‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ಗುಬ್ಬಿಯ ಹಂದಿಜೋಗಿ ಸಮುದಾಯದ ವಸತಿ ಪ್ರದೇಶಕ್ಕೆ ಭೇಟಿ

Date:

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಕಳೆದ 40 ವರ್ಷಗಳಿಂದಲೂ ಅಲೆಮಾರಿಗಳಾದ ಹಂದಿಜೋಗಿ ಸಮುದಾಯದ ಮಂದಿ ತೀವ್ರ ನಿಕೃಷ್ಟ ಬದುಕು ನಡೆಸುತ್ತಿದ್ದರು. ಮಳೆಗಾಲ ಬಂದರೆ ತಗ್ಗು ಪ್ರದೇಶದ ಗುಡಿಸಲಿಗೆ ನೀರು ತುಂಬುತ್ತಿತ್ತು. ಈ ಬಗ್ಗೆ ಬೆಂಗಳೂರಿನ ನೈಜ ಹೋರಾಟಗಾರರ ವೇದಿಕೆ ಹಾಗೂ ತುಮಕೂರು ಕಾಳಜಿ ಫೌಂಡೇಶನ್ ನೀಡಿದ್ದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ್ದ ಈ ದಿನ.ಕಾಮ್ ತಂಡ, ವಿಸ್ತಾರವಾದ ವಾಸ್ತವ ಚಿತ್ರಣದ ಬಗ್ಗೆ ಅಕ್ಟೋಬರ್ 16ರಂದು ವರದಿ ಬಿತ್ತರಿಸಿತ್ತು.

ಸುದ್ದಿ ಪ್ರಸಾರವಾದ ನಂತರ ಎಚ್ಚೆತ್ತ ತುಮಕೂರಿನ ಅಧಿಕಾರಿಗಳು, ಸಾತೇನಹಳ್ಳಿ ಬಳಿಯಲ್ಲಿ ಅಲೆಮಾರಿಗಳಿಗೆ ಮೀಸಲಿಟ್ಟ ನಿವೇಶನದಲ್ಲಿ ನೀರು ಮತ್ತು ವಿದ್ಯುತ್ ವ್ಯವಸ್ಥೆ ಮಾಡಲು ಗುರುವಾರ ಬೆಳಗ್ಗೆ ತಾಪಂ ಇಓ ಶಿವಪ್ರಕಾಶ್ ನೇತೃತ್ವದ ತಂಡ ಭೇಟಿ ನೀಡಿದೆ.

ಕಳೆದ ಹಲವು ವರ್ಷದಿಂದ ಕಾದಿರಿಸಿದ್ದ ನಿವೇಶನದಲ್ಲಿ ವಸತಿ ನಿರ್ಮಾಣ ಮಾಡುವ ಭರವಸೆ ಇನ್ನೂ ಈಡೇರಿಲ್ಲ. ಸದ್ಯಕ್ಕೆ ಮಾರನಕಟ್ಟೆ ಕೆರೆಯ ಒಂದು ಬದಿಯಲ್ಲಿ ಗುಬ್ಬಿ ಪೊಲೀಸ್ ಠಾಣೆ ಹಿಂಬದಿ ನಲವತ್ತು ಕುಟುಂಬ ತೀರಾ ಅಮಾನವೀಯ ಜೀವನ ನಡೆಸಿದ್ದಾರೆ. ಈ ಬಗ್ಗೆ ಸುದ್ದಿ ಬಂದ ನಂತರ ಅಲ್ಲಿನ ಕುಟುಂಬಗಳನ್ನು ಕಾದಿರಿಸಿದ್ದ ನಿವೇಶನದಲ್ಲಿ ತಾತ್ಕಾಲಿಕ ಶೆಡ್ ಮಾಡಿಕೊಂಡು ಸದ್ಯದ ಬದುಕು ನಡೆಸಲು ಅನುವು ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿವೇಶನದಲ್ಲಿ ಶೆಡ್ ಅರ್ಹ ಫಲಾನುಭವಿಗಳೇ ನಿರ್ಮಿಸಿಕೊಳ್ಳುತ್ತಾರೆ. ಅಗತ್ಯ ಮೂಲ ಸವಲತ್ತು ನೀರು ಮತ್ತು ಕರೆಂಟ್ ವ್ಯವಸ್ಥೆಗೆ ಸ್ಥಳೀಯ ನಲ್ಲೂರು ಗ್ರಾಮ ಪಂಚಾಯಿತಿ ಸಿದ್ಧವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿರುವ ನೈಜ ಹೋರಾಟಗಾರರ ವೇದಿಕೆಯ ಹೆಚ್ ಎಂ.ವೆಂಕಟೇಶ್, “ಯಾವುದೇ ಪ್ರಾಣಿಗಳು ವಾಸಿಸಲು ಯೋಗ್ಯವಲ್ಲದ ಜಾಗದಲ್ಲಿ ಸುಮಾರು 40 ವರ್ಷಗಳಿಂದಲೂ ತುಮಕೂರು ಜಿಲ್ಲಾಡಳಿತ ನಿರ್ಲಕ್ಷಿಸಿದ ಪರಿಣಾಮ ನೈಜ ಹೋರಾಟಗಾರರ ವೇದಿಕೆ ಮತ್ತು ತುಮಕೂರು ಕಾಳಜಿ ಫೌಂಡೇಶನ್‌ನ ಸಾಮಾಜಿಕ ಹೋರಾಟಗಾರರು ಅಲ್ಲಿ ವಾಸಿಸುವ ಜನರ ನರಕ ಯಾತನೆಯನ್ನು ನೋಡಿ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತದ ಗಮನಕ್ಕೆ ಮನವಿ ಸಲ್ಲಿಸಿ, ತಕ್ಷಣ ಒಂದು ವಾರದ ಒಳಗೆ ಇಲ್ಲಿ ವಾಸಿಸುವ ಮನುಷ್ಯರನ್ನು ಮನುಷ್ಯರಾಗಿ ನೋಡಿ ಎಂಬ ಎಚ್ಚರಿಕೆಯನ್ನು ಅಧಿಕಾರಿಗಳಿಗೆ ನೀಡಿದ್ದೆವು. ನಮ್ಮ ಹೋರಾಟದ ಪ್ರಾರ್ಥಮಿಕ ಹಂತದಲ್ಲಿಯೇ ಗುಬ್ಬಿ ತಹಶೀಲ್ದಾರ್ ಮತ್ತು ಪಟ್ಟಣ ಪಂಚಾಯಿತಿಯ ಚೀಫ್ ಆಫೀಸರ್ ಹಾಗೂ ಗುಬ್ಬಿ ಶಾಸಕರು ಅಲ್ಲಿನ ನಿವಾಸಿಗಳನ್ನು ಕರೆಸಿ ಸಾತೇನಹಳ್ಳಿಯಲ್ಲಿ ಮಂಜೂರಾದ ಜಮೀನಿಗೆ ತಕ್ಷಣ ಮೂಲಭೂತ ಸೌಕರ್ಯಗಳನ್ನು ಕೊಡಲು ಮುಂದಾಗಿರುವುದು ಅತ್ಯಂತ ಸಂತೋಷದಾಯಕ ಮತ್ತು ಶ್ಲಾಘನೀಯವಾಗಿದೆ” ಎಂದು ತಿಳಿಸಿದ್ದಾರೆ.

ಕೊನೆಗೂ ಪ್ರಾಣಿಗಳು ವಾಸಿಸಲು ಯೋಗ್ಯವಲ್ಲದ ಜಾಗದಲ್ಲಿ ಮನುಷ್ಯರು ವಾಸಿಸುತ್ತಿರುವುದನ್ನು ಗುರುತಿಸಿದ ಅಧಿಕಾರಿಗಳಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸುತ್ತೇವೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆ ಬುಡಕಟ್ಟು ಜನಾಂಗದವರಿಗೆ ಸೇರಬೇಕಾಗಿದ್ದ ಮೂಲಭೂತ ಸೌಕರ್ಯದ ಭಾಗವಾಗಿ ಟಾರ್ಪಲ್ ಗಳು ಇನ್ನಿತರ ಸೇವಾ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಕ್ಷಣ ತಲುಪಿಸುವ ಕಾರ್ಯವನ್ನು ಮಾಡಬೇಕು. ಮೂಲಭೂತ ಸೌಕರ್ಯಕ್ಕೆ ಕೊಡಲು ಮುಂದಾದ ತಾಲೂಕು ಆಡಳಿತವು ಅದನ್ನು ಸಮರ್ಪಕವಾಗಿ ಅವರಿಗೆ ತಲುಪಿಸಬೇಕು. ಅಲ್ಲಿನ ನಿರಾಶ್ರಿತರಿಗೆ ಆಶ್ರಯವಾಗಿ ಸರ್ಕಾರದ ಎಲ್ಲಾ ಸೇವಾ ಸೌಲಭ್ಯಗಳನ್ನು ತಲುಪಿಸಬೇಕು. ಇಲ್ಲದಿದ್ದಲ್ಲಿ ಹೋರಾಟವನ್ನು ಮುಂದುವರಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಭೇಟಿ ನೀಡಿದ್ದ ತಂಡದಲ್ಲಿ ಗುಬ್ಬಿ ತಾಪಂ ಇಓ ಶಿವಪ್ರಕಾಶ್, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ಪಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಕುಮಾರ್, ರೇಣುಕಾ ಪ್ರಸಾದ್, ನಲ್ಲೂರು ಪಿಡಿಓ ಯುವರಾಜ್ ಇತರರು ಇದ್ದರು.

ಹೋರಾಟ ಎಚ್ಚರಿಕೆ ನೀಡಿದ್ದ ಸಂಘ-ಸಂಸ್ಥೆಗಳು

ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣೆ ಹಿಂಭಾಗದಲ್ಲಿರುವ ಹಂದಿಜೋಗಿ ಮತ್ತು ಬುಡುಗ ಜನಾಂಗದ 42 ಕುಟುಂಬಗಳು ಯಾವುದೇ ಮೂಲಭೂತ ಸೌಕರ್ಯವಿಲ್ಲದೆ ನಾಗರಿಕ ಸಮಾಜ ಬದುಕಲು ಸಾಧ್ಯವಾಗದಿರುವಂತಹ ವಾತಾವರಣದಲ್ಲಿ ಬದುಕುತ್ತಿರುವುದನ್ನು ಕಣ್ಣಾರೆ ಕಂಡ ನೈಜ ಹೋರಾಟಗಾರರ ವೇದಿಕೆ ಬೆಂಗಳೂರು ಮತ್ತು ತುಮಕೂರು ಕಾಳಜಿ ಫೌಂಡೇಶನ್ ಪದಾಧಿಕಾರಿಗಳು ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಮನವಿ ಪತ್ರ ಸಲ್ಲಿಸಿತ್ತು.

ಈ ಕುಟುಂಬಗಳಿಗೆ ನಾಗರಿಕ ಸೇವಾ ಸೌಲಭ್ಯಗಳನ್ನು ತಲುಪಿಸಬೇಕು. ಇಲ್ಲದೇ ಇದ್ದಲ್ಲಿ ತಹಶೀಲ್ದಾರ್ ಅವರ ಕಚೇರಿಯ ಮುಂದೆ ಚಳುವಳಿಯನ್ನು ನಡೆಸುವ ಎಚ್ಚರಿಕೆಯನ್ನು ನೀಡಿದ್ದರು.

ಈ ಮನವಿ ಸಲ್ಲಿಸುವ ವೇಳೆ ನೈಜ ಹೋರಾಟಗಾರರ ವೇದಿಕೆಯ ಹೆಚ್ ಎಂ.ವೆಂಕಟೇಶ್, ಮಲ್ಲಿಕಾರ್ಜುನ್ ಎಲ್. ಎಸ್ ತಿಪ್ಪೇಸ್ವಾಮಿ ಸಿ.ಪಿ, ಮುದ್ದು ರಂಗಪ್ಪ ನರಸಿಂಹಮೂರ್ತಿ ಜಿ.ಏನ್ ಮತ್ತು ಹನುಮಂತ ರಾಯಪ್ಪ ಹಾಗೂ ಕಾಳಜಿ ಫೌಂಡೇಶನ್‌ನ ರಫೀಕ್, ಶಿವಕುಮಾರ್, ನಟರಾಜ್, ಪದ್ಮನಾಭ, ಗಣೇಶ್ ಮತ್ತು ಸತೀಶ್ ಹಾಜರಿದ್ದರು.

WhatsApp Image 2024 10 17 at 6.38.14 PM
WhatsApp Image 2024 10 17 at 6.38.18 PM 2
WhatsApp Image 2024 10 17 at 6.38.18 PM 1
WhatsApp Image 2024 10 17 at 6.38.20 PM
WhatsApp Image 2024 10 17 at 6.38.21 PM
WhatsApp Image 2024 10 17 at 6.38.18 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...