ಬೀದರ್‌ | ಶೋಷಿತ ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಅಗತ್ಯ : ಸಂಸದ ಸಾಗರ್‌ ಖಂಡ್ರೆ

Date:

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಅಂದಿನ ಶ್ರಮದ ಫಲವಾಗಿ ಇಂದಿಗೂ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಾಗಿದೆ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.

ಬೀದರ್ ನಗರದ‌ ಡಾ.ಬಿ.ಆರ್.ಅಂಬೇಡ್ಕ‌ರ್ ವೃತ್ತದಲ್ಲಿ ಶುಕ್ರವಾರ ದಲಿತ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣದ ಪ್ರಯುಕ್ತ ಹಮ್ಮಿಕೊಂಡ ಶೋಷಿತ ಸಮುದಾಯಗಳ ಐಕ್ಯತಾ ದಿನ ಹಾಗೂ ಸಂಗೀತ ನುಡಿನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಾನು ಚಿಕ್ಕ ವಯಸ್ಸಿನಲ್ಲಿ ಸಂಸದನಾಗಲು ಅರ್ಹತೆ ಗಿಟ್ಟಿಸಿಕೊಂಡಿದ್ದು ಡಾ.ಅಂಬೇಡ್ಕರ್ ಅವರ ಅತ್ಯುತ್ತಮ ಸಂವಿಧಾನದ ಆಶಯಗಳಿಂದಾಗಿ, ಶಿಕ್ಷಣ, ಸಂಘಟನೆ ಹಾಗೂ ಹೋರಾಟಕ್ಕೆ ಮಹತ್ವ ನೀಡಿದ್ದ ಅವರ ಆಶಯದಂತೆ ಶಿಕ್ಷಣಕ್ಕೆ ಇಂದು ಮಹತ್ವ ನೀಡಿದ್ದರೆ ಶೋಷಿತ ಸಮುದಾಯ ಸಮಗ್ರ ಅಭಿವೃದ್ಧಿಯಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲರಿಗೂ ಗೌರವ ಕೊಡುವಂಥ ವ್ಯಕ್ತಿಯಾಗೋಣ. ಸಮಾನತೆಯಿಂದ ಸರ್ವರೊಂದಿಗೆ ನಡೆ-ನುಡಿ ಹೊಂದಿರಬೇಕು. ಸಮಾಜದಲ್ಲಿ ಉತ್ತಮವಾಗಿ ಕೆಲಸ ಮಾಡಬೇಕು ಆಗ ಮಾತ್ರ ನಮಗೆ ಸಮಾಜದ ಗೌರವ ಸಿಗುತ್ತದೆ. ಅನ್ಯಾಯಗಳ ವಿರುದ್ಧ ಹೋರಾಟ ಮಾಡಿ ನ್ಯಾಯದ ಪರವಾಗಿ ನಿಲ್ಲಬೇಕು ಎಂದು ಸಂಸದ ಖಂಡ್ರೆ ಹೇಳಿದರು.

WhatsApp Image 2024 12 07 at 5.24.26 PM

ಕಾರ್ಯಕ್ರಮದಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್ ಮಾತನಾಡಿ, ʼಡಾ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾವಿಂದು ಈ ಮಟ್ಟಕ್ಕೆ ಬೆಳೆದಿದ್ದೇವೆ. ಅವರಿಗೆ ದೇಶದ ಪ್ರತಿಯೊಬ್ಬರೂ ಸದಾ ಆಭಾರಿ ಆಗಿರಬೇಕು ಎಂದರು. ಶ್ರೀಮಂತರನ್ನು ಪ್ರಶ್ನಿಸುವ ವ್ಯವಸ್ಥೆ ಕಡಿಮೆಯಾಗಿದೆ. ಬಡವರ ಮೇಲೆ ಹದ್ದಿನ ಕಣ್ಣು ಇಡಲಾಗುತ್ತಿದೆ. ಕೆಲವು ಅಧಿಕಾರಿಗಳು ಮತ್ತು ರಾಜಕಾರಣಿಗಳಿಂದ ದೇಶದಲ್ಲಿ ಸಂಪೂರ್ಣವಾಗಿ ಸಂವಿಧಾನ ಜಾರಿಯಾಗದಂತೆ ತಡೆಯುತ್ತಿದ್ದಾರೆ. ದೇಶವನ್ನು ಗುಲಾಮಗಿರಿ ಪದ್ದತಿಗೆ ದೂಡುವ ಹುನ್ನಾರ ಹೊಂದಿದ್ದವರಿಂದ ಇಂತಹ ಕೆಲಸ ನಡೆಯುತ್ತಿದೆʼ ಎಂದು ಕಳವಳ ವ್ಯಕ್ತಪಡಿಸಿದರು.

ಮುಖಂಡ ಅನೀಲಕುಮಾರ ಬೆಲ್ದಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ʼಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅಗಲಿ 68 ವರ್ಷ ಗತಿಸಿದರೂ ನಾವು ದೀನ ದಲಿತರು ಒಂದಾಗಿಲ್ಲ ಎಂಬುದು ಬೇಸರದ ಸಂಗತಿ. ನಾವು ಈಗಲಾದರೂ ಒಂದಾಗಿ ಅವರ ಋಣ ತೀರಿಸಬೇಕೆಂದರು. ದಲಿತ ಸಂಘಟನೆಗಳು ಒಗ್ಗೂಡಿಸುವ ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದೆʼ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಜಿ.ಮೂಳೆ ಮಾತನಾಡಿ, ʼದೇಶದಲ್ಲಿ ನದಿ ಜೋಡಣೆಗಳು, ಗಡಿ ಜೋಡಣೆಗಳು, ಆರ್‌ಬಿಐ ಸ್ಥಾಪನೆ ಸೇರಿದಂತೆ ಅನೇಕ ಯೋಜನೆಗಳನ್ನು ದೇಶಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ್ದು ಎಲ್ಲರೂ ಸ್ಮರಿಸಬೇಕುʼ ಎಂದರು.

ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, ʼಬಾಬಾ ಸಾಹೇಬ್ ಅವರ ಲಂಡನ್ ಮನೆ, ದಿಲ್ಲಿ ಮನೆ ಹೀಗೆ ಪಂಚತೀರ್ಥಗಳ ಅಭಿವೃದ್ಧಿಗೆ ಪ್ರಧಾನಿ ಮೋದಿ ಮುಂದಾಗಿದ್ದಾರೆ. ಈ ಪಂಚ ತೀರ್ಥಗಳಿಗೆ ಪ್ರತಿಯೊಬ್ಬರೂ ಭೇಟಿ ನೀಡಬೇಕುʼ ಎಂದರು.

ಮಾಜಿ ಶಾಸಕ ಬಂಡೆಪ್ಪ ಖಾಶೆಂಪೂರ್ ಮಾತನಾಡಿ, ʼಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನದಂತೆ ಜಗತ್ತಿನಲ್ಲಿ ಎಲ್ಲಿಯೂ ಇಲ್ಲ. ಬಾಬಾಸಾಹೇಬರ ಕನಸುಗಳನ್ನು ನನಸಾಗಿಸಲು ಪ್ರತಿಯೊಬ್ಬ ಶೋಷಿತ ಸಮುದಾಯದ ವ್ಯಕ್ತಿ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು, ಒಗ್ಗಟ್ಟಾಗಿರಬೇಕುʼ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಗೀತ ನುಡಿ ನಮನಕ್ಕೆ ಸುಮಾರು 25ಕ್ಕೂ ಹೆಚ್ಚು ತಂಡಗಳು ಆಗಮಿಸಿದ್ದವು. ಡಾ. ಬಾಬಾ ಸಾಹೇಬ್ ಅವರ ಕುರಿತಾದ ಹಾಡುಗಳನ್ನು ಹಾಡುವ ಮೂಲಕ ಎಲ್ಲರಲ್ಲಿ ಜಾಗೃತಿ ಮೂಡಿಸುವದಲ್ಲದೆ ಗೌರವ ನಮನ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹಸಿದ ಹೊಟ್ಟೆ ತಣಿಸುವ ʼರಿಶೈನ್‌ʼ ಯುವಕರು

ಸಮಾರಂಭದಲ್ಲಿ ಭಂತೆ ಧಮ್ಮಪಾಲ್ ಮತ್ತು ಬಿಕ್ಕು ಸಂಘದವರ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು. ಮೀನುಗಾರಿಕೆ ನಿಗಮದ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಅಮೃತರಾವ್ ಚಿಮಕೋಡೆ, ನಗರಸಭೆ ಅಧ್ಯಕ್ಷ ಮಹ್ಮದ್‌ ಗೌಸೋದ್ದೀನ್‌ ಹಾಗೂ ಮುಖಂಡರಾದ ಡಾ. ರಾಜಶೇಖರ ಸೇಡಂಕರ್, ಬಸವರಾಜ ಮಾಳಗೆ, ಅಬ್ದುಲ್ ಮನಾನ್ ಸೇಠ್, ಇರ್ಷಾದ್ ಪೈಲ್ವಾನ್, ರಮೇಶ ಡಾಕುಳಗಿ, ಜಾನ್‌ವೆಸ್ಲಿ, ದಶರಥ ಚಲುವಾ, ಶ್ರೀಪತರಾವ್ ದೀನೆ, ಶಿವಕುಮಾರ ನೀಲಿಕಟ್ಟಿ, ಅಂಬಾದಾಸ್ ಗಾಯಕವಾಡ, ಸತೀಶ ಲಕ್ಕಿ, ಡಾ.ಕಾಶಿನಾಥ ಚಲುವಾ, ಅವಿನಾಶ ದೀನೆ, ಗೋವರ್ಧನ್ ರಾಠೋಡ್, ಸುಮಂತ ಕಟ್ಟಿಮನಿ, ರಮೇಶ ಕಟ್ಟಿತೂಗಾಂವ್, ಪತ್ರಕರ್ತ ಸದಾ ಜೋಶಿ, ಬಾಬು ಪಾಸ್ವಾನ್‌ ಸ್ವಾಗತಿಸಿದರು, ಪ್ರದೀಪ ನಾಟೇಕ‌ರ್ ನಿರೂಪಿಸಿದರು. ಸಂದೀಪ ಕಾಂಟೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...