ಈ ದಿನ ವರದಿ ಫಲಶೃತಿ | ವಡ್ಡರ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಜೇವರ್ಗಿ ತಹಶೀಲ್ದಾರ್‌

Date:

ಅಡುಗೆ ಮನೆಯಲ್ಲಿ ಉಪಯೋಗಿಸುವ ಕಲ್ಲಿನ ಉಪಕರಣಗಳಾದ ಬೀಸುವ ಕಲ್ಲು, ರುಬ್ಬುಗುಂಡು, ಖಲಗಲ್(ಅಸಗಲ್ಲ) ಸೇರಿದಂತೆ ಹಲವು ಕಲ್ಲಿನ ಉಪಕರಣಗಳು ಮಾರಾಟವಾಗದೆ ಸಂಕಷ್ಟದಲ್ಲಿದ್ದ ವಡ್ಡರ ಸಮುದಾಯದ ಬಳಿಗೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಹಶೀಲ್ದಾರ್‌ ಮತ್ತು ಸಾಮಾಜ ಕಲ್ಯಾಣ ಇಲಾಖೆಯ ಮುಖ್ಯಾಧಿಕಾರಿಗಳು ಭೇಟಿ ನೀಡಿದ್ದು, ವಡ್ಡರ ಸಮುದಾಯದ ಸಂಕಷ್ಷ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.

ಕಲ್ಲು ಒಡೆದು, ಅದಕ್ಕೆ ಸುಂದರ ಆಕೃತಿ ಕೊಟ್ಟು ಅಡುಗೆ ಮನೆಯಲ್ಲಿ ಉಪಯೋಗಿಸುವ ಉಪಕರಣ ತಯಾರಕರ ಕುರಿತು ಈ ದಿನ.ಕಾಮ್ ಕಳೆದ ಆಗಸ್ಟ್ 17ರಂದು ಜೇವರ್ಗಿ | ಮಾರಾಟವಾಗದ ಅಡುಗೆ ಮನೆಯಲ್ಲಿ ಉಪಯೋಗಿಸುವ ಕಲ್ಲಿನ ಉಪಕರಣಗಳು; ಸಂಕಷ್ಟದಲ್ಲಿ ವ್ಯಾಪಾರಿಗಳು ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಅಲ್ಲದೇ, ಆ.20ರಂದು ವಿಡಿಯೋ ವರದಿ ಕೂಡ ಪ್ರಕಟಿಸಲಾಗಿತ್ತು.

ಈ ವರದಿಯನ್ನು ಗಮನಿಸಿದ ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ್ ಅವರು ವಡ್ಡರ ಸಮುದಾಯದ ಕುಟುಂಬಗಳು ವಾಸಿಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ್ದು, ಸರ್ಕಾರದಿಂದ ಸೂಕ್ತ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ವಡ್ಡರ ಸಮುದಾಯಕ್ಕೆ ತಹಶೀಲ್ದಾರ್‌ ಸ್ಪಂದನೆ

“ಸದ್ಯಕ್ಕೆ ಈ ವ್ಯಾಪ್ತಿಯಲ್ಲಿ ಎಲ್ಲಿಯೂ ಸರ್ಕಾರಿ ಜಾಗವಿಲ್ಲ. ಅಲ್ಲದೇ, ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ನಿವೇಶನ ಒದಗಿಸುವ ಯಾವುದೇ ಯೋಜನೆ ಇಲ್ಲದಿರುವುದರಿಂದ ಮುಂಬರುವ ದಿನಗಳಲ್ಲಿ ನಿವೇಶನ ವಂಚಿತರ ಪಟ್ಟಿಯಲ್ಲಿ ವಡ್ಡರ ಸಮುದಾಯದ ಐದು ಕುಟುಂಬಗಳ ಹೆಸರನ್ನು ಸೇರಿಸುತ್ತೇವೆ. ನಂತರ ಈ ಯೋಜನೆಯಲ್ಲಿ ನಿವೇಶನ ಒದಗಿಸಲಾಗುವುದು” ಎಂದು ಭರವಸೆ ನೀಡಿದರು.

ವಸತಿ ವಂಚಿತ ವಡ್ಡರ ಸಮುದಾಯಗಳ ಕುಟುಂಬಗಳ ಬಗ್ಗೆ eedina ಯೂಟ್ಯೂಬ್‌ನಲ್ಲಿ ಪ್ರಸಾರವಾಗಿದ್ದ ವರದಿ

ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವಂತೆ ಹೇಳಿದ್ದು, “ನಾವು ಮತ್ತೊಮ್ಮೆ ಈ ಸಮುದಾಯಕ್ಕೆ ಭೇಟಿ ನೀಡುವಷ್ಟರಲ್ಲಿ ನಿಮ್ಮ ಮಕ್ಕಳನ್ನೆಲ್ಲ ಶಾಲೆಗೆ ದಾಖಲಿಸಿರಬೇಕು” ಎಂದು ಸೂಚನೆ ನೀಡಿದ್ದಾರೆ.

ಅಧಿಕಾರಿಗಳ ಭೇಟಿ

ಈ ಸುದ್ದಿ ಓದಿದ್ದೀರಾ? ಮಂಡ್ಯ | ಮೈಷುಗರ್ ಸಕ್ಕರೆ ಕಾರ್ಖಾನೆಯ ₹181.84 ಕೋಟಿ ಸಾಲ ತೀರುವಳಿ: ಸಿ ಡಿ ಗಂಗಾಧರ್

ವಡ್ಡರ ಸಮುದಾಯದ ನಾಗುಬಾಯಿ ಅವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಅಧಿಕಾರಿಗಳು ಭೇಟಿ ನೀಡಿ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ವರದಿಯ ಮೂಲಕ ನಮ್ಮ ಸಮುದಾಯದ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದ ಈ ದಿನ.ಕಾಮ್‌ಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದರು.

ತಹಶೀಲ್ದಾರ್ ಭೇಟಿಯ ವೇಳೆ ಸಮಾಜ ಕಲ್ಯಾಣ ಇಲಾಖೆಯ ಮುಖ್ಯಾಧಿಕಾರಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೂಡ ಉಪಸ್ಥಿತರಿದ್ದರು.

WhatsApp Image 2024 08 26 at 7.56.13 PM edited
WhatsApp Image 2024 08 26 at 8.01.59 PM
ಗೀತಾ ಹೊಸಮನಿ
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...