ಬೀದರ್‌ | ಈದಿನ ಫಲಶೃತಿ : ತಾಂಡಾಕ್ಕೆ ಬಂತು ಹೊಸ ಬೋರವೆಲ್‌ , ನೀರಿನ ಸಮಸ್ಯೆಗೆ ದೊರೆಯಿತು ಮುಕ್ತಿ

Date:

ಔರಾದ ತಾಲೂಕಿನ ಎಕಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭೀಮರಾವ ನಾಯಕ ತಾಂಡಾದಲ್ಲಿ ನೀರಿನ ಸಮಸ್ಯೆ ಉದ್ಬಿವಿಸಿ, ಜನರು ಜೀವ ಜಲಕ್ಕಾಗಿ ಪರದಾಡುತ್ತಿದ್ದ ಪರಿಸ್ಥಿತಿ ಕುರಿತು ʼಈದಿನ.ಕಾಮ್‌ʼ ಪ್ರಕಟಿಸಿದ ವರದಿಗೆ ಫಲಶೃತಿ ಲಭಿಸಿದೆ.

ಈದಿನ.ಕಾಮ್‌ ನಲ್ಲಿ ಫೆ.23 ರಂದು ʼಕುಡಿಯುವ ನೀರಿಗಾಗಿ ಪರದಾಡುತ್ತಿರುವ ಭೀಮರಾವ್ ನಾಯ್ಕ ತಾಂಡಾ ನಿವಾಸಿಗಳುʼ ಎಂಬ ಶೀರ್ಷಿಕೆಯಲ್ಲಿ ಮೊಟ್ಟ ಮೊದಲು ವಿಸ್ತೃತ ವರದಿ ಪ್ರಕಟವಾಗಿತ್ತು. ವರದಿಗೆ ಎಚ್ಚೆತುಕೊಂಡ ತಾಲೂಕು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಎಕಂಬಾ ಗ್ರಾಮ ಪಂಚಾಯಿತಿ ಪಿಡಿಒ ಅವರು ತಾಂಡಾಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶೀಘ್ರದಲ್ಲಿ ತಾಂಡಾದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ನೀರಿನ ಸಮಸ್ಯೆ ಬಗ್ಗೆ ಮುತುವರ್ಜಿ ವಹಿಸಿದ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತ್‌ ಅಧಿಕಾರಿಗಳ ನೇತ್ರತ್ವದಲ್ಲಿ ಮಾರ್ಚ್‌ 10 ರಂದು ಹೊಸ ಬೋರವೆಲ್‌ ಕೊರೆಸಿ, ಭೀಮಾ ನಾಯಕ ತಾಂಡಾ ನಿವಾಸಿಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೀಮರಾವ್ ನಾಯ್ಕ್ ತಾಂಡಾ ನಿವಾಸಿಗಳಿಗೆ ನೀರಿನ ಸಮಸ್ಯೆ ಕುರಿತು ʼಈದಿನ.ಕಾಮ್ʼ ವರದಿಗಾರರು ತಾಂಡಾಕ್ಕೆ ಭೇಟಿ ನೀಡಿ ಮೊದಲ ಬಾರಿಗೆ ವಿಶೇಷ ವರದಿ ಪ್ರಕಟಿಸಿದರು. ಇದಕ್ಕೆ ಸ್ಪಂದಿಸಿದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇದೀಗ ತಾಂಡಾದಲ್ಲಿ ಹೊಸ ಬೊರವೆಲ್‌ ಕೊರೆಸಿದ್ದಾರೆ. ತಾಂಡಾ ಜನರಿಗೆ ನೀರಿನ ಸಮಸ್ಯೆ ಪರಿಹಾರಕ್ಕಾಗಿ ವಿಶೇಷ ಕಾಳಜಿಯಿಂದ ಸುದ್ದಿ ಪ್ರಕಟಿಸಿದ ʼಈದಿನ.ಕಾಮ್‌ʼ ತಂಡಕ್ಕೆ ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆ ಜಿಲ್ಲಾ ಸಂಚಾಲಕ ಬಾಬುರಾವ ಕೌಠಾ ಧನ್ಯವಾದ ತಿಳಿಸಿದ್ದಾರೆ.

“ತಾಂಡಾದಲ್ಲಿ ಈಗಾಗಲೇ ಸರ್ಕಾರದ ಅನುದಾನದಲ್ಲಿ ಕೊರೆಸಿದ ತೆರೆದ ಬಾವಿ ಇದೆ. ಆದರೆ ಬಾವಿಗೆ ಜಮೀನು ನೀಡಿದ ಭೂಮಾಲಿಕರ ತಕರಾರಿನಲ್ಲಿರುವ ಕಾರಣ ತಾಂಡಾದಲ್ಲಿ ನೀರಿನ ಸಮಸ್ಯೆ ಉದ್ಬವಿಸಿತ್ತು. ತಾಂಡಾದಲ್ಲಿ ಶಾಶ್ವತ ನೀರಿನ ಸಮಸ್ಯೆ ಬಗೆಹರಿಸಲು ಸರ್ಕಾರದ 30 ಲಕ್ಷ ರೂ. ವೆಚ್ಚ ಅನುದಾನದಲ್ಲಿ ಕೊರೆಸಿದ ತೆರೆದ ಬಾವಿ ಗ್ರಾಮ ಪಂಚಾಯತ್‌ ಸುಪರ್ದಿಗೆ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ ಲೋಕಸಭಾ ಕ್ಷೇತ್ರ | ದಶಕದ ʼಕಮಲʼ ಕೋಟೆ ಭೇದಿಸಲು ʼಕೈʼ ರಣತಂತ್ರ

ತಾಂಡಾ ನಿವಾಸಿ ಮಾರುತಿ ರಾಠೋಡ್‌ ಮಾತನಾಡಿ, ʼಈದಿನ.ಕಾಮ್ʼ ನ್ಯೂಸ್‌ನವರು ತಾಂಡಾಕ್ಕೆ ಖುದ್ದು ಭೇಟಿ ನೀಡಿ ಮೊದಲು ಸುದ್ದಿ ಮಾಡಿದರು, ಸುದ್ದಿಯ ಫಲವಾಗಿ ನಮಗೆ ಕುಡಿಯುವ ನೀರು ಸಿಗುವಂತಾಗಿದೆ” ಎಂದು ಈದಿನ.ಕಾಮ್‌ ಮಾಧ್ಯಮಕ್ಕೆ ಧನ್ಯವಾದ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...