ಉಡುಪಿ | ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಬದುಕು ಕಟ್ಟಿಕೊಟ್ಟ ಪ್ರಾತಃಸ್ಮರಣೀಯ ನಾಯಕ ಅಂಬೇಡ್ಕರ್ : ಕೋಟ ಶ್ರೀನಿವಾಸ ಪೂಜಾರಿ

Date:

ದೇಶದಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಂವಿಧಾನದ ಮೂಲಕ ಸಾಮಾಜಿಕ ನ್ಯಾಯದ ಮೂಲಕ ಬದುಕು ಕಲ್ಪಿಸಿಕೊಟ್ಟ, ಪ್ರಪಂಚದಲ್ಲೇ ಅತ್ಯುನ್ನತ ಸಂವಿಧಾನ ನೀಡಿದ ಮಹಾನ್ ಚೇತನ ಬಾಬಾಸಾಹೇಬ್ ಅಂಬೇಡ್ಕರ್ ರವರು. ಬಾಬಾಸಾಹೇಬರು ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಿಕೊಟ್ಟ ಪ್ರಾತಃಸ್ಮರಣೀಯರು ನಾವೆಲ್ಲರೂ ಸದಾ ನೆನಪು ಮಾಡಿಕೊಳ್ಳಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಸನ್ಮಾನ್ಯ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದರು.

ಅವರು ಬ್ರಹ್ಮಾವರದ ಬಸ್ಟ್ಯಾಂಡ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಬ್ರಹ್ಮಾವರ ತಾಲೂಕು ಶಾಖೆ ಹಮ್ಮಿಕೊಂಡಿದ್ದ ಬಾಬಾಸಾಹೇಬ್ ಅಂಬೇಡ್ಕರ್ ರವರ 70 ನೇ ಪರಿನಿಬ್ಬಾಣ ದಿನದಂದು ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವದ ಪುಷ್ಫ ನಮನ ಸಲ್ಲಿಸಿ ಮಾತನಾಡುತ್ತಿದ್ದರು.

ಮುಖ್ಯ ಅತಿಥಿಗಳಾಗಿ ಮಾತನಾಡಿದ ಮಾಜಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸನ್ಮಾನ್ಯ ಬಿ. ಬುಜಂಗ ಶೆಟ್ಟಿಯವರು ಮಾತನಾಡಿ ಎಲ್ಲಾ ವರ್ಗ, ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ನೆಮ್ಮದಿಯಾಗಿ ಬಾಳಲಿಕ್ಕೆ ಬೇಕಾದ ಅವಕಾಶಗಳನ್ನು ಕಲ್ಪಿಸಿಕೊಟ್ಟ ಮಹಾ ಮೇಧಾವಿ ಬಾಬಾಸಾಹೇಬ್ ಅಂಬೇಡ್ಕರ್ ರವರು. ಅವರನ್ನು ಪ್ರತೀ ದಿನವೂ ನಾವು ಸ್ಮರಣೆ ಮಾಡಬೇಕು ಅದರಲ್ಲೂ ಶಾಲಾ ಮಕ್ಕಳಿಗೆ ಅತೀ ಅಗತ್ಯವಾಗಿ ಅಂಬೇಡ್ಕರ್ ಮಹತ್ವದ ಬಗ್ಗೆ ತಿಳಿಸುವ ಕೆಲಸ ನಾವು ಮಾಡಬೇಕಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನೊಬ್ಬ ಅತಿಥಿ ಬ್ರಹ್ಮಾವರ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಸನ್ಮಾನ್ಯ ಬಿರ್ತಿ ರಾಜೇಶ್ ಶೆಟ್ಟಿಯವರು ಮಾತನಾಡಿ ಬಾಬಾಸಾಹೇಬ್ ಅಂಬೇಡ್ಕರ್ ರವರು ಒಂದು ಜಾತಿ, ಒಂದು ಧರ್ಮದ ನಾಯಕರಲ್ಲಾ ಅವರು ಈ ದೇಶದ ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶ ನೀಡಿದ ಮಹಾನ್ ನೇತಾರ, ಅಸ್ಪೃಶ್ಯತೆ, ಜೀತ ಪದ್ದತಿಯನ್ನು ಹೋಗಲಾಡಿಸಿದ ಮಾಹಾನ್ ಕ್ರಾಂತಿಕಾರಿ, ಸ್ವತಃ ತಾವು ಮೇಲ್ವರ್ಗದವರಿಂದ ಅನುಭವಿಸಿದ ಅವಮಾನ ಅಸ್ಪೃಶ್ಯತೆಗಳನ್ನು ಸಹಿಸಿಕೊಂಡು ನಮ್ಮ ಮುಂದಿನ ಪೀಳಿಗೆ ಸುಖ, ಸಂತೋಷ, ನೆಮ್ಮದಿಯ ಜೀವನ ನಡೆಸಬೇಕೆಂಬ ದೂರ ದೃಷ್ಟಿಯನ್ನು ನಮ್ಮ ದೇಶಕ್ಕೆ ಎಲ್ಲರಿಗೂ ಸಮಾನ ಅವಕಾಶ ಇರುವ ಸಂವಿಧಾನವನ್ನು ರಚಿಸಿಕೊಟ್ಟರು ಅದನ್ನು ಸದಾ ನಾವು ನೆನಪಲ್ಲಿ ಇಟ್ಟಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ವಾರಂಬಳ್ಳಿ ಪಂಚಾಯತ್ ಅಧ್ಯಕ್ಷರಾದ ಸನ್ಮಾನ್ಯ ನಿತ್ಯಾನಂದ ರಾವ್ ಬಿ. ಆರ್, ಮಾಜಿ ಅಧ್ಯಕ್ಷರಾದ ನವೀನ್ ನಾಯಕ್, ಪಂಚಾಯತ್ ಸದಸ್ಯರಾದ ದೇವಾನಂದ ನಾಯಕ್, ನಗರಸಭೆ ಸದಸ್ಯರಾದ ವಿಜಯ ಕುಮಾರ್ ಕೊಡವುರು, ಬ್ರಹ್ಮಾವರ ವ್ಯವಸಾಯ ಸಹಕಾರ ಸಂಘದ ನಿರ್ಧೇಶಕರಾದ ಎಸ್. ನಾರಾಯಣ, ದ.ಸಂ.ಸ. ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು, ಬ್ರಹ್ಮಾವರ ತಾಲೂಕು ಪ್ರಧಾನ ಸಂಚಾಲಕರಾದ ಶ್ಯಾಮಸುಂದರ ತೆಕ್ಕಟ್ಟೆ, ದ.ಸಂ.ಸ. ಪದಾಧಿಕಾರಿಗಳಾದ ಕುಮಾರ್ ಕೋಟ, ಮಂಜುನಾಥ್ ಬಾಳ್ಕುದ್ರು, ಹರೀಶ್ಚಂದ್ರ ಕೆ. ಡಿ., ಸುಧಾಕರ ಮಾಸ್ಟರ್ ಗುಜ್ಜರಬೆಟ್ಟು, ಬಿರ್ತಿ ಸುರೇಶ, ಶಿವಾನಂದ ಬಿರ್ತಿ, ವಿಜಯ ಗಿಳಿಯಾರು, ಶ್ರೀನಿವಾಸ್ ವಡ್ಡರ್ಸೆ, ಪ್ರಕಾಶ್ ಹೇರೂರು, ಅನಿಲ ಬಿರ್ತಿ, ಚೖತನ್ಯ ಬಿರ್ತಿ, ಪ್ರಶಾಂತ್ ಬಿರ್ತಿ, ಶರತ್ ಆರೂರು, ಇದ್ರಿಸ್ ಹೂಡೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...