ರಾಯಚೂರು | ಮಸ್ಕಿ ತಾಲೂಕು ಶೈಕ್ಷಣಿಕ ಅಭಿವೃದ್ಧಿಗೆ ಡಿವಿಪಿ ಒತ್ತಾಯ

Date:

  • ಗ್ರಾಮೀಣ ಭಾಗದಿಂದ ಪಟ್ಟಣದ ಶಾಲಾ -ಕಾಲೇಜಿಗೆ ಆಗಮಿಸುವ ವಿದಾರ್ಥಿಗಳಿಗೆ ಮೂಲಭೂತ ಸೌಕರ್ಯ ಕೊರತೆ
  • ಮಸ್ಕಿ ತಾಲೂಕು ಘೋಷಣೆಯಾಗಿ 5-6 ವರ್ಷಗಳು ಕಳೆದರೂ ಶೈಕ್ಷಣಿಕವಾಗಿ ಅಭಿವೃದ್ಧಿಯಲ್ಲಿ ಹಿನ್ನಡೆ

ಮಸ್ಕಿ ತಾಲೂಕು ಘೋಷಣೆಯಾಗಿ 5-6 ವರ್ಷಗಳು ಕಳೆದರೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದದೆ ಇರುವುದು ವಿಪರ್ಯಾಸ, ತಾಲೂಕಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವಿದಾರ್ಥಿಗಳು ಅಸಮಧಾನ ವ್ಯಕ್ತಪಡಿಸಿದರು.

ದಲಿತ ವಿದ್ಯಾರ್ಥಿ ಪರಿಷತ್‌ ನೇತ್ರತ್ವದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲ್ಲೂಕು ದಂಡಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಶೈಕ್ಷಣಿಕ ಕೊರತೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದ ಬೇಸತ್ತು ಶಿಕ್ಷಣಕ್ಕಾಗಿ ಪಕ್ಕದ ತಾಲೂಕು ಮತ್ತು ಜಿಲ್ಲೆಗಳ ಮೊರೆ ಹೋಗುತ್ತಿದ್ದಾರೆ. ತಾಲೂಕಿನಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿನ ಸಮಸ್ಯೆಗಳು ಕೂಡ ಶಿಕ್ಷಣದಲ್ಲಿ ಹಿಂದುಳಿಯಲು ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ವಿಧ್ಯಾರ್ಥಿ ಪರಿಷತ್ ಜಿಲ್ಲಾ ಮುಖಂಡ ಮೌನೇಶ್ ಜಾಲವಾಡಗಿ ಮಾತನಾಡಿ, ” ಗ್ರಾಮೀಣ ಭಾಗದಿಂದ ಪಟ್ಟಣದ ಶಾಲಾ -ಕಾಲೇಜಿಗೆ ಆಗಮಿಸುವ ವಿದಾರ್ಥಿಗಳಿಗೆ ಸುಸಜ್ಜಿತ ವಾದ ಗ್ರಂಥಾಲಯ,ಇಂದಿರಾ ಕ್ಯಾಂಟೀನ್ ಹಾಗೂ ಇನ್ನಿತರ ಸರಕಾರಿ ಸೌಲಭ್ಯಗಳು ಒದಗಿಸಬೇಕು” ಎಂದು ಒತ್ತಾಯಿಸಿದರು .

ಬೇಡಿಕೆಗಳು:

1. ನೂತನ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಾಣ ಮಾಡಬೇಕು.

2. ಎಲ್ಲಾ ಇಲಾಖೆಯ ಸರ್ಕಾರಿ ವಸತಿ ನಿಲಯಗಳ ಕಟ್ಟಡ ನಿರ್ಮಾಣ ಮಾಡಬೇಕು,

3. ದೇವನಾಂಪ್ರಿಯ ಪದವಿ ಕಾಲೇಜಿಗೆ ಪ್ರತ್ಯೇಕ ಬಸ್‌ ವ್ಯವಸ್ಥೆ ಕಲ್ಪಿಸಬೇಕು.

4. ಪರಿಶಿಷ್ಟ ವರ್ಗಗಳ ಮೆಟೀಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಬಸ್‌ ವ್ಯವಸ್ಥೆ ಮತ್ತು ಮೂಲಭೂತ ಸೌಕರ್ಯ ಒದಗಿಸಬೇಕು.

5. ಎಸ್.ಸಿ., ಎಸ್.ಟಿ ವಸತಿ ನಿಲಯಗಳನ್ನು ನಿರ್ಮಾಣ ಮಾಡಬೇಕು,

6. ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿಗೆ ಕಂಪೌಂಡ್ ಹಾಗೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು.

ಈ ಸುದ್ದಿ ಓದಿದ್ದೀರಾ? ಈ ದಿನ ವಿಶೇಷ | ಪಠ್ಯಪುಸ್ತಕ ಪರಿಷ್ಕರಣೆಯ ನಡೆ ಗೊಂದಲದ ಗೂಡು- ತಜ್ಞರ ಆಕ್ರೋಶ

7. ತಾಲ್ಲೂಕಿನ ಹಿರೆ ಕಡಬುರು, ಎಲೇಕುಡ್ಲಿಗಿ,ತಲೇಖಾನ್, ಹೂವಿನ ಭಾವಿ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸಬೆಕು.

ಈ ಸಂದರ್ಭದಲ್ಲಿ ಪ್ರಮುಖರಾದ ಹುಸೇನಪ್ಪ , ಎಚ್ ಎಂ ಬಡಿಗೇರ್ ಸೇರಿದಂತೆ ವಿವಿಧ ಶಾಲಾ ಕಾಲೇಜು ವಿಧ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...