ಈ ದಿನ ವರದಿ ಫಲಶೃತಿ | ₹14 ಕೋಟಿ ವೆಚ್ಚದಲ್ಲಿ ಹಾಗರಗಾ ರಸ್ತೆ ಕಾಮಗಾರಿ ಆರಂಭ

Date:

ಕಲಬುರಗಿ ಜಿಲ್ಲೆಯ ಹಾಗರಗಾ ಮುಖ್ಯ ರಸ್ತೆ ದುರಸ್ತಿಗೆ ₹14 ಕೋಟಿ ವೆಚ್ಚದಲ್ಲಿ ಕಾಮಗಾರಿ ಶುರುವಾಗಿರುವುದು ಕಂಡುಬಂದಿದೆ. ಉತ್ತರ ಮತ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ ಈ ದಿನ.ಕಾಮ್ ವರದಿಯನ್ನು ಗಮನಿಸಿ ರಸ್ತೆ ದುರಸ್ತಿ ಮಾಡಲು ಮುಂದಾಗಿರುವುದು ಅತ್ಯಂತ ಶ್ಲಾಘನೀಯ.

ಈ ಹಿಂದೆ ಹಾಗರಗಾ ಮುಖ್ಯ ಹೆದ್ದಾರಿ ಅವ್ಯವಸ್ಥೆ ಕುರಿತು ಈ ದಿನ.ಕಾಮ್ 2024ರ ಆಗಸ್ಟ್‌ 26ರಂದು ʼಕಲಬುರಗಿ | ಇಬ್ಬರು ಶಾಸಕರಿದ್ದರೂ ದುರಸ್ತಿ ಕಾಣದ ಹಾಗರಗಾ ಮುಖ್ಯ ಹೆದ್ದಾರಿ; ಸ್ಥಳೀಯರಿಂದ ಹಿಡಿಶಾಪʼ ಎಂಬ ತಲೆಬರಹದಡಿ ವರದಿ ಪ್ರಕಟಿಸಿ, ಶಾಸಕರ ಗಮನಕ್ಕೆ ತರಲಾಗಿತ್ತು. ಈ ವರದಿ ಮಾಡಿ ಒಂದು ತಿಂಗಳಾದರು ಯಾವುದೇ ದುರಸ್ತಿ ಕುರಿತು ಕಂಡಿರಲಿಲ್ಲ.

ಹಾಗರಗಾ ರಸ್ತೆ ಕಾಮಗಾರಿ 2

ಇದರ ಬೆನ್ನೆಲ್ಲೇ ಹದಗೆಟ್ಟ ಹಾಗರಗಾ ಮುಖ್ಯ ಹೆದ್ದಾರಿ ಕುರಿತು ಸ್ಥಳೀಯರ ಅಭಿಪ್ರಾಯ, ಪ್ರಯಾಣಿಕರ ಅಭಿಪ್ರಾಯ ಸಂಗ್ರಹಿಸಿ ರಸ್ತೆ ಅವ್ಯವಸ್ಥೆರ ಭೀಕರ ಸ್ಥಿತಿಯ ವಿಡಿಯೋ ಕಲೆಹಾಕಿ ಸೆಪ್ಟೆಂಬರ್ 30ರಂದು ʼಇಬ್ಬರು ಶಾಸಕರ ಮಧ್ಯ ಸಿಲುಕಿ ಗುಂಡಿ ಪಾಲದ ರಸ್ತೆʼ ಎಂಬ ಶೀರ್ಷಿಕೆಯಡಿ ವಿಡಿಯೊ ಸ್ಟೋರಿ ಪ್ರಸಾರವಾದ ಬೆನ್ನೆಲ್ಲೇ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ ಇಂದು ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳುವಲ್ಲಿ ಮುಂದಾಗಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿ ಅಸಿಸ್ಟೆಂಟ್ ಎಂಜಿನಿಯರ್ ಹಾಜಿ ಪಾಟೀಲ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಹಾಗರಗಾ ಕ್ರಾಸ್‌ನಿಂದ ಮಾಲಗತ್ತಿ ಕ್ರಾಸ್‌ವರೆಗೆ ಅಂದರೆ 1.080 ಕಿಮೀ ಎಸ್‌ಡಿಬಿಸಿ, ಬಿಎಮ್ ಈಗಿರುವ ರಸ್ತೆಗೆ ಮತ್ತೆ ಡಾಂಬರ್ ಹಾಕಿ ರಸ್ತೆ ಜೀರ್ಣೋದ್ಧಾರ ಮಾಡಲಾಗುತ್ತಿದೆ. ಮಾಲಗತ್ತಿ ಕ್ರಾಸ್‌ನಿಂದ 940 ಮೀಟರ್ ರಿಕನ್‌ಸ್ಟ್ರಕ್ಷನ್(ಪುನ್ನರ್ ನವೀಕರಣ) ಡಾಂಬರ್ ರಸ್ತೆ ನಿರ್ಮಾಣ ಮಾಡಲಾಗುವುದು” ಎಂದು ತಿಳಿಸಿದರು.

ಹಾಗರಗಾ ರಸ್ತೆ ಕಾಮಗಾರಿ 1

“1 ಮೀಟರ್ ವಿನ್ಯಾಸದಲ್ಲಿ1.3 ಕಿಮೀ ರಸ್ತೆ ಬಲಭಾಗ, ಎಡಭಾಗದಲ್ಲಿ ಚರಂಡಿ ನಿರ್ಮಾಣ ಮಾಡಲಾಗುತ್ತಿದ್ದು,‌ ₹14‌ ಕೋಟಿ ವೆಚ್ಚದಲ್ಲಿ ಎಂಇಸಿಒ ಕನ್‌ಸ್ಟ್ರಕ್ಷನ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಅಡಿಯಲ್ಲಿ ಈ ಕಾಮಗಾರಿ ನಡೆಸಲಾಗುತ್ತಿದೆ. ಈರಣ್ಣ ಎಂಬುವವರು ಈ ಕಾಮಗಾರಿಯ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದಾರೆ” ಎಂದು ತಿಳಿಸಿದರು.

WhatsApp Image 2024 11 08 at 12.18.37 667ed234 e1731048718511
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...