ಶಿವಮೊಗ್ಗ | ಈದಿನ ಇಂಪ್ಯಾಕ್ಟ್; ಬಡ ಕುಟುಂಬದ ನೆರವಿಗೆ ಧಾವಿಸಿದ ಕರವೇ

Date:

ಈದಿನ ಡಾಟ್ ಕಾಮ್ “ಶಿವಮೊಗ್ಗ| ನೆರವಿನ ಹಸ್ತಕ್ಕಾಗಿ ಎದುರು ನೋಡುತ್ತಿದೆ ಬಡ ಕುಟುಂಬ” ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿಯೊಂದನ್ನು ಮಾಡಿತ್ತು. ಈ ಸುದ್ದಿಗೆ ಸ್ಪಂದಿಸಿದ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಆರೋಗ್ಯಾಧಿಕಾರಿಗಳು ಬಡ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.

ಶಿವಮೊಗ್ಗ ನಗರದ ಕರವೇ ಸ್ವಾಭಿಮಾನಿ ಬಣದ ಕಿರಣ್ ಅವರ ತಂಡ, ಸಹಾಯಕ್ಕೆ ಧಾವಿಸಿದ್ದು, ಒಂದು ತಿಂಗಳಿಗೆ ಸರಿಹೊಂದುವಷ್ಟು ಆಹಾರ, ದಿನಸಿ ಕಿಟ್ ಹಾಗೂ ಧನ ಸಹಾಯ ನೀಡಿ ಮಾನವೀಯತೆ ಮೆರದಿದೆ. ತಂಡದ ಉಪಾಧ್ಯಕ್ಷ ವಿಜಯ್ ಕುಮಾರ್ ಮೊಬೈಲ್ ಕ್ಯಾಂಟೀನ್ ವ್ಯವಸ್ಥೆಗೆ ಅನುಕೂಲವಾಗುವಂತೆ ತಾತ್ಕಾಲಿಕವಾಗಿ ಆಟೋ ನೀಡಿದ್ದಾರೆ. ಜೊತಗೆ ಮುಂದಿನ ದಿನಗಳಲ್ಲಿ ಇವರಿಗೆ ಅವಶ್ಯಕ ನೆರವು ಬೇಕಾದಲ್ಲಿ ತಿಳಿಸಲು ಹೇಳಿದರು.

1001176090

ಶಿವಮೊಗ್ಗ ನಗರದ ಆರೋಗ್ಯಾಧಿಕಾರಿ ಕೃಷ್ಣಮೂರ್ತಿ ಸಹ ಈದಿನ ಡಾಟ್‌ ಕಾಮ್ ಸುದ್ದಿಗೆ ಸ್ಪಂದಿಸಿ, ಮನೆಗೆ ತೆರಳಿ ತಮ್ಮ ಕೈಯಲ್ಲಾಗುವ ಎಲ್ಲಾ ರೀತಿಯ ಸಹಾಯವನ್ನು ನೀಡಲಿದ್ದೇವೆ. ಸರ್ಕಾರದಿಂದ ಬರುವ ಯೋಜನೆಯ ಸಹಾಯ ಮಾಡಿಸಿಕೊಡುತ್ತೇವೆ ಎಂದು ತಿಳಿಸಿದರು. ಶಿವಮೊಗ್ಗ ಈದಿನ ಮಾಧ್ಯಮ ಪ್ರತಿನಿಧಿ ರಾಘವೇಂದ್ರ ಅವರಿಗೆ ಉತ್ತಮ ಸಮಾಜಮುಖಿ ಸುದ್ದಿ ಮಾಡಿದ್ದೀರಿ ಎಂದು ಮೆಚ್ಚುಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಧ್ಯಮ ಪ್ರತಿನಿಧಿ ರಾಘವೇಂದ್ರ MILAAP ಎಂಬ App ಮೂಲಕ ಅನಾರೋಗ್ಯಕ್ಕೆ ಒಳಗಾಗಿರುವ ಈ ಕುಟುಂಬಕ್ಕೆ ಸಹಾಯ ಹಸ್ತ ಕೋರಿದ್ದಾರೆ. MILAAP ಎಂಬ ತಂತ್ರಾಂಶವು ದೇಶದ ಯಾವುದೇ ಬಡ ಕುಟುಂಬಕ್ಕೆ ದಾನಿಗಳ ಮುಖೇನ ಹಣ ಸಂಗ್ರಹಣೆ ಮಾಡಿ ಸಹಾಯ ಮಾಡುತ್ತದೆ.

ಬುದ್ದಿಮಾಂದ್ಯ ಮಗ 1024x576 1

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ನೆರವಿನ ಹಸ್ತಕ್ಕಾಗಿ ಎದುರು ನೋಡುತ್ತಿದೆ ಬಡ ಕುಟುಂಬ

ಬಡ ಕುಟುಂಬಕ್ಕೆ ಮತ್ತಷ್ಟು ಸಹಾಯದ ಅವಶ್ಯಕತೆ ಇದೆ. ಮಗಳ ವಿದ್ಯಾಭ್ಯಾಸ ಹಾಗೂ ಬುದ್ದಿಮಾಂದ್ಯ ಮಗನ ಜೀವನಕ್ಕೆ ದಾರಿ ರೂಪಿಸಿಕೊಡಬೇಕಿದೆ. ಮುಂದಿನ ದಿನಗಳಲ್ಲಿ ದಾನಿಗಳು ಹಾಗೂ ಶಕ್ತರು ಬಡ ಕುಟುಂಬಕ್ಕೆ ನೆರವು ನೀಡುವ ಮೂಲಕ ಕುಟುಂಬವನ್ನು ಸ್ವಾವಲಂಬಿಯಾಗಿ ಮಾಡುವ ನಿಟ್ಟಿನಲ್ಲಿ ಒಂದಾಗಿ ಸದೃಢ ಸಮಾಜ ಕಟ್ಟುವ ಕೆಲಸ ಆಗಲಿ ಎಂಬುದು ನಮ್ಮ ಈದಿನ ಡಾಟ್ ಕಾಮ್ ಆಶಯವಾಗಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...