ಮಂಗಳೂರು | ಮುಡಿಪು ಜಿಲ್ಲಾ ಮುಖ್ಯ ರಸ್ತೆಯನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್ಐ ಪ್ರತಿಭಟನೆ

Date:

ಮುಡಿಪು ಮತ್ತು ಅಸೈಗೋಳಿ ಮಧ್ಯೆ ಹಾದು ಹೋಗುವ ಜಿಲ್ಲಾ ಮುಖ್ಯ ರಸ್ತೆಯನ್ನು ಸಮರ್ಪಕವಾಗಿ ದುರಸ್ತಿಗೊಳಿಸಲು ಆಗ್ರಹಿಸಿ ಡಿವೈಎಫ್ಐ ಮುಡಿಪು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡರಾದ ರಝಾಕ್ ಮೊಂಟೆಪದವು, ಮುಡಿಪು ಮುಖ್ಯ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ಈ ಬಗ್ಗೆ ಡಿವೈಎಫ್ಐ ಭಿತ್ತಿ ಪತ್ರ ಅಂಟಿಸಿ ಎಚ್ಚರಿಕೆ ನೀಡಿತ್ತು. ಪರಿಣಾಮವಾಗಿ ಎಚ್ಚೆತ್ತ ಸಂಬಂಧಪಟ್ಟ ಇಲಾಖೆಯು ಕೇವಲ ಕಾಂಕ್ರಿಟ್ ಮಿಶ್ರಣ ಹಾಕಿ ಅಸಮರ್ಪಕವಾಗಿ ದುರಸ್ತಿಗೊಳಿಸಿದೆ. ಈ ಅಸಮರ್ಪಕ ದುರಸ್ತಿ ಕಾರ್ಯದಿಂದಾಗಿ ವಾಹನ ಅಪಘಾತಗಳು ಹೆಚ್ಚಾಗಿವೆ ಎಂದು ದೂರಿದರು.

ಮುಡಿಪು 1

ಇಲ್ಲಿನ ಶಾಸಕರಾದ ಸ್ಪೀಕರ್ ಯು.ಟಿ ಖಾದರ್ ಅವರು ಟೋಲ್ ಮುಕ್ತ ರಸ್ತೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಇದು ಜನರ ಪ್ರಾಣ ತೆಗೆಯುವ ರಸ್ತೆಯಾಗಿ ಮಾರ್ಪಟ್ಟಿದೆ ಎಂಬುದು ಅವರಿಗೆ ಕೂಡಲೇ ರಸ್ತೆಯನ್ನು ಸಮರ್ಪಕವಾಗಿ ದುರಸ್ತಿಗೊಳಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ರಸ್ತೆ ತಡೆ ನಡೆಸಿ ಧರಣಿ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಂಗಳೂರು | ತಿರುವು ಪಡೆದುಕೊಂಡ ತಾರಾನಾಥ ಕೊಲೆ ಪ್ರಕರಣ: ಅಕ್ಕನಿಂದಲೇ ಹತ್ಯೆ!

ಡಿವೈಎಫ್ಐ ಉಳ್ಳಾಲ ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ ಮಾತನಾಡಿದರು. ಪ್ರತಿಭಟನೆಯಲ್ಲಿ ರಫೀಕ್ ಹರೇಕಳ, ಶಾಫಿ ಮುಡಿಪು, ಅಲಿ ಕಾಯಾರ್, ರಾಮಚಂದ್ರ ಫಜೀರ್, ಫಾರೂಕ್ ಕೊಣಾಜೆ, ಅಬೂಬಕ್ಕರ್ ಜಲ್ಲಿ, ಇಕ್ಬಾಲ್ ಕುರ್ನಾಡು, ನೌಶಾದ್ ಕುರ್ನಾಡು, ಖಲೀಲ್ ನಂದರಪಡ್ಪು, ಇಕ್ಬಾಲ್ ಹರೇಕಳ, ಹೈದರ್ ಆಲಡ್ಕ, ಬಶೀರ್ ಲಚ್ಚಿಲ್, ರಫೀಕ್ ಕಡ್ವಾಯಿ, ಇಬ್ರಾಹಿಂ ಮದಕ, ಭರತ್ ಕುತ್ತಾರ್, ಇಬ್ರಾಹಿಂ ಹೂ ಹಾಕುವ ಕಲ್ಲು ಮುಂತಾದವರು ಉಪಸ್ಥಿತರಿದ್ದರು. ರಝಾಕ್ ಮುಡಿಪು ಸ್ವಾಗತಿಸಿ, ಅಲ್ತಾಫ್ ಮುಡಿಪು ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...