯ್ಯ, ನರೇಂದ್ರ ಕುಮಾರ್, ಸುರೇಶ್, ರಾಮಕೃಷ್ಣ, ದೊಡ್ಡಮ್ಮ, ಶಿವಮ್ಮ, ರಮೇಶ್, ಮಧು, ಯೋಗೀಶ್, ನರಸಿಯಪ್ಪ, ಸಿದ್ದೇಶ್ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...