ಉಡುಪಿ | ಅಂಬೇಡ್ಕರ್ ರವರಿಂದ ಎಲ್ಲಾ ಮಹಿಳೆಯರಿಗೆ ಸ್ವಾಭಿಮಾನದ ಬದುಕು – ತಹಶೀಲ್ದಾರ್ ಡಾ ಪ್ರತಿಭಾ ಆರ್

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ಇಂದು ಕಾಪುವಿನ ಕಾಂಚನ್ ಸಮೂದಾಯ ಭವನದಲ್ಲಿ ನಡೆದ ನವಚೇತನ ಸಮಾವೇಶ ಮತ್ತು ನೂತನ ಕಾಪು ತಾಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಕಾಪು ತಹಶೀಲ್ದಾರ್ ಡಾಕ್ಟರ್ ಪ್ರತಿಭಾ .ಆರ್ ಇಡೀ ಭಾರತದ ಎಲ್ಲಾ ಸಮೂದಾಯದ ಮಹಿಳೆಯರಿಗೆ ಸ್ವಾಭಿಮಾನದ ಬಧುಕು ಕಟ್ಟಿ ಕೊಟ್ಟವರು ಡಾಕ್ಟರ್ ಬಾಬಾಸಾಸೇಬ್ ಅಂಬೇಡ್ಕರ್ ರವರು. ಅಂಬೇಡ್ಕರ್ ರವರು ಸಂವಿಧಾನ ಬರೆಯದೇ ಇರುತ್ತಿದ್ದರೆ ನನಗೆ ಈ ಅವಕಾಶವೇ ಸಿಗುತ್ತಿರಲಿಲ್ಲ ಎಂದರು. ಸಂವಿಧಾನ ರಚನಾ ಸಮಿತಿಯಲ್ಲಿ ಇದ್ದ ಒಬ್ಬೊಬ್ಬರು ಒಂದೊಂದು ಕಾರಣದಿಂದ ಸಂವಿಧಾನ ರಚನಾ ಕಾರ್ಯದಿಂದ ದೂರ ಸರಿದಾಗ ಬಾಬಾಸಾಸೇಬ್ ಅವರೊಬ್ಬರೇ ಹಗಲಿರುಳು ಶ್ರಮವಹಿಸಿ, ವಿಶ್ವದ ಹಲವಾರು ಸಂವಿಧಾನಗಳನ್ನು ಅಧ್ಯಯನ ನಡೆಸಿ ಈ ಬ‌ಹುತ್ವದ ದೇಶಕ್ಕೆ ಒಂದು ಅತ್ಯಮೂಲ್ಯ ಸಂವಿಧಾನವನ್ನು ರಚಿಸಿ ಕೊಟ್ಟರು.ಮತ್ತು ಸಂವಿಧಾನ ಪೀಠಿಕೆಯಲ್ಲೇ ‌ಸಮಾನತೆ, ಸಂಹೋದರತೆಯನ್ನು ಸೇರಿಸಿ ಈ ದೇಶದಲ್ಲಿ ಎಲ್ಲರೂ ಸಮಾನರು ಎಂಬ ತತ್ವವನ್ನು ಖಾತ್ರಿಪಡಿಸಿದರು. ನಮ್ಮ ಏಳಿಗೆಗೆ ನಾವೇ ಶ್ರಮಿಸಬೇಕೇ ವಿನಹಃ, ನಮ್ಮ ಉದ್ದಾರ ಬೇರೆಯವರು ಮಾಡುತ್ತಾರೆ ಎನ್ನುವ ಭ್ರಮೆಯಲ್ಲಿ ಇರಬಾರದು. ಹಾಗಾಗಿ ಶಿಕ್ಷಣಕ್ಕೆ ಅತೀ ಹೆಚ್ಚಿನ ಮಹತ್ವ ನೀಡಿ ಎಲ್ಲರೂ ತಮ್ಮ ಕಾಲ ಮೇಲೆ ತಾವು ನಿಲ್ಲುವಂತಾಗಬೇಕು ಎಂದರು.

WhatsApp Image 2025 08 03 at 5.51.35 AM

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಕಾಪು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಜೇಮ್ಸ್ ಡಿಸಿಲ್ವಾ ಅವರು ಇಡೀ ಸಮಾಜದಲ್ಲಿ ಮೇಲರಿಮೆಯ ವ್ಯಸನ ತುಂಬಿಕೊಂಡಿದೆ. ನಾನೇ ಶ್ರೇಷ್ಠ , ನಾನೇ ಮೇಲು ಎನ್ನುವ ವ್ಯಸನ ಪ್ರತಿಯೊಂದು ಕಡೆಯಲ್ಲೂ, ವ್ಯವಸ್ಥೆಯಲ್ಲೂ ಬೇರೂರಿ ಬಿಟ್ಟಿದೆ.ಇದನ್ನು ತೊಡೆದುಹಾಕುವ ಕೆಲಸವಾಗಬೇಕು ಎಂದರು. ಇನ್ನೊಬ್ಬರು ಮುಖ್ಯ ಅತಿಥಿಯವರಾದ ಕಾಪು ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ಕೆ.ದಿವಾಕರ ಶೆಟ್ಟಿ ಮಾತನಾಡಿ ನಮ್ಮೆಲ್ಲಾ ವಿಧ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಆದ ತಕ್ಷಣ ಯಾವ ಕೋರ್ಸುಗಳಿಗೆ ಹೋದರೆ ಹೆಚ್ಚಿನ ಉಧ್ಯೋಗ ಅವಕಾಶಗಳಿವೆ. ಯಾವ ವಿಧ್ಯಾಭ್ಯಾಸ ಮಾಡಿದರೆ ಉದ್ಯೋಗ ಗ್ಯಾರಂಟಿ ಎಂಬ ಜ್ಞಾನವನ್ನು ನಮ್ಮ ವಿದ್ಯಾರ್ಥಿಗಳ ಹೆತ್ತವರಿಗೆ ಕೊಡಬೇಕು, ಆಗ ಮಾತ್ರ ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ಸಮಾವೇಶವನ್ನು ದ.ಸಂ.ಸ.ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ಉಧ್ಘಾಟಿಸಿದರು. ನೂತನ ಪದಾಧಿಕಾರಿಗಳಿಗೆ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಪ್ರಮಾಣ ವಚನ ಭೋಧಿಸಿದರು.ಸಮಾವೇಶದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ವಹಿಸಿದ್ದರು. ವೇದಿಕೆಯಲ್ಲಿ ಕೌನ್ಸಿಲರ್ ಗಳಾದ ಸತೀಶ್ಚಂದ್ರ ಮೂಳೂರು, ರತ್ನಾಕರ ಶೆಟ್ಟಿ ಪಡುಮನೆ, ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮಸುಂದರ ತೆಕ್ಕಟ್ಟೆ, ಸುರೇಶ ಹಕ್ಲಾಡಿ, ಅಣ್ಣಪ್ಪ ನಕ್ರೆ, ಮಂಜುನಾಥ ನಾಗೂರು, ಭಾಸ್ಕರ್ ನಿಟ್ಟೂರು, ವಿಠಲ ಉಚ್ಚಿಲ, ತಾಲೂಕು ಸಂಚಾಲಕರಾದ ರಾಜೇಂದ್ರ ಬೆಳ್ಳೆ, ಶಂಕರ್ ದಾಸ್ ಚೇಂಡ್ಕಳ, ರಾಜು ಬೆಟ್ಟಿನಮನೆ, ರಾಘವ ಕುಕುಜೆ, ಹರೀಶ್ಚಂದ್ರ ಬಿರ್ತಿ, ಶಿವರಾಜ್ ಬೈಂದೂರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...