ಬೀದರ್‌ | ʼಈದಿನʼ ಫಲಶೃತಿ : ನಿರ್ಗತಿಕ ಮಹಿಳೆಗೆ ಒಂದೇ ದಿನದಲ್ಲಿ ವೃದ್ಧಾಪ್ಯ ವೇತನ ಮಂಜೂರು

Date:

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್‌ ಗ್ರಾಮದ ಜೀಜಾಬಾಯಿ ಮಾಧವರಾವ್ (64) ಎನ್ನುವ ನಿರ್ಗತಿಕ ವಯೋವೃದ್ಧ ಮಹಿಳೆ ಮನೆಗೆ ಭಾಲ್ಕಿ ತಾಲೂಕಿನ ಸಾಯಿಗಾಂವ್‌ ಹೋಬಳಿಯ ಉಪ ತಹಸೀಲ್ದಾರ್‌ ಸುನೀಲ್‌ ಸಜ್ಜನ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿನೋದ ರಾಠೋಡ್ ಭೇಟಿ ನೀಡಿ ವೃದ್ಧಾಪ್ಯ ವೇತನ ಮಂಜೂರಾತಿ ಪತ್ರ ಹಸ್ತಾಂತರಿಸಿದರು.

ಅನ್ನಭಾಗ್ಯ, ಗೃಹಲಕ್ಷ್ಮಿ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಹಣ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತರಾದ ಜೀಜಾಬಾಯಿ ಅವರು ನಿರ್ಗತಿಕ ಬದುಕಿನ ಸಂಕಟ ಕುರಿತು ʼಈದಿನ.ಕಾಮ್‌ʼ ನಲ್ಲಿ ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿರುವ ವೃದ್ಧ ಮಹಿಳೆ: ಕಣ್ಣು ಹಾಯಿಸುವರೇ ಅಧಿಕಾರಿಗಳು? ಎಂಬ ಶೀರ್ಷಿಕೆಯಡಿ ಸೆ.20 ರಂದು ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಕಂದಾಯ ಇಲಾಖೆ ಅಧಿಕಾರಿಗಳು ಜೀಜಾಬಾಯಿ ಮನೆಗೆ ದೌಡಾಯಿಸಿ ಸಮಸ್ಯೆ ಆಲಿಸಿದ್ದಾರೆ.

ʼಈದಿನ.ಕಾಮ್‌ʼ ವರದಿಗೆ ಎಚ್ಚೆತುಕೊಂಡ ಕಂದಾಯ ಇಲಾಖೆಯ ಅಧಿಕಾರಿಗಳು ಸೆ.25 ರಂದು ಬೆಳಿಗ್ಗೆ ರಾಚಪ್ಪ ಗೌಡಗಾಂವ್‌ ಗ್ರಾಮದ ವೃದ್ಧೆ ಜೀಜಾಬಾಯಿ ಮನೆಗೆ ಭೇಟಿ ನೀಡಿ ದಾಖಲೆ ಪರಿಶೀಲಿಸಿದ್ದಾರೆ. ವೃದ್ಧಾಪ್ಯ ವೇತನಕ್ಕೆ ಬೇಕಾದ ಅಗತ್ಯ ದಾಖಲೆ ಪಡೆದು ಕಚೇರಿಗೆ ತೆರಳಿದ್ದರು. ಅದೇ ದಿನ ವೃದ್ಧಾಪ್ಯ ವೇತನ ಮಂಜೂರು ಮಾಡಿ ಪುನಃ ಗ್ರಾಮಕ್ಕೆ ಹೋಗಿ ಅಜ್ಜಿಯ ಕೈಗೆ ಮಂಜೂರಾತಿ ಪತ್ರ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೀಜಾಬಾಯಿಗೆ ಓರ್ವ ಮಗನಿದ್ದ, ಆತ ಎಂಟತ್ತು ವರ್ಷದ ಹಿಂದೆ ಸಾವನಪ್ಪಿದ್ದಾನೆ, ಸೊಸೆ ಬೇರೆ ಕಡೆ ವಾಸವಾಗಿದ್ದಾರೆ. ಸಕ್ಕರೆ ಕಾರ್ಖಾನೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗಂಡನನ್ನು ಕಳೆದುಕೊಂಡ ಜೀಜಾಬಾಯಿ, ಸದ್ಯ ತಗಡಿನ ಶೀಟ್ ಇರುವ ಮನೆಯಲ್ಲಿ ಒಂಟಿ ಜೀವನ ನಡೆಸುತ್ತಿದ್ದಾರೆ. ಅಜ್ಜಿಗೆ 64 ವರ್ಷದವಾದರೂ ʼಕಷ್ಟ ಎಲ್ಲರಿಗೂ ಬರುತ್ತದೆʼ ಎಂದು ಹೆದರದೇ ಕೂಲಿಗೆ ಹೋಗುವುದು ಅನಿವಾರ್ಯವಾಗಿತ್ತು. ಇದೀಗ ಅಧಿಕಾರಿಗಳು ಇಚ್ಚಾಶಕ್ತಿ ತೋರಿ ವೃದ್ಧಾಪ್ಯ ವೇತನ ಮಂಜೂರು ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾಷಣ ಮಾಡುವಾಗಲೇ ಅಸ್ವಸ್ಥರಾದ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಎರಡು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ವಂಚಿತಳಾಗಿ ಸಂಕಷ್ಟದ ಬದುಕು ದೂಡುತ್ತಿದ್ದ ಅಜ್ಜಿಯ ಮನೆಯ ಕಡೆಗೆ ತಿರುಗಿ ನೋಡದ ಅಧಿಕಾರಿಗಳು ʼಈದಿನ.ಕಾಂʼ ವರದಿಗೆ ಸ್ಪಂದಿಸಿ ಒಂದೇ ದಿನದಲ್ಲಿ ವೃದ್ಧಾಪ್ಯ ಪಿಂಚಣಿ ಮಂಜೂರು ಮಾಡಿದ್ದಾರೆ. ಕಂದಾಯ ಅಧಿಕಾರಿಗಳ ಕಾರ್ಯವೈಖರಿಗೆ ಜನ ಭೇಷ್ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...