ಶಿಗ್ಗಾವಿ ಉಪಚುನಾವಣೆ | ಬಿಜೆಪಿಯವರು ಎಷ್ಟೇ ತಿಪ್ಪರಲಾಗ ಹಾಕಿದರೂ ಪ್ರಯೋಜನವಾಗದು: ಈಶ್ವರ ಖಂಡ್ರೆ

Date:

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ನಡೆದ ಆದಿಜಾಂಬವ ಜನಾಂಗದ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಮಾದಿಗ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿ, ಬೊಮ್ಮಾಯಿ ವಿರುದ್ಧ ಮತ ಚಲಾಯಿಸಿ‌ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ನಿರ್ಧಾರ ಕೈಗೊಂಡರು.

ಸಮುದಾಯದ ಮುಖಂಡ ಬಸವವಂತಪ್ಪ ಮಾತನಾಡಿ, ಈಗಾಗಲೆ ಒಳಮೀಸಲಾತಿ ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಒಳಮೀಸಲಾತಿ ಜಾರಿ ಮಾಡುವ ಶಕ್ತಿ ಇರುವುದು ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ. ಈ ವಿಚಾರದಲ್ಲಿ ಬಿಜೆಪಿ ನಮಗೆ ಸುಳ್ಳು ಹೇಳುತ್ತದೆ. ಆದ್ದರಿಂದ ಶಿಗ್ಗಾವಿ ಚುನಾವಣೆಯಲ್ಲಿ ಮಾದಿಗರು ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಎಲ್ಲರಿಗೂ ಸಮಾನವಾಗಿ ನೀಡಿದೆ. ಒಳಮೀಸಲಾತಿ ಜಾರಿಯಾದರೆ ಸುಮಾರು ಒಂದು ಸಾವಿರ ಹುದ್ದೆಗಳು ಮಾದಿಗರ ಪಾಲಾಗಲಿವೆ.

ಬಿಜೆಪಿಯು ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಕುತಂತ್ರ ಮಾಡುತ್ತಿದೆ. ನಂತರ ದಲಿತರನ್ನು‌ ಮುಂದಿಟ್ಟುಕೊಳ್ಳುತ್ತಾರೆ. ಬಸವಣ್ಣ ಅಪ್ಪನ ನಮ್ಮ ಮಾದಾರ ಚನ್ನಯ್ಯ ಎಂದಿದ್ದಾರೆ. ಅಂತಹ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಾಂಗ್ರೆಸ್ ಗೆದ್ದರೆ ಮಾದಿಗರಿಗೆ ಮೊದಲ ಗೌರವ ಸಿಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241111 211516

ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಮಾದಿಗರು ಈ ದೇಶದ ಮೂಲನಿವಾಸಿಗಳು. ರಾಜ್ಯ‌ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಾದಿಗರ ಕೊಡುಗೆ ಅಪಾರ. ಸರ್ವರಿಗೂ ಸಮಪಾಲು ಎಂಬ ತತ್ವಕ್ಕೆ ಕಾಂಗ್ರೆಸ್ ಬದ್ದವಾಗಿದೆ. ಒಳಮೀಸಲಾತಿ ಜಾರಿಯಾದರೆ ಬುದ್ಧ, ಬಸವ, ಅಂಬೇಡ್ಕರ್ ಕನಸು ನನಸಾದಂತೆ ಆಗುತ್ತದೆ. ಸಿದ್ದರಾಮಯ್ಯ ಸಾಮಾಜಿಕ‌ ನ್ಯಾಯದ ಹರಿಕಾರರಾಗಿದ್ದು, ಒಳಮೀಸಲಾತಿ ಯಾವುದೇ ಪರಿಸ್ಥಿಯಲ್ಲೂ ಜಾರಿ ಆಗುತ್ತದೆ. ಬಿಜೆಪಿಯವರದ್ದು ಸುಳ್ಳೇ ಅವರ ಮನೆ ದೇವರಾಗಿದೆ. ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವನ್ನು ಮುಡಮೇಲು ಮಾಡಲು ಪ್ರಯತ್ನಿಸುತ್ತಿರುವ ಬಿಜೆಪಿಯವರು ಎಷ್ಟೇ ತಿಪ್ಪರಲಾಗ ಹಾಕಿದರೂ ಪ್ರಯೋಜನ ಆಗುವುದಿಲ್ಲ ಎಂದರು.

ಯತೀಂದ್ರ ಸಿದ್ಧರಾಮಯ್ಯ ಮಾತನಾಡಿ, ಶತಮಾನಗಳಿಂದಲೂ ದಲಿತರನ್ನು ತುಳಿಯುವ ಪ್ರಯತ್ನಗಳು ನಡೆದೇ ಇವೆ. ಇವತ್ತಿಗೂ ದಲಿತರು ಮುಖ್ಯವಾಹಿಗೆ ಬರುತ್ತಿಲ್ಲ. ಸಂಘಪರಿವಾರದ ಅಂಗಸಂಸ್ಥೆಯಾದ ಬಿಜೆಪಿಯು ಜಾತಿ ವ್ಯವಸ್ಥೆಯನ್ನೇ ಮುಂದುವರೆಸಬೇಕೆಂಬ ಉದ್ದೇಶದಿಂದ ಬಡವರನ್ನು ತುಳಿಯುವ ಪ್ರಯತ್ನದಲ್ಲೇ ಮುಳಿಗಿದೆ. ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಉತ್ತಮ‌ ಯೋಜನೆಗಳನ್ನು ಜಾರಿ ತಂದಿದೆ. ಕೇಂದ್ರ ಬಿಜೆಪಿ ಸರ್ಕಾರ ಯಾಕೆ ಬಡವರಿಗಾಗಿ, ದಲಿತರಿಗಾಗಿ ಕಾನೂನು ತಂದಿಲ್ಲ? ಎಂದು ಪ್ರಶ್ನಿಸಿದರು.

ಕ್ಯಾಬಿನೆಟ್ ಸಚಿವ ಆರ್ ಬಿ ತಿಮ್ಮಾಪುರ ಮಾತನಾಡಿ, ಮಾದಿಗರೆಲ್ಲ ಒಂದಾಗಿ ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ ಅನ್ನು ಗೆಲ್ಲಿಸಲು ಕರೆ ನೀಡಿದರು.

ಈ ವರದಿ ಓದಿದ್ದೀರಾ? ಶಿಗ್ಗಾವಿ ಉಪಚುನಾವಣೆ | ಬಂಜಾರಾ ಸಮುದಾಯಕ್ಕೆ ಬೊಮ್ಮಾಯಿ ಕೊಡುಗೆ ಶೂನ್ಯ: ರುದ್ರಪ್ಪ ಲಮಾಣಿ

ಕಾರ್ಯಕ್ರಮದಲ್ಲಿ ರಹಿಮಖಾನ್, ನಾಗರಾಜ ಯಾದವ್, ಅಜ್ಜಂಪೀರ ಖಾದ್ರಿ, ಅಹಿಂದ ಸಂಘಟಕರು, ಆದಿಜಾಂಬವ, ಮಾದಿಗ ಸಮುದಾಯದ ಮುಖಂಡರು, ಯುವಕರು, ಮಹಿಳೆಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...