ಶ್ರೀರಂಗಪಟ್ಟಣ | ‘ಈ ದಿನ’ ವರದಿಗೆ ಎಚ್ಚೆತ್ತ ತಾಲೂಕು ಆಡಳಿತ: ಗ್ಯಾಸ್ ಏಜೆನ್ಸಿಗೆ ನೋಟಿಸ್

Date:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಅಶೋಕ್ ಗ್ಯಾಸ್‌ ಏಜೆನ್ಸಿಯವರು ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದಲ್ಲದೇ, ಡೋರ್ ಡೆಲಿವರಿ ಮಾಡಲು ನಿರಾಕರಣೆ ಮಾಡುತ್ತಿರುವುದಾಗಿ ಗ್ರಾಹಕರು ದೂರಿದ್ದರು. ಇದರಿಂದ ಗ್ರಾಹಕರಿಗೆ ವಿಪರೀತ ತೊಂದರೆ ಆಗಿತ್ತು.

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಗ್ರಾಹಕರು ನೋವು ತೋಡಿಕೊಂಡಿದ್ದರಿಂದ ಈ ಬಗ್ಗೆ ಸೆ.23ರಂದು ಈ ದಿನ.ಕಾಮ್ ವಿಸ್ತ್ರತವಾಗಿ ವರದಿ ಮಾಡಿತ್ತು.

ಅಶೋಕ ಗ್ಯಾಸ್ ಏಜೆನ್ಸಿಯವರು ಹೆಚ್ಚುವರಿ ಹಣ ಪಡೆಯುತ್ತಿದ್ದರು. ಸಿಲಿಂಡರ್‌ಗಳನ್ನು ಮನೆ ಬಾಗಿಲಿಗೆ ತಲುಪಿಸುತ್ತಿರಲಿಲ್ಲ. ಇದನ್ನು ಸರಬರಾಜು ವಾಹನದ ಡ್ರೈವರ್ ಕೂಡ ಒಪ್ಪಿಕೊಂಡಿದ್ದರು. ಸೇವಾ ನ್ಯೂನತೆಗಳನ್ನು ಪ್ರಶ್ನಿಸುವ ಗ್ರಾಹಕರಿಗೆ ಏಜೆನ್ಸಿ ಬದಲಿಸಿಕೊಳ್ಳುವಂತೆ ಬೆದರಿಕೆ ಹಾಕುತಿದ್ದರು. ಈ ಹಿನ್ನೆಲೆಯಲ್ಲಿ ಸೆ.23ರಂದು ಈ ದಿನ.ಕಾಮ್ ‘ಶ್ರೀರಂಗಪಟ್ಟಣ | ಗ್ಯಾಸ್ ಏಜೆನ್ಸಿಯಿಂದ ಹೆಚ್ಚುವರಿ ಹಣ ವಸೂಲಿ, ಡೋರ್ ಡೆಲಿವರಿ ನಿರಾಕರಣೆ: ಗ್ರಾಹಕರ ಆರೋಪ’ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈದಿನ.ಕಾಮ್ ವರದಿಯ ನಂತರ ಎಚ್ಚೆತ್ತುಕೊಂಡ ಶ್ರೀರಂಗಪಟ್ಟಣ ತಾಲೂಕು ಆಡಳಿತ ಅಶೋಕ ಗ್ಯಾಸ್ ಏಜೆನ್ಸಿಗೆ ಸೆ.24ರಂದು ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳಲ್ಲಿ ಲಿಖಿತ ಸಮಜಾಯಿಷಿ ನೀಡುವಂತೆ ತಾಕೀತು ಮಾಡಿದೆ.

1001790578
ತಹಶೀಲ್ದಾರ್ ನೋಟಿಸ್

ಗ್ಯಾಸ್ ಸಿಲಿಂಡರ್‌ಗಳನ್ನು ಗ್ರಾಹಕರಿಗೆ ಸರ್ಕಾರ ನಿಗದಿಪಡಿಸಿದ ದರದಲ್ಲಿ ವಿತರಿಸಬೇಕಾಗಿರುತ್ತದೆ. ಹಾಗೂ ಡೋರ್ ಡೆಲಿವರಿ ನೀಡಬೇಕಾಗಿರುತ್ತದೆ. ಆದರೆ ನಿಮ್ಮ ಏಜೆನ್ಸಿಯ ಡೆಲಿವರಿ ಸಿಬ್ಬಂದಿಗಳು ಗ್ರಾಹಕರಿಂದ ಹೆಚ್ಚಿನ ಹಣ ಪಡೆಯುವುದು ಮತ್ತು ಡೋರ್ ಡೆಲಿವರಿ ಮಾಡಲು ನಿರಾಕರಣೆ ಮಾಡುವುದು ಎಲ್.ಪಿ.ಜಿ. (ರೆಗ್ಯೂಲೇಷನ್ ಆಪ್ ಸಪ್ಪೆ ಅಂಡ್ ಡಿಸ್ಟ್ರಿಬ್ಯೂಷನ್) ಆದೇಶ 2000ಕ್ಲಾಸ್ (ಡಿ) ಷೆಡ್ಯೂಲ್-1, ಕ್ಲಾಸ್ 3(4)11ರ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ.

ನಿಮ್ಮ ಏಜೆನ್ಸಿಗೆ ಸಂಬಂಧಿಸಿದಂತೆ ಮೇಲ್ಕಂಡ ಲೋಪದೋಷಗಳಿಗೆ ಕಾರಣವೇನೆಂಬುದಕ್ಕೆ ನಿಮ್ಮ ಲಿಖಿತ ಸಮಜಾಯಿಷಿಯನ್ನು ಮೂರು ದಿನಗಳೊಳಗಾಗಿ ಸಲ್ಲಿಸಲು ತಿಳಿಸಿದೆ. ತಪ್ಪಿದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲು ಮೇಲಿನ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ನೋಟಿಸ್‌ನಲ್ಲಿ ಎಚ್ಚರಿಕೆ ಕೊಟ್ಟಿದ್ದಾರೆ‌.

ಇನ್ನು ಮುಂದಾದರೂ ಸಾರ್ವಜನಿಕರಿಗೆ ಸಮಸ್ಯೆಯಾಗದ ರೀತಿಯಲ್ಲಿ ಕಾನೂನು ಪ್ರಕಾರ ಸರಿಯಾದ ಸೇವೆ ಒದಗಿಸ ಬೇಕೆಂಬುದು ಈದಿನ.ಕಾಮ್‌ನ ವರದಿಯ ಆಶಯ. ವರದಿ ಮಾಡುವ ಮೂಲಕ ಅಧಿಕಾರಿಗಳ ಗಮನಕ್ಕೆ ತಂದದ್ದಕ್ಕೆ ಶ್ರೀರಂಗಪಟ್ಟಣದ ಜನತೆ ಈ ದಿನ.ಕಾಮ್‌ಗೆ ಧನ್ಯವಾದ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...