ದಸರಾ ಮೆರವಣಿಗೆ : ತುಮಕೂರು ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

Date:

ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಚರಿಸಲಾಗುತ್ತಿರುವ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 12ರಂದು ವೈಭವದ ದಸರಾ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಾಹನ ಸಂಚಾರ ಮಾರ್ಗ ಬದಲಾಯಿಸಿ ಕೆಲವು ಸ್ಥಳಗಳಲ್ಲಿ ವಾಹನಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.

ಮೆರವಣಿಗೆಯಲ್ಲಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತ ಜಂಬೂಸವಾರಿ, 25 ಕಲಾತಂಡ, ತುಮಕೂರು ನಗರದ ದೇವರು, ವಿಂಟೇಜ್ ಕಾರು, ಅಶ್ವ, ಸಾಂಪ್ರಾಯದಾಯಿಕ ಉಡುಗೆ ತಂಡ ಪಾಲ್ಗೊಳ್ಳಲಿವೆ. ಸುಮಾರು 1.5 ಕಿ.ಮೀಗಳಷ್ಟು ದೂರ ಸಾಗುವ ಮೆರವಣಿಗೆಯಲ್ಲಿ ವಿವಿಧ ಸಚಿವರು, ಸಂಸದರು, ಶಾಸಕರು, ಅಧಿಕಾರಿಗಳು, ಗಣ್ಯ ವ್ಯಕ್ತಿಗಳು, ರಾಜಕೀಯ ಮುಖಂಡರು ಹಾಗೂ ಸಾರ್ವಜನಿಕರು ಸೇರಿ ಸುಮಾರು 30,000-35,000 ಜನರು ಸೇರುವ ನಿರೀಕ್ಷೆಯಿರುವುದರಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ವಾಹನ ಸಂಚಾರ ಮಾರ್ಗವನ್ನು ಬದಲಾಯಿಸಿ ಆದೇಶ ಹೊರಡಿಸಲಾಗಿದೆ.

ಮೆರವಣಿಗೆಯು ಅಶೋಕರಸ್ತೆ, ಸ್ವತಂತ್ರ ಚೌಕ, ಕೋಡಿ ಸರ್ಕಲ್, ಅಮಾನಿಕೆರೆರಸ್ತೆ, ಕೋತಿತೋಪು ರಸ್ತೆ, ಎಸ್.ಎಸ್. ಸರ್ಕಲ್ ಮಾರ್ಗವಾಗಿ ಭದ್ರಮ್ಮ ಸರ್ಕಲ್ ಮುಖಾಂತರ ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ಆಗಮಿಸಲಿದೆ. ತುಮಕೂರು ದಸರಾ ಮೆರವಣಿಗೆ ಹಿನ್ನೆಲೆಯಲ್ಲಿ ವಾಹನ ಸಂಚಾರ ಮಾರ್ಗದಲ್ಲಿ ವ್ಯತ್ಯಯ ಉಂಟಾಗಲಿದ್ದು, ನಗರದಲ್ಲಿ ಅಕ್ಟೋಬರ್ 12ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಾಹನ ಸಂಚಾರ ಮಾರ್ಗ ಬದಲಾವಣೆ ಆದೇಶ ಜಾರಿಯಲ್ಲಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಕಡೆಯಿಂದ ತುಮಕೂರು ನಗರಕ್ಕೆ ಬರುವ ವಾಹನಗಳು : ದಸರಾ ಮೆರವಣಿಗೆಯು ಬಿ.ಜಿ.ಎಸ್. ಸರ್ಕಲ್‌ನಿಂದ ಪ್ರಾರಂಭವಾಗುವ ಸಮಯದಲ್ಲಿ ಬಿ.ಜಿ.ಎಸ್. ಸರ್ಕಲ್ ಕಡೆಗೆ ಬರುವ ವಾಹನಗಳು ಎಸ್.ಎಸ್. ಸರ್ಕಲ್‌ನಿಂದ ಕೋತಿತೋಪು ಮಾರ್ಗವಾಗಿ ಕೆ.ಇ.ಬಿ. ಸರ್ಕಲ್-ಹೊರಪೇಟೆ-ಗುಂಚಿ ಸರ್ಕಲ್–ಚರ್ಚ್ ಸರ್ಕಲ್ ಮೂಲಕ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಬರುವುದು. ದಸರಾ ಮೆರವಣಿಗೆಯ ಮುಂಭಾಗವು ಕೋಡಿ ಸರ್ಕಲ್‌ಗೆ ಬಂದಾಗ ಜಿ.ಎಸ್. ಸರ್ಕಲ್ ಕಡೆಗೆ ಬರುವ ವಾಹನಗಳು ಬಿ.ಹೆಚ್. ರಸ್ತೆ ಮಾರ್ಗವಾಗಿ ಭದ್ರಮ್ಮ ಸರ್ಕಲ್, ಬಿ.ಜಿ.ಎಸ್. ಸರ್ಕಲ್ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಬರುವುದು.

ಬೆಂಗಳೂರು ಕಡೆಯಿಂದ ತುಮಕೂರು ನಗರಕ್ಕೆ ಬರುವ ವಾಹನಗಳು : ದಸರಾ ಮೆರವಣಿಗೆಯು ಬೆಸ್ಕಾಂ ಕಚೇರಿ ಮುಂದಕ್ಕೆ ಬಂದಾಗ ಎನ್.ಹೆಚ್-48 ರಸ್ತೆಯಿಂದ ಸತ್ಯಮಂಗಲ ಸರ್ವಿಸ್ ರಸ್ತೆಗೆ ಬಂದು ಶಿರಾಗೇಟ್-ಗಾರ್ಡನ್ ರಸ್ತೆ-ದಿಬ್ಬೂರು ರಸ್ತೆ ಜಂಕ್ಷನ್-ಗುಬ್ಬಿ ರಿಂಗ್ ರಸ್ತೆ ಜಂಕ್ಷನ್-ಗುಬ್ಬಿಗೇಟ್-ಲಕ್ಕಪ್ಪ ಸರ್ಕಲ್ ಮೂಲಕ ಬರುವುದು. ನಂತರದಲ್ಲಿ ಪೂರ್ಣ ಮೆರವಣಿಗೆಯು ಎಸ್.ಎಸ್. ಸರ್ಕಲ್‌ನಿಂದ ಭದ್ರಮ್ಮ ಸರ್ಕಲ್ ಕಡೆಗೆ ಹೋದ ನಂತರ ಎಲ್ಲಾ ವಾಹನಗಳು ಎಸ್.ಎಸ್. ಸರ್ಕಲ್-ಕೋತಿತೋಪು ರಸ್ತೆ-ಕೋಡಿ ಸರ್ಕಲ್ ಅಶೋಕ ರಸ್ತೆಗೆ ಬರುವುದು.

ಕುಣಿಗಲ್ ಕಡೆಯಿಂದ ತುಮಕೂರು ನಗರಕ್ಕೆ ಬರುವ ವಾಹನಗಳು :ದಸರಾ ಮೆರವಣಿಗೆಯು ಬಿ.ಜಿ.ಎಸ್. ಸರ್ಕಲ್‌ನಿಂದ ಪ್ರಾರಂಭವಾಗಿ ಪ್ರಶಾಂತ ಟಾಕೀಸ್ ಬಿಟ್ಟು ಹೋಗುವವರೆವಿಗೂ ಕುಣಿಗಲ್ ಸರ್ಕಲ್‌ನಿಂದ ಗುಬ್ಬಿ ರಿಂಗ್ ರಸ್ತೆ ಜಂಕ್ಷನ್, ಗುಬ್ಬಿಗೇಟ್-ಲಕ್ಕಪ್ಪ ಸರ್ಕಲ್-ಜೆ.ಸಿ ರಸ್ತೆ-ಹೆಲ್ತ್ಕ್ಯಾಂಟೀನ್ ರಸ್ತೆ ಮೂಲಕ ಹಳೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಬರುವುದು.

ಗುಬ್ಬಿ ಗೇಟ್ ಕಡೆಯಿಂದ ತುಮಕೂರು ನಗರಕ್ಕೆ ಬರುವ ವಾಹನಗಳು : ದಸರಾ ಮೆರವಣಿಗೆಯು ಬಿ.ಜಿ.ಎಸ್. ಸರ್ಕಲ್‌ನಿಂದ ಪ್ರಾರಂಭವಾಗಿ ಪ್ರಶಾಂತ ಟಾಕೀಸ್ ಬಿಟ್ಟು ಹೋಗುವವರೆವಿಗೂ ಗುಬ್ಬಿಗೇಟ್-ಲಕ್ಕಪ್ಪ ಸರ್ಕಲ್-ಜೆ.ಸಿ ರಸ್ತೆ-ಹೆಲ್ತ್ಕ್ಯಾಂಟೀನ್ ರಸ್ತೆ ಮೂಲಕ ಹಳೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಬರುವುದು. ಶಿರಾ ಕಡೆಯಿಂದ ತುಮಕೂರು ನಗರಕ್ಕೆ ಬರುವ ವಾಹನಗಳು :ದಸರಾ ಮೆರವಣಿಗೆಯು ಅಶೋಕ ರಸ್ತೆಗೆ ಬಂದಾಗ ಶಿರಾ ಕಡೆಯಿಂದ ಬರುವ ವಾಹನಗಳು ಶಿರಾಗೇಟ್-ಗಾರ್ಡನ್ ರಸ್ತೆ-ದಿಬ್ಬೂರುರಸ್ತೆ ಜಂಕ್ಷನ್-ಗುಬ್ಬಿರಿಂಗ್‌ರಸ್ತೆ ಜಂಕ್ಷನ್-ಗುಬ್ಬಿಗೇಟ್-ಲಕ್ಕಪ್ಪ ಸರ್ಕಲ್ ಮೂಲಕ ಬರುವುದು. ಪೂರ್ಣ ಮೆರವಣಿಗೆಯು ಕೋಡಿ ಸರ್ಕಲ್‌ನಿಂದ ಕೋತಿತೋಪು ರಸ್ತೆಗೆ ಸಾಗಿದ ನಂತರ ಎಲ್ಲಾ ವಾಹನಗಳು ಕೋಡಿ ಸರ್ಕಲ್ – ಅಶೋಕ ರಸ್ತೆಗೆ ಬರುವುದು.

ದಸರಾ ಮೆರವಣಿಗೆ ನಿಮಿತ್ತ ಅಕ್ಟೋಬರ್ 12ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಿ.ಜಿ.ಎಸ್ ಸರ್ಕಲ್- ಚರ್ಚ್ ಸರ್ಕಲ್- ಕೋಡಿ ಸರ್ಕಲ್-ಅಮಾನಿಕೆರೆ ರಸ್ತೆ-ಕೋತಿತೋಪು ರಸ್ತೆ-ಎಸ್.ಎಸ್ ಸರ್ಕಲ್-ಭದ್ರಮ್ಮ ಸರ್ಕಲ್ -ಬಿ.ಜಿ.ಎಸ್ ಸರ್ಕಲ್-ಲಕ್ಕಪ್ಪ ಸರ್ಕಲ್-ಕುಣಿಗಲ್ ರಸ್ತೆಗಳಲ್ಲಿ ಯಾವುದೇ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಿ ಅವರು ಆದೇಶಿಸಿದ್ದಾರೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ವಾಹನ ಸವಾರರಿಗೆ ಸೂಚಿಸಲಾಗಿದೆ, ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ದ ಕಾನೂನು ರೀತ್ಯಾ ಅಗತ್ಯ ಕ್ರಮ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...