ಈ ದಿನ ಇಂಪ್ಯಾಕ್ಟ್ | ಮೇಲನಹಳ್ಳಿ ಕಾಲೋನಿ ಸಮಸ್ಯೆಗೆ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆ; ನಿವೇಶನ ಹಂಚಿಕೆ ಭರವಸೆ

Date:

ಮೇಲನಹಳ್ಳಿ ಕಾಲೋನಿಯಲ್ಲಿ ಜನರು ಗುಡಿಸಲು ನಿರ್ಮಿಸಿಕೊಂಡಿದ್ದ ಆ ಜಾಗವನ್ನು ಗ್ರಾಮಸ್ಥರಿಗೆ ಸರ್ವೇ ಮಾಡಿ ಕೊಡುವಂತೆ ಎಸಿ ಮುಖಾಂತರ ಡಿಸಿ ಅವರಿಗೆ ಮಾಹಿತಿ ಕಳಿಸಿಕೊಟ್ಟಿದ್ದು, ಯಾರಿಗೆ ನಿವೇಶನ ಇಲ್ಲ ಅಂಥವರಿಗೆ ಒಂದು ತಿಂಗಳಲ್ಲಿ ನಿವೇಶನ ಹಂಚಿಕೆ ಮಾಡಲಾಗುತ್ತದೆ ಎಂದು ತಹಶೀಲ್ದಾರ್ ಭರವಸೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೇಲನಹಳ್ಳಿ ಕಾಲೋನಿಯ ಗ್ರಾಮಸ್ಥರು ನಿರ್ಮಿಸಿದ್ದ ಗುಡಿಸಲನ್ನು ತೆರವುಗೊಳಿಸಿದ್ದ ಜಾಗಕ್ಕೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರ್‌ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ನಿವೇಶನ ಹಂಚಿಕೆಗೆ ಉಪ ನಿರ್ದೇಶಕರ ಕಚೇರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.

Screenshot 2024 12 06 20 20 20 26 7352322957d4404136654ef4adb64504

ಮೇಲನಹಳ್ಳಿ ಕಾಲೋನಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸುಮಾರು 80 ಕುಟುಂಬದ ಮೂಲ ನಿವಾಸಿಗಳು ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿದ್ದರು. ಇವು ಅನಧಿಕೃತ ಗುಡಿಸಿಲುಗಳೆಂಬ ದೂರು ಆಧರಿಸಿ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರ ನೆರವಿನೊಂದಿಗೆ ಕಂದಾಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿ ಗುಡಿಸಲುಗಳನ್ನು ನಾಶಗೊಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಡಿಸಲುಗಳನ್ನು ನಾಶಗೊಳಿಸಿದ ಹಿನ್ನೆಲೆಯಲ್ಲಿ ʼಚಿಕ್ಕಮಗಳೂರು | ಪ್ರಾಣ ಬಿಟ್ಟೇವು, ಭೂಮಿ ಬಿಡಲ್ಲ: ದಲಿತ ನಿವಾಸಿಗಳ ಅಳಲುʼ ಎಂಬ ಶೀರ್ಷಿಕೆಯಡಿ ಈ ದಿನ.ಕಾಮ್‌ ನವೆಂಬರ್‌ 19ರಂದು ವರದಿ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಕಡೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ನವೆಂಬರ್ 21ರಂದು‌ ಮೇಲನಹಳ್ಳಿ ಕಾಲೋನಿಯ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ್ದಾರೆ.

ಘಟನೆ ಹಿನ್ನೆಲೆ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೇಲನಹಳ್ಳಿ ಕಾಲೋನಿಯ ಸರ್ವೇ ನಂ.22ರಲ್ಲಿ 20 ಎಕ್ಕರೆ 16 ಗುಂಟೆ ಸರ್ಕಾರದ ಬೀಳು ಬಿದ್ಧ ಜಾಗದಲ್ಲಿ ವಸತಿರಹಿತ 58 ಕುಟುಂಬಸ್ಥರು 5 ಎಕರೆಗೆ ಸೀಮಿತವಾಗಿ ಗುಡಿಸಲು ನಿರ್ಮಿಸಿಕೊಂಡು ಒಂದು ವರ್ಷದಿಂದ ಬದುಕು ನಡೆಸುತ್ತಿದ್ದರು. ಇವು ಅನಧಿಕೃತ ಗುಡಿಸಿಲುಗಳೆಂದು ಬಂದ ದೂರು ಆಧರಿಸಿ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರ ನೆರವಿನೊಂದಿಗೆ ಕಂದಾಯ ಅಧಿಕಾರಿಗಳು ತೆರವುಗೊಳಿಸಿದ್ದರು.

Screenshot 2024 12 06 20 19 44 12 7352322957d4404136654ef4adb64504

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ದಲಿತರ ಗುಡಿಸಲನ್ನು ನೆಲಸಮ ಮಾಡಿದ ತಾಲೂಕು ಅಧಿಕಾರಿಗಳು

“ಈ ಜಾಗದಲ್ಲಿ ಬೇರೆ ಬೇರೆ ತಾಲೂಕಿನಿಂದ ಜನರು ಬಂದು ಬೆಳೆ ಹಾಗೂ ತೋಟ ಮಾಡಿಕೊಂಡಿದ್ದಾರೆ. ನಾವು ಅಂಗೈಯಷ್ಟು ಜಾಗದಲ್ಲಿ ತಮಗೆ ಬದುಕು ಕಟ್ಟಿಕೊಳ್ಳಲು ಗುಡಿಸಲು ನಿರ್ಮಾಣ ಮಾಡಿಕೊಂಡಿರುವುದನ್ನು ದ್ವಂಸಗೊಳಿಸಿದರು. ನಾವು ಕೂಲಿ ಮಾಡಿ ಹೊಟ್ಟೆಬಟ್ಟೆ ಕಟ್ಟಿ ಮಕ್ಕಳನ್ನು ಸಾಕುತ್ತ ಜೀವನ ನಡೆಸುತ್ತಿದ್ದೇವೆ. ನಮ್ಮ ಕಷ್ಟ ಮುಗಿಲು ಮುಟ್ಟಿದೆ. ಒಂದು ಚಿಕ್ಕ ಮನೆಯಲ್ಲಿ 3ರಿಂದ 4 ಕುಟುಂಬದವರು ವಾಸ ಮಾಡುತ್ತಿದ್ದೀವಿ. ನಾವು ಗುಡಿಸಲು ನಿರ್ಮಿಸಿಕೊಂಡು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದೆವು. ನಾವೆಲ್ಲ ಕೂಲಿ ಕೆಲಸಕ್ಕೆ ಹೋಗಿರುವ ಸಮಯದಲ್ಲಿ ಅಧಿಕಾರಿಗಳು ಜೆಸಿಬಿಯಿಂದ ಗುಡಿಸಲು ಕೆಡವಿದ್ದಾರೆ. ಗುಡಿಸಲಲ್ಲಿದ್ದ ಆಹಾರ ಪದಾರ್ಥಗಳು, ಅಡುಗೆ ಪಾತ್ರೆಗಳು, ಹಾಸಿಗೆ ಹಾಗೂ ನಮ್ಮ ವಸ್ತುಗಳ ಸಮೇತ ಗುಡಿಸಲುಗಳನ್ನು ನಾಶಪಡಿಸಿದ್ದಾರೆ” ಎಂದು ಈ ದಿನ.ಕಾಮ್ ಸ್ಥಳಕ್ಕೆ ಭೇಟಿ ನೀಡಿದಾಗ ಮೇಲನಹಳ್ಳಿ ಗ್ರಾಮಸ್ಥರು ತಮ್ಮ ನೋವನ್ನು ಹೇಳಿಕೊಂಡಿದ್ದರು.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...