ಹುಬ್ಬಳ್ಳಿ | ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿ ತಾತ್ಕಾಲಿಕ ಪರಿಹಾರ!

Date:

ಹುಬ್ಬಳ್ಳಿ ನಗರದ ಆರ್ ಎನ್ ಶೆಟ್ಟಿ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವ ಪರಿಣಾಮ ವಾಹನ ಸವಾರರಿಗೆ ಮತ್ತು ಶಾಲಾ ಮಕ್ಕಳಿಗೆ, ವೃದ್ಧರಿಗೆ ಓಡಾಡಲು ಬಹಳ ಸಮಸ್ಯೆ ಉಂಟಾಗಿತ್ತು. ಈ ಬಗ್ಗೆ ಆಗಸ್ಟ್ 29ರಂದು ‘ಗುಂಡಿಗಳಿಂದ ತುಂಬಿ ಹೋದ ಆರ್ ಎನ್ ಶೆಟ್ಟಿ ರಸ್ತೆ: ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ’ ಎಂಬ ಶೀರ್ಷಿಕೆಯಡಿಯಲ್ಲಿ ಈ ದಿನ.ಕಾಮ್ ವಿಡಿಯೋ ವರದಿ ಮಾಡಿತ್ತು.

ಈದಿನ.ಕಾಮ್ ವರದಿಯಿಂದ ಎಚ್ಚೆತ್ತುಕೊಂಡ ಮಹಾನಗರ ಪಾಲಿಕೆ ಅಧಿಕಾರಿಗಳು, ಅಪಘಾತದ ಕೂಪಗಳಂತಿದ್ದ ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿಸಿ ತಾತ್ಕಾಲಿಕವಾಗಿ ರಸ್ತೆ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ.

ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿ ಮಠಕ್ಕೆ ತಲುಪುವ ಆರ್ ಏನ್ ಶೆಟ್ಟಿ ರಸ್ತೆಯಲ್ಲಿ ಬೃಹತ್ ರಸ್ತೆ ಗುಂಡಿಗಳು ಬಿದ್ದಿದ್ದ ಪರಿಣಾಮ ಸಾರ್ವಜನಿಕರ ಸಂಚಾರಕ್ಕೆ ಬಹಳಷ್ಟು ಸಮಸ್ಯೆ ಉಂಟಾ ಮಾಡುತ್ತಿತ್ತು. ಹಲವು ಬಾರಿ ಸಂಬಂಧಪಟ್ಟ ಪಾಲಿಕೆ ಸದಸ್ಯರು, ಶಾಸಕರ ಗಮನಕ್ಕೆ ತಂದರೂ ಉಪಯೋಗವಾಗಿಲ್ಲ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಈದಿನ ಆಗಸ್ಟ್ 29 ರಂದು ಪ್ರತ್ಯಕ್ಷ ವರದಿ ಮಾಡಿದ್ದು, ಅಧಿಕಾರಿಗಳ ಗಮನಸೆಳೆಯುವ ಕೆಲಸ ಮಾಡಿತ್ತು. ಈ ದಿನ ವರದಿಯ ಮರುದಿನವೇ ವರದಿಗೆ ಎಚ್ಚೆತ್ತುಕೊಂಡ ಅಧಿಕಾರಿಗಳು, ತೆರೆದುಕೊಂಡಿದ್ದ ಗುಂಡಿಗಳಿಗೆ ಮಣ್ಣು ಹಾಕಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಹೋರಾಟಗಾರ ರಾಜು ನಾಯಕವಾಡಿ ಈ ದಿನ.ಕಾಮ್ ಜೊತೆಗೆ ಮಾತನಾಡಿ, “ಈ ದಿನ.ಕಾಮ್‌ನ ಸುದ್ಧಿಯಿಂದ ಜನರಿಗೆ ಅನುಕೂಲ ಆಯಿತು, ನಿಮ್ಮ ವರದಿಯಿಂದ ಪಾಲಿಕೆ ಎಚ್ಚೆತ್ತುಕೊಂಡು ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಸಿದೆ. ಆದರೆ ಸಂಪೂರ್ಣ ಉತ್ತಮ ರಸ್ತೆ ನಿರ್ಮಿಸಲು ಶ್ರಮಿಸಬೇಕು. ಮಳೆಗಾಲ ಮುಗಿದ ಕೂಡಲೇ ರಸ್ತೆ ಕಾಮಗಾರಿ ನಡೆಸಬೇಕು” ಎಂದು ಆಗ್ರಹಿಸಿದರು.

IMG 20240805 WA0207
ಶರಣಪ್ಪ ಗೊಲ್ಲರ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...