ಗದಗ | ಈ ದಿನ.ಕಾಮ್‌ ಫಲಶ್ರುತಿ: ಅಲೆಮಾರಿ ಸಮುದಾಯ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

Date:

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಹಾಗೂ ಶಿಗ್ಲಿ ಗ್ರಾಮದಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯಗಳ ಸಮಸ್ಯೆಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗಳ ಕುರಿತು ಈದಿನ.ಕಾಮ್‌, “ನೀರು, ಕರೆಂಟ್ ಕೇಳಿದ್ರ, ನಿಮ್ಜಾಗ ಎಲೈತಿ ಅಂತ ಹೇಳ್ತಾರೆ; ಅಲೆಮಾರಿ ಸಮುದಾಯಗಳ ಗೋಳು ಕೇಳೋರಾರು?” ಎಂದು ವಿಸ್ತೃತ ವರದಿ ಮಾಡಿತ್ತು. ಈ ಸುದ್ದಿ ಪ್ರಕಟವಾದ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಶಿಗ್ಲಿ ಗ್ರಾಮ ಮತ್ತು ಲಕ್ಷ್ಮೇಶ್ವರ ಪಟ್ಟಣದ ದೊಡ್ಡೂರು ರಸ್ತೆಯ ಪಕ್ಕದಲ್ಲಿ ವಾಸಿಸುವ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಜನರನ್ನು ಭೇಟಿ ಮಾಡಿರುವ ಅಧಿಕಾರಿಗಳು ಅಲ್ಲಿ ವಾಸಿಸುವವರ ಸಮಸ್ಯೆಗಳ ಕುರಿತು ಆಲಿಸಿದ್ದಾರೆ. ಜೊತೆಗೆ, ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆ ಬಳಿಕ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಶಿರಹಟ್ಟಿ ತಾಲೂಕು ಸಹಾಯಕ ನಿರ್ದೇಶಕ ಶರಣಯ್ಯ ಕುಲಕರ್ಣಿ, “ಶಿಗ್ಲಿ ಹಾಗೂ ಲಕ್ಷ್ಮೇಶ್ವರ ಪಟ್ಟಣದ ಅಲೆಮಾರಿ ಜನಾಂಗದವರನ್ನು ಭೇಟಿ ಮಾಡಿದ್ದೇನೆ. ಇಲ್ಲಿಯ ಜನರಿಗೆ ಜಾಗ ಇಲ್ಲ, ಮನೆಗಳಿಲ್ಲ. ಅವರೆಲ್ಲರೂ ಗುಡಿಸಲುಗಳಲ್ಲಿದ್ದಾರೆ. ಗಟಾರ ತೊಂದರೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಅವರು ಎದುರಿಸುತ್ತಿದ್ದಾರೆ. ಎಲ್ಲ ಕುಟುಂಬಗಳ ಸರ್ವೆ ಮಾಡಿ, ಅರ್ಹರ ಪಟ್ಟಿ ತಯಾರಿಸಿ, ಅಗತ್ಯ ದಾಖಲಾತಿಗಳನ್ನು ಕೊಟ್ಟರೆ, ಸಮಾಜ ಕಲ್ಯಾಣ ಇಲಾಖೆಗೆ ವರದಿ ಒಪ್ಪಿಸಿ, ಸರ್ಕಾರದಿಂದ ಸೌಲಭ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಕೇಶವ ಕಟ್ಟಿಮನಿ, ಅಲೆಮಾರಿ ಸಮುದಾಯಗಳ ಮುಖಂಡ ರಾಘವೆಂದ್ರ, ರಮೇಶ ಹಂಗನಕಟ್ಟಿ, ಸುರೇಶ ಹರದಗಟ್ಟಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...