ಬೆಳಗಾವಿ | ಈ ದಿನ ವರದಿಗೆ ಸ್ಪಂದಿಸಿದ ತಾ.ಪಂ. ಅಧಿಕಾರಿಗಳು: ಸರ್ಕಾರಿ ಶಾಲೆಗೆ ಶೌಚಾಲಯ ನಿರ್ಮಾಣದ ಭರವಸೆ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೌಚಾಲಯವಿಲ್ಲ ಹಾಗೂ ಸರ್ಕಾರಿ ಪ್ರೌಢಶಾಲೆಯ ವಿಧ್ಯಾರ್ಥಿನಿಯರ ಶೌಚಾಲಯಕ್ಕೆ ಬಾಗಿಲು ಇಲ್ಲದಿರುವ ಕುರಿತಂತೆ ಸೆ.28ರಂದು ‘588 ವಿದ್ಯಾರ್ಥಿಗಳಿಗೆ ಶೂನ್ಯ ಶೌಚಾಲಯ’ ಎಂಬ ಶೀರ್ಷಿಕೆಯಲ್ಲಿ ಈ ದಿನ.ಕಾಮ್ ವರದಿ ಮಾಡಿತ್ತು.

ಈ ವರದಿಗೆ ಸ್ಪಂದಿಸಿರುವ ರಾಮದುರ್ಗ ತಾಲೂಕು ಪಂಚಾಯತ್ ಅಧಿಕಾರಿ ಪ್ರವೀಣ್ ಕುಮಾರ್ ಸಾಲಿ, “ಅಕ್ಟೋಬರ್ ರಜೆ ಮುಗಿಯುವುದರೊಳಗೆ ಶೌಚಾಲಯ ನಿರ್ಮಿಸಿಕೊಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

WhatsApp Image 2024 10 04 at 10.01.37 AM

ಸಾಲಾಪೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 207 ವಿದ್ಯಾರ್ಥಿನಿಯರು ಮತ್ತು 156 ವಿದ್ಯಾರ್ಥಿಗಳಿದ್ದು ಈ ಶಾಲೆಯಲ್ಲಿ ಶೌಚಾಲಯವೆ ಇಲ್ಲದ ಪರಿಣಾಮ ಶಾಲಾ ವಿದ್ಯಾರ್ಥಿನಿಯರು ಪಕ್ಕದ ಪ್ರೌಢ ಶಾಲೆಯ ಶೌಚಾಲಯವನ್ನು ಬಳಸುವ ಅನಿವಾರ್ಯತೆ ಬಂದಿದೆ. ಸರ್ಕಾರಿ ಪ್ರೌಢ ಶಾಲೆಯ ಶೌಚಾಲಯಲ್ಲಿ 99 ವಿದ್ಯಾರ್ಥಿನಿಯರು ಹಾಗೂ 126 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಈ ಶಾಲೆಯ ವಿದ್ಯಾರ್ಥಿನಿಯರು ಅರ್ಧಕ್ಕೆ ನಿಂತಿರುವ ಹಾಗೂ ಬಾಗಿಲುಗಳೇ ಇಲ್ಲದ ಶೌಚಾಲಯವನ್ನು ಉಪಯೋಗಿಸಲು ಮುಜುಗರಕ್ಕೆ ಈಡಾಗುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಮಸ್ಯೆ ಕುರಿತು ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಅಮೂಲ್ಯ ವಗ್ಗರ ಈ ದಿನ.ಕಾಮ್ ಜೊತೆಗೆ ಮಾತನಾಡಿ, “ನಮ್ಮ ಶಾಲೆಗೆ ಶೌಚಾಲಯವಿಲ್ಲ. ಇದರಿಂದ ನಮಗೆ ತೊಂದರೆಯಾಗುತ್ತಿದೆ. ನಾವು ಪ್ರೌಢ ಶಾಲಾ ಶೌಚಾಲಯಕ್ಕೆ ಹೋಗಬೇಕೆಂದರೆ ಮುಜುಗರ ಅನುಭವಿಸುತ್ತೇವೆ. ಶೌಚಾಲಯ ಕಟ್ಟಿಸಿ” ಎಂದು ಮನವಿ ಮಾಡಿದರು.

ವಿದ್ಯಾರ್ಥಿನಿ ಲಕ್ಷ್ಮೀ ಬರಿಗಾಲ ಮಾತನಾಡಿ, ನಾವು ಹೋಗುವ ಹೈಸ್ಕೂಲ್ ಶಾಲೆಯ ಶೌಚಾಲಯ, ಅಲ್ಲಿಯವರಿಗೇ ಸರಿಯಾಗಿ ಹೊಂದುವುದಿಲ್ಲ. ಅದನ್ನೇ ಅರ್ಧಂಬರ್ಧ ಕಟ್ಟಿದ್ದು ಬಾಗಿಲು ಇಲ್ಲ. ಅಲ್ಲಿಯ ಶಿಕ್ಷಕಿಯರಿಗೂ ಸಹ ಮುಜುಗರ ಉಂಟಾಗುತ್ತಿದೆ ಎಂದು ತಿಳಿಸಿದ್ದರು.

“ನಮಗೆ ಶೌಚಾಲಯವಿಲ್ಲದೆ ತೊಂದರೆ ಆಗ್ತಿದೆರಿ. ನಾವು ಹೈಸ್ಕೂಲ್ ಅಕ್ಕಾಗೊಳ ಶಾಲೆಗೆ ಹೋಗ್ತಿವಿ. ಅಲ್ಲಿ ಮುಳ್ಳುಕಂಟಿ ಅದಾವ್ರಿ. ಈ ಶಾಲಿಗಿ ಬಂದು ಎರಡು ವರ್ಷ ಆದ್ರೂ ಶೌಚಾಲಯ ಇಲ್ಲ” ಎಂದು ವಿದ್ಯಾರ್ಥಿನಿ ಸೌಜನ್ಯ ಬೆಳವಲದ ವಿದ್ಯಾರ್ಥಿನಿ ಈ ದಿನ.ಕಾಮ್ಗೆ ತಿಳಿಸಿದ್ದರು.

ಇದನ್ನು ಓದಿದ್ದೀರಾ? ಬೆಳಗಾವಿ | ಅಕ್ಟೋಬರ್‌ 7, 9ರಂದು ಎರಡು ಕಂತಿನ ʼಗೃಹಲಕ್ಷ್ಮಿʼ ಹಣ ಜಮೆ : ಹೆಬ್ಬಾಳ್ಕರ್

ಈ ಕುರಿತು ಈ ದಿನ.ಕಾಮ್ ರಾಮದುರ್ಗ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ‌.ಬಳಿಗಾರ ಮತ್ತು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣಕುಮಾರ ಸಾಲಿ ಇವರ ಗಮನಕ್ಕೆ ತಂದಿತ್ತು. ಅಕ್ಟೋಬರ್ ರಜೆ ಮುಗಿಯುವುದರೊಳಗೆ ಸಾಲಾಪೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶೌಚಾಲಯ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದಾರೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...