ಶಿವಮೊಗ್ಗ | ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ಅಂಡರ್‌ಪಾಸ್‌ನಲ್ಲಿ ನಿಂತಿದ್ದ ನೀರು ಖಾಲಿ ಮಾಡಿಸಿದ ಇಂಜಿನಿಯರ್

Date:

ಶಿವಮೊಗ್ಗ ನಗರದ ಹೃದಯ ಭಾಗವಾದ ಅಮೀರ್ ಅಹಮದ್ ವೃತ್ತದಲ್ಲಿ ಕೆಲವು ವರ್ಷಗಳ ಹಿಂದೆ ಅಂಡರ್‌ಪಾಸ್‌ ನಿರ್ಮಾಣ ಮಾಡಿದ್ದು, ತದನಂತರ ಸಮರ್ಪಕ ಸೇವೆ ಒದಗಿಸುವಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವಿಫಲವಾಗಿತ್ತು.

ಸಾರ್ವಜನಿಕರಿಗೆ ಅನುಕೂಲವಾಗಬೇಕಿದಿದ್ದ ಅಂಡರ್‌ಪಾಸ್‌ ರಸ್ತೆ ಮುಚ್ಚಿರುವುದರಿಂದ ಜನಸಾಮಾನ್ಯರು ಅನಾನುಕೂಲಕ್ಕೆ ಈಡಾಗಿದ್ದರು. ಇದರಲ್ಲಿ ಕೊಳಚೆ ನೀರು, ಕಸ ಕಡ್ಡಿ ಸೇರಿಕೊಂಡು ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ ಎದುರಾಗಿತ್ತು. ನಗರದ ಹೃದಯ ಭಾಗದಲ್ಲಿ ಈ ಸಮಸ್ಯೆ ಯಾರ ಗಮನಕ್ಕೆ ಬಂದಿಲ್ಲವೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿತ್ತು.

ಈ ಬಗ್ಗೆ ಕಳೆದ ಸೆಪ್ಟೆಂಬರ್ 1 ರಂದು ಈ ದಿನ.ಕಾಮ್ , “ಶಿವಮೊಗ್ಗ | ಅಂಡರ್‌ಪಾಸ್‌ ಬಳಕೆ ಸ್ಥಗಿತ; ಮಹಾನಗರ ಪಾಲಿಕೆ, ಜಿಲ್ಲಾಡಳಿತದ ನಿರ್ಲಕ್ಷ್ಯ, ಆರೋಪ” ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಿಸಿತ್ತು. ಈ ವರದಿಯ ಬಳಿಕ ಎಚ್ಚೆತ್ತುಕೊಂಡ ಶಿವಮೊಗ್ಗ ಇಂಜಿನಿಯರ್‌, ಅಂಡರ್‌ಪಾಸ್‌ನಲ್ಲಿ ನಿಂತಿದ್ದ ನೀರನ್ನು ಖಾಲಿ ಮಾಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದ್ದಿ ಪ್ರಕಟಿಸಿದ ನಂತರ ಸ್ಪಂದಿಸಿದ ಎಲೆಕ್ಟ್ರಿಕಲ್ ಮುಖ್ಯ ಇಂಜಿನಿಯರ್ ನಾಗರಾಜ್ ಅವರು ಅಂಡರ್‌ಪಾಸ್‌ನಲ್ಲಿದ್ದ ನೀರನ್ನು ಇಂದು ಮೋಟಾರ್ ಮೂಲಕ ಆಚೆಗೆ ತೆಗಿಸಿದ್ದಾರೆ. ಇದರ ಕುರಿತು ಈ.ದಿನ.ಕಾಮ್ ಜೊತೆಗೆ ಮಾತನಾಡಿದ ಅವರು, ಇನ್ನು ಎರಡು ದಿವಸದಲ್ಲಿ ಸ್ವಚ್ಛತೆ ಮಾಡಿಸುವದಾಗಿ ತಿಳಿಸಿದ್ದಾರೆ.

ಸಾರ್ವಜನಿಕರ ಮನವಿಯಂತೆ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಬಳಕೆ ಹಾಗೂ ಬೀದಿ ಬದಿ ವ್ಯಾಪಾರಸ್ಥರಿಗೆ ಇದನ್ನು ಮುಕ್ತ ಅವಕಾಶ ಕಲ್ಪಿಸಿಕೊಡುತ್ತಾರಾ ಎನ್ನುವ ಪ್ರಶ್ನೆಗೆ ಉತ್ತರ ಸಿಗಬೇಕಿದೆ.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...