ಚಿಕ್ಕಬಳ್ಳಾಪುರ | ದಲಿತರನ್ನು ಎದುರು ಹಾಕಿಕೊಂಡರೆ ಸರಕಾರಗಳಿಗೆ ಉಳಿಗಾಲವಿಲ್ಲ : ಆರ್‌ ಆಂಜನೇಯ ರೆಡ್ಡಿ ಎಚ್ಚರಿಕೆ

Date:

ದಲಿತರನ್ನು ಎದುರು ಹಾಕಿಕೊಂಡರೆ ಸರಕಾರಗಳಿಗೆ ಉಳಿಗಾಲವಿಲ್ಲ. ಹಾಗಾಗಿ ಆಳುವ ಸರಕಾರಗಳು ದಲಿತ ಹೋರಾಟಗಾರರ ತಾಳ್ಮೆಯನ್ನು ಪರೀಕ್ಷೆ ಮಾಡಬಾರದು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್‌ ಆಂಜನೇಯ ರೆಡ್ಡಿ ಎಚ್ಚರಿಕೆ ನೀಡಿದರು.

ಚಿಕ್ಕಬಳ್ಳಾಪುರ ನಗರದ ತಾಲೂಕು ಕಚೇರಿ ಮುಂಭಾಗ ಸೋಮವಾರ ಎಂಟನೇ ದಿನಕ್ಕೆ ಕಾಲಿಟ್ಟ ದಸಂಸ ಹಾಗೂ ಗಡಿನಾಡು ರೈತ ಸಂಘದ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ನೀಡಿ ಮಾತನಾಡಿದ ಅವರು, ದಲಿತ ಹೋರಾಟಗಾರರನ್ನು ಎದುರು ಹಾಕಿಕೊಂಡರೆ ಸರಕಾರಗಳಿಗೆ ಉಳಿಗಾಲವಿಲ್ಲ. ಆದ್ದರಿಂದ, ದಲಿತರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದರೆ ನಿಮ್ಮ ಅಧಿಕಾರ ಕಸಿದುಕೊಳ್ಳುತ್ತಾರೆ ಎಂದು ಹೇಳಿದರು.

ಪ್ರಪಂಚದಲ್ಲಿ ಶುದ್ಧ ಕುಡಿಯುವ ನೀರಲ್ಲಿ ಇಂತಿಷ್ಟು ಪ್ರಮಾಣದಲ್ಲಿ ಆರೋಗ್ಯಕರ ಅಂಶಗಳಿರಬೇಕೆಂದು ಡಬ್ಲ್ಯೂಎಚ್‌ಒ ನಿಗದಿಗೊಳಿಸಿದೆ. ಆದರೆ, ನಮ್ಮ ದುರಾದೃಷ್ಟ ನಮಗೆ ನೈಟ್ರೇಟ್ ಯುಕ್ತ ನೀರನ್ನು ಕೊಡಲಾಗಿದೆ. ಇದರಿಂದ ಕೆಲವೇ ದಿನಗಳಲ್ಲಿ ಕ್ಯಾನ್ಸರ್‌ ಕಾಯಿಲೆ ಬರುವುದು ಖಚಿತ ಎಂದು ಆತಂಕಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ಮುಖಂಡ, ಜಿಪಂ ಮಾಜಿ ಸದಸ್ಯ ರಾಜಾಕಾಂತ್ ಮಾತನಾಡಿ, ಜಿಲ್ಲಾದ್ಯಂತ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಏಕಕಾಲಕ್ಕೆ ದಲಿತರು ಹಾಗೂ ರೈತ ಮುಖಂಡರು ಭೂಮಿ, ವಸತಿ ಇತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಗುಡಿಬಂಡೆಯ 92 ವರ್ಷದ ದಲಿತರೊಬ್ಬರು ಸಾವನ್ನಪಿದ್ದಾರೆ. ಮಹಿಳೆಯರು, ಮಕ್ಕಳು, ವಯಸ್ಕರು ಚಳಿಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಎಸ್‌ಸಿಎಸ್‌ಪಿ / ಟಿಎಸ್‌ಪಿ ಅನುದಾನ ಬಳಕೆಯಾಗುತ್ತಿಲ್ಲವೇಕೆ?

ಒಂದು ಬಡಾವಣೆ ನಿರ್ಮಾಣ ಮಾಡಲು 18 ವರ್ಷ ಸಮಯ ತೆಗೆದುಕೊಂಡಿದ್ದಾರೆ. ಡಿಸಿಯವರ ಮಾತನ್ನ ತಹಶೀಲ್ದಾರ್ ಕೇಳದಿದ್ದರೆ, ಈ ಜಿಲ್ಲೆಗೆ ಜಿಲ್ಲಾಧಿಕಾರಿ ಬೇಕಾ ಎಂಬ ಪ್ರಶ್ನೆ ಮೂಡುತ್ತದೆ. ಕೆಲಸ ಮಾಡದ, ಮಾತನ್ನು ಕೇಳದ ತಹಶೀಲ್ದಾರ್ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಎಲ್ಲೆಲ್ಲಿ ಆಶ್ರಯ ಯೋಜನೆ ಸಮಿತಿಗಳು, ಬಗರ್‌ ಹುಕುಂ ಸಮಿತಿಗಳು ಇಲ್ಲವೋ ಅಲ್ಲಿ ಡಿಸಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಬಗರ್ ಹುಕುಂ ಸಾಗುವಳಿ ಚೀಟಿ ವಿತರಿಸಬೇಕೆಂಬ ನಿಯಮವಿದೆ. ಆದರೂ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಬಗರ್‌ ಹುಕುಂ ಸಮಿತಿ ಇದ್ದೂ ಇಲ್ಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವ ರೆಡ್ಡಿ ಮಾತನಾಡಿ, ದಲಿತರು, ಲಿಂಗತ್ವ ಅಲ್ಪಸಂಖ್ಯಾತರು, ವಿಕಲಚೇತನರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಎಲ್ಲಾ ಮುಖಂಡರೊಂದಿಗೆ ಚರ್ಚಿಸಲಾಗುವುದು. ಭೂಮಿ, ವಸತಿ ನಿರ್ಮಾಣದ ಕುರಿತು ಎಲ್ಲಾ ಶಾಸಕರ ಗಮನಕ್ಕೆ ತಂದು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

ಜಿಪಂ ಸಿಇಒ ಪ್ರಕಾಶ್‌ ಜೆ ನಿಟ್ಟಾಲಿ ಮಾತನಾಡಿ, ಪ್ರಸ್ತುತ 13 ಬೇಡಿಕೆಗಳನ್ನು ಇಟ್ಟಿದ್ದಾರೆ. ಯಾವುದೇ ಅಧಿಕಾರಿಗಳು ದಲಿತರ ಪರವಾಗಿಲ್ಲ ಎಂದು ಹೇಳಲಾಗುವುದಿಲ್ಲ. ನಮ್ಮಿಂದ ತಪ್ಪಾಗಿದ್ದರೆ ಕೂಡಲೇ ಸರಿಪಡಿಸುವ ಕೆಲಸ ಮಾಡುತ್ತೇವೆ. ಜಿಲ್ಲಾಧಿಕಾರಿಗಳ ಸಭೆ ಕರೆದು ಸಮಸ್ಯೆಗಳ ಕುರಿತು ಕ್ರಮವಹಿಸಲಾಗುವುದು. ದಯವಿಟ್ಟು ಧರಣಿಯನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.

ಗಡಿನಾಡು ರೈತ ಸಂಘದ ಜಿಲ್ಲಾಧ್ಯಕ್ಷ ಮಂಚನಬೆಲೆ ವೆಂಕಟೇಶ್‌, ರಾಜ್ಯ ವಿಕಲಚೇತನರ ಒಕ್ಕೂಟದ ಜಿಲ್ಲಾಧ್ಯಕ್ಷ ಕಿರಣ್‌ ನಾಯಕ್ ಮಾತನಾಡಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ನವ ಗ್ರಾಮಗಳ ಹುಟ್ಟಿಗಾಗಿ ಶ್ರಮ ಸಮಾಜ ಪಕ್ಷದ ಉದಯ

ಪ್ರತಿಭಟನೆ ವೇಳೆ ಎಸಿ ಅತೀಕ್‌ ಪಾಶ, ನಗರಸಭೆ ಆಯುಕ್ತರು, ತಾಪಂ ಇಒ ಮಂಜುನಾಥ್‌ ಸೇರಿದಂತೆ ನೂರಾರು ಮಂದಿ ಪ್ರತಿಭಟನಾಕಾರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...